Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರ...

‘ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ’ಕ್ಕೆ ವಿಧಾನಸಭೆ ಅಸ್ತು

ವಾರ್ತಾಭಾರತಿವಾರ್ತಾಭಾರತಿ22 Feb 2018 10:19 PM IST
share
‘ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ’ಕ್ಕೆ ವಿಧಾನಸಭೆ ಅಸ್ತು

ಬೆಂಗಳೂರು, ಫೆ. 22: ಪಶ್ಚಿಮ ಘಟ್ಟಗಳ ಮತ್ತು ಕರಾವಳಿಯ ಜೀವ ವೈವಿಧ್ಯತೆ, ಪರಂಪರೆ ಮತ್ತು ಸಂಸ್ಕೃತಿಯ ಸಂರಕ್ಷಣೆಗಾಗಿ ಮತು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆ ಉತ್ತೇಜಕ ಪರಿಸರ ಸೃಷ್ಟಿಸಲು ಹಾಗೂ ಪ್ರವಾಸೋದ್ಯಮ ಪ್ರೋತ್ಸಾಹ ಮಾಡಲು ಒಂದು ಪ್ರಾಧಿಕಾರ ಸ್ಥಾಪಿಸಲು ಅವಕಾಶ ಕಲ್ಪಿಸುವ ‘ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕ-2018’ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು.

ಗುರುವಾರ ವಿಧಾನಸಭೆಯಲ್ಲಿ ಯೋಜನೆ, ಸಾಂಖ್ಯಿಕ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಮ್ ವಿಧೇಯಕವನ್ನು ಮಂಡಿಸಿ, ಮಾನವ ಕಲ್ಯಾಣಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಜನಪ್ರಿಯಗೊಳಿಸುವುದು, ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಉತ್ತಮವಾದ ಶೈಕ್ಷಣಿಕ ಸಂಪನ್ಮೂಲ ಕೇಂದ್ರವನ್ನು ಅಭಿವೃದ್ಧಿ ಪಡಿಸುವುದು.

ಪರಿಸರದ ವೈಜ್ಞಾನಿಕ ಮನೋಭಾವದ ಅರಿವು-ಅಭಿವೃದ್ಧಿ ಮತ್ತು ಜನಸಾಮಾನ್ಯರಲ್ಲಿ ಯೋಚನೆ ಮಾಡುವುದನ್ನು ಉತ್ತೇಜಿಸುವುದು. ಜೀವ ವೈವಿಧ್ಯತೆಯ ಸಂರಕ್ಷಣೆ, ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ಸೌಲಭ್ಯ ಕಲ್ಪಿಸುವುದು, ಪಶ್ಚಿಮ ಘಟ್ಟ ಮತ್ತು ಕರಾವಳಿಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಿಸುವುದು, ಪರಿಸರ ಪ್ರವಾಸೋದ್ಯಮ ಉತ್ತೇಜನ, ಮಕ್ಕಳು ಮತ್ತು ಯುವಕರಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಗುರುತಿಸುವುದು.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಸೃಜನಾತ್ಮಕ ಸ್ಫೂರ್ತಿ ತುಂಬುವುದು, ಖಗೋಳ ಶಾಸ್ತ್ರ ಆಧಾರಿತ ಶಿಕ್ಷಣ ಮತ್ತು ಬಾಹ್ಯಕಾಶ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ವಿಭಾಗಗಳಲ್ಲಿ ಆಸಕ್ತಿ ಹುಟ್ಟಿಸುವುದು, ಪ್ರವಾಸೋದ್ಯಮದ ಮೂಲಕ ವಿಜ್ಞಾನ ಮತ್ತು ವಿಜ್ಞಾನದ ಮೂಲಕ ಪ್ರವಾಸೋದ್ಯಮದ ವಿಷಯದ ಮೂಲಕ ಪಿಳಿಕುಳದ ವಿವಿಧ ಅಂಶಗಳನ್ನು ಅನ್ವೇಷಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಣೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1996ರಲ್ಲಿ ಪಿಳಿಕುಳದಲ್ಲಿ ನಿಸರ್ಗಧಾಮ ಸ್ಥಾಪಿಸಿದ್ದು, ಸುಮಾರು 356 ಎಕರೆ ಪ್ರದೇಶದಷ್ಟು ವಿಸ್ತೀರ್ಣವಿದೆ. 200 ಕೋಟಿ ರೂ.ಗಳಷ್ಟು ಅನುದಾನ ನೀಡಲಾಗಿದ್ದು, ವಾರ್ಷಿಕ ಆರು ಲಕ್ಷ ಮಂದಿ ಪ್ರವಾಸಿಗರು ವೀಕ್ಷಿಸುತ್ತಿದ್ದಾರೆ. ರಾಜ್ಯ ಸರಕಾರ ಈಗಾಗಲೇ 40 ಕೋಟಿ ರೂ.ವೆಚ್ಚದಲಿ ಆಧುನಿಕ ತಾರಾಲಯ ಲೋಕಾರ್ಪಣೆಗೆ ಸಿದ್ದವಾಗಿದೆ. ವಾರ್ಷಿಕ 6 ಕೋಟಿ ರೂ.ವೆಚ್ಚವಾಗುತ್ತಿದ್ದು, ಪ್ರವಾಸಿಗರಿಂದಲೇ 3.42 ಕೋಟಿ ರೂ.ಶುಲ್ಕ ವಸೂಲಾಗುತ್ತಿದೆ.

ಪಿಳಿಕುಳ ನಿಸರ್ಗಧಾಮಕ್ಕೆ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶ ಮತ್ತು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ತರಲಾಗಿದೆ ಎಂದು ಅವರು ತಿಳಿಸಿದರು. ಆ ಬಳಿಕ ಸ್ಪೀಕರ್ ಪೀಠದಲ್ಲಿದ್ದ ಉಪಸಭಾಧ್ಯಕ್ಷ ಶಿವಶಂಕರ ರೆಡ್ಡಿ ವಿಧೇಯಕವನ್ನು ಮತಕ್ಕೆ ಹಾಕಿ, ವಿಧೇಯಕಕ್ಕೆ ಸರ್ವಾನುಮತದ ಅಂಗೀಕಾರ ದೊರಕಿಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X