Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲ ವಸೂಲಿಗೆ ಎಲ್ಲಾ ಕಾನೂನುಕ್ರಮ...

ಸಾಲ ವಸೂಲಿಗೆ ಎಲ್ಲಾ ಕಾನೂನುಕ್ರಮ ಕೈಗೊಳ್ಳುತ್ತೇವೆ : ನೀರವ್ ಮೋದಿಗೆ ಪಿಎನ್‌ಬಿ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ22 Feb 2018 8:27 PM IST
share
ಸಾಲ ವಸೂಲಿಗೆ ಎಲ್ಲಾ ಕಾನೂನುಕ್ರಮ ಕೈಗೊಳ್ಳುತ್ತೇವೆ : ನೀರವ್ ಮೋದಿಗೆ ಪಿಎನ್‌ಬಿ ಪ್ರತಿಕ್ರಿಯೆ

ಹೊಸದಿಲ್ಲಿ, ಫೆ.22: ಸಾರ್ವಜನಿಕವಾಗಿ ಸಾಲದ ಕುರಿತು ಹೇಳಿಕೆ ನೀಡುವ ಮೂಲಕ ಸಾಲ ಮರುಪಾವತಿಯ ಎಲ್ಲಾ ಸಾಧ್ಯತೆಗಳನ್ನೂ ಪಿಎನ್‌ಬಿ ಬ್ಯಾಂಕ್ ಮುಚ್ಚಿದೆ ಎಂಬ ನೀರವ್ ಮೋದಿಯ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪಿಎನ್‌ಬಿ ಬ್ಯಾಂಕ್, ಸಾಲ ವಸೂಲಾತಿಗೆ ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

 ನಮಗೆ ಬರಬೇಕಿರುವ ಸಾಲವನ್ನು ಕಾನೂನಿನ ಪ್ರಕಾರ ವಸೂಲು ಮಾಡಲು ಲಭ್ಯವಿರುವ ಎಲ್ಲಾ ಕ್ರಮಗಳನ್ನೂ ಜರಗಿಸಲಾಗುವುದು ಎಂದು ಸ್ಟಾಕ್ ಎಕ್ಸ್‌ಚೇಂಜ್‌ಗೆ ನೀಡಿರುವ ಸ್ಪಷ್ಟನೆಯಲ್ಲಿ ಬ್ಯಾಂಕ್ ತಿಳಿಸಿದೆ. ಅಲ್ಲದೆ ನೀರವ್‌ಮೋದಿಗೆ ಬರೆದಿರುವ ಪ್ರತ್ಯೇಕ ಪತ್ರದಲ್ಲಿ, ಸಾಲ ಮರುಪಾವತಿ ಮಾಡುವ ಬಗ್ಗೆ ವಾಸ್ತವಿಕ ಹಾಗೂ ಅನುಷ್ಠಾನಸಾಧ್ಯ ಯೋಜನೆ ನಿಮ್ಮಲ್ಲಿದ್ದರೆ ಆ ಬಗ್ಗೆ ತಿಳಿಸಿ ಎಂದು ಸೂಚಿಸಿದೆ.

