ಫೆ.24: ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಉದ್ಘಾಟನೆ
ಉಡುಪಿ, ಫೆ.22: ಕರ್ನಾಟಕ ಅರಣ್ಯ ಇಲಾಖೆಯ ಕುಂದಾಪುರ ವಿಭಾಗ ಉಡುಪಿ ವಲಯದ ವತಿಯಿಂದ ನಿರ್ಮಿಸಲಾಗಿರುವ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮ ಫೆ.24ರಂದು ಬೆಳಗ್ಗೆ 10:30ಕ್ಕೆ 80 ಬಡಗಬೆಟ್ಟುನ ಟ್ಯಾಪ್ಮಿ ಮುಖ್ಯದ್ವಾರದ ಬಳಿ ನಡೆಯಲಿದೆ.
ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಬಿ.ರಮಾನಾಥ ರೈ ಉದ್ಯಾನವನವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