 ಈ ಮಧ್ಯೆ, ಮೋದಿಗೆ ಮತ್ತೊಂದು ಪತ್ರ ಬರೆದಿರುವ ಪಿಎನ್‌ಬಿಯ ಅಂತರಾಷ್ಟ್ರೀಯ ಬ್ಯಾಂಕಿಂಗ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಅಶ್ವಿನಿ ವತ್ಸ್, ಮೋದಿ ಒಡೆತನದ ಸಂಸ್ಥೆಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ಅಕ್ರಮವಾಗಿ ವಾಗ್ದಾನ ಪತ್ರಗಳನ್ನು ಪಡೆದಿವೆ ಎಂದು ಹೇಳಿದ್ದಾರೆ. ‘ಕೆಲವು ಬ್ಯಾಂಕ್ ಅಧಿಕಾರಿಗಳಿಂದ ಅಕ್ರಮವಾಗಿ ಹಾಗೂ ಅನಧಿಕೃತ ರೀತಿಯಲ್ಲಿ ವಾಗ್ದಾನ(ಮುಚ್ಚಳಿಕೆ) ಪತ್ರವನ್ನು ನೀವು ಪಡೆದಿದ್ದೀರಿ. ಇಂತಹ ವ್ಯವಸ್ಥೆಯನ್ನು ನಿಮ್ಮ ಸಂಸ್ಥೆಗಳಿಗೆ ಬ್ಯಾಂಕ್ ನೀಡಿಲ್ಲ. ಈ ಅಕ್ರಮ ಚಟುವಟಿಕೆಗಳ ಮಾಹಿತಿ ದೊರೆತ ತಕ್ಷಣ , ‘ಫೆಮ’ ಕಾಯ್ದೆ ಉಲ್ಲಂಘಿಸಿರುವ ಕುರಿತು ಸಂಬಂಧಿತ ಅಧಿಕಾರಿ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡುವುದು ಬ್ಯಾಂಕಿನ ಕರ್ತವ್ಯವಾಗಿದೆ ಮತ್ತು ಬ್ಯಾಂಕ್ ತನ್ನ ಕರ್ತವ್ಯ ನಿಭಾಯಿಸಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಸಾಲ ಮರುಪಾವತಿಯ ಬಗ್ಗೆ ನೀರವ್ ಮೋದಿಯಿಂದ ಕೆಲವು ಅಸ್ಪಷ್ಟ ಆಶ್ವಾಸನೆ ದೊರೆತಿದೆ ಎಂದು ಕಳೆದ ಗುರುವಾರ ಪಿಎನ್‌ಬಿಯ ಉನ್ನತ ಆಡಳಿತ ಮಂಡಳಿ ತಿಳಿಸಿತ್ತು. ಮೋದಿ ವೈಯಕ್ತಿಕವಾಗಿ ತಮ್ಮಿಂದಿಗೆ ಮಾತನಾಡಿಲ್ಲ. ಅವರು ಪ್ರಸ್ತಾವಿಸಿರುವ ಮರುಪಾವತಿ ಯೋಜನೆಯ ಕುರಿತು ಲಿಖಿತವಾಗಿ ತಿಳಿಸಿದಲ್ಲಿ ಇದರಲ್ಲಿ ವಾಸ್ತವಿಕ ಅಂಶಗಳಿವೆಯೇ ಎಂಬ ಕುರಿತು ಪರಿಶೀಲಿಸುವುದಾಗಿ ಪಿಎನ್‌ಬಿಯ ಆಡಳಿತ ನಿರ್ದೇಶಕ ಹಾಗೂ ಸಿಇಒ ಸುನಿಲ್ ಮೆಹ್ತಾ ತಿಳಿಸಿದ್ದರು.

   ತಾನು ಸಾಲದ ಮರುಪಾವತಿಯ ಪ್ರಸ್ತಾವ ಮಾಡಿದ್ದರೂ, ಸಾಲವನ್ನು ತಕ್ಷಣ ಹಿಂಪಡೆಯಲು ಬ್ಯಾಂಕ್ ತೋರಿದ ಆತುರದ ವರ್ತನೆ ತನ್ನ ಉದ್ಯಮವನ್ನು ನಾಶಮಾಡಿದೆ ಹಾಗೂ ಸಂದಾಯವಾಗಬೇಕಿರುವ ಸಾಲವನ್ನು ವಸೂಲು ಮಾಡುವಲ್ಲಿ ಬ್ಯಾಂಕ್ ಹೊಂದಿರುವ ಅಧಿಕಾರವನ್ನು ಸೀಮಿತಗೊಳಿಸಿದೆ ಎಂದು ಮೋದಿ ಪತ್ರದಲ್ಲಿ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X