Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1 ಲಕ್ಷ ರೊಹಿಂಗ್ಯಾರಿಗೆ ಬಂಗಾಳ ಕೊಲ್ಲಿ...

1 ಲಕ್ಷ ರೊಹಿಂಗ್ಯಾರಿಗೆ ಬಂಗಾಳ ಕೊಲ್ಲಿ ದ್ವೀಪದಲ್ಲಿ ನೆಲೆ

ಭರದಿಂದ ಸಾಗುತ್ತಿದೆ ನಿರ್ಮಾಣ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ22 Feb 2018 10:44 PM IST
share
1 ಲಕ್ಷ ರೊಹಿಂಗ್ಯಾರಿಗೆ ಬಂಗಾಳ ಕೊಲ್ಲಿ ದ್ವೀಪದಲ್ಲಿ ನೆಲೆ

ಢಾಕಾ (ಬಾಂಗ್ಲಾದೇಶ), ಫೆ. 22: ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಪಲಾಯನಗೈದಿರುವ ರೊಹಿಂಗ್ಯಾ ಮುಸ್ಲಿಮರ ಪೈಕಿ ಸುಮಾರು 1 ಲಕ್ಷ ಮಂದಿಗೆ ಆಶ್ರಯ ಕಲ್ಪಿಸುವುದಕ್ಕಾಗಿ ಬಂಗಾಳ ಕೊಲ್ಲಿಯ ಜನವಸತಿರಹಿತ ದ್ವೀಪ ‘ಭಸನ್ ಚಾರ್’ನ್ನು ವಾಸಯೋಗ್ಯವನ್ನಾಗಿ ಮಾಡಲಾಗುತ್ತಿದೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಮ್ಯಾನ್ಮಾರ್‌ನಲ್ಲಿ ಹಿಂಸೆ ಸ್ಫೋಟಗೊಂಡ ಬಳಿಕ ಸೇನೆಯ ದಮನ ಕಾರ್ಯಾಚರಣೆಗೆ ಬೆದರಿ ಬಾಂಗ್ಲಾದೇಶಕ್ಕೆ ಪಲಾಯನಗೈದಿರುವ ಸುಮಾರು 7 ಲಕ್ಷ ರೊಹಿಂಗ್ಯಾ ನಿರಾಶ್ರಿತರು ಕಾಕ್ಸ್‌ಬಝಾರ್‌ನಲ್ಲಿರುವ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

 ಅಲ್ಲಿನ ಶಿಬಿರಗಳ ಮೇಲಿನ ಒತ್ತಡವನ್ನು ತಗ್ಗಿಸುವುದಕ್ಕಾಗಿ ‘ತಾತ್ಕಾಲಿಕ ನೆಲೆಯಲ್ಲಿ’ ಸುಮಾರು 1 ಲಕ್ಷ ನಿರಾಶ್ರಿತರನ್ನು ಈ ದ್ವೀಪದಲ್ಲಿ ಇರಿಸಲಾಗುವುದು ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೋಮವಾರ ಹೇಳಿದ್ದಾರೆ.

ಆದರೆ, ಒಮ್ಮೆ ದ್ವೀಪಕ್ಕೆ ಹೋದ ಬಳಿಕ, ಅವರು ಮ್ಯಾನ್ಮಾರ್‌ಗೆ ವಾಪಸ್ ಹೋಗುವುದಾದರೆ ಅಥವಾ ಅವರಿಗೆ ಆಶ್ರಯ ನೀಡಲು ಮೂರನೆ ದೇಶವೊಂದು ಮುಂದೆ ಬಂದರೆ ಮಾತ್ರ ಅವರು ದ್ವೀಪದಿಂದ ಹೊರಗೆ ಬರಬಹುದು ಎಂಬುದಾಗಿ ಹಸೀನಾರ ಸಲಹೆಗಾರರೊಬ್ಬರು ‘ರಾಯ್ಟರ್ಸ್’ಗೆ ಹೇಳಿದ್ದಾರೆ.

 ‘‘ಅದು ಯಾತನಾ ಶಿಬಿರ (ಕಾನ್ಸಂಟ್ರೇಶನ್ ಕ್ಯಾಂಪ್)ಗಳಲ್ಲ. ಆದರೆ, ಕೆಲವೊಂದು ನಿರ್ಬಂಧಗಳಿರಬಹುದು. ನಾವು ಅವರಿಗೆ ಬಾಂಗ್ಲಾದೇಶಿ ಪಾಸ್‌ಪೋರ್ಟ್ ಅಥವಾ ಗುರುತು ಚೀಟಿಗಳನ್ನು ನೀಡುವುದಿಲ್ಲ’’ ಎಂದು ಸಲಹೆಗಾರ ಎಚ್.ಟಿ. ಇಮಾಮ್ ನುಡಿದರು.

ದ್ವೀಪದಲ್ಲಿ ಪೊಲೀಸ್ ಠಾಣೆಯೊಂದನ್ನು ನಿರ್ಮಿಸಲಾಗುತ್ತದೆ ಹಾಗೂ ಅಲ್ಲಿ 40-50 ಸಶಸ್ತ್ರ ಪೊಲೀಸರು ಇರುತ್ತಾರೆ ಎಂದು ತಿಳಿಸಿದರು.

ಭರದಿಂದ ನಡೆಯುತ್ತಿದೆ ಕಾಮಗಾರಿ

ಮುಂಗಾರು ಮಳೆ ಆರಂಭಕ್ಕೆ ಮುನ್ನ ನಿರಾಶ್ರಿತರನ್ನು ದ್ವೀಪಕ್ಕೆ ಕರೆತರಲು ಸಾಧ್ಯವಾಗುವಂತೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಬ್ರಿಟಿಶ್ ಮತ್ತು ಚೀನೀ ಇಂಜಿನಿಯರ್‌ಗಳು ದ್ವೀಪವನ್ನು ವಾಸಯೋಗ್ಯ ಮಾಡಲು ನೆರವು ನೀಡುತ್ತಿದ್ದಾರೆ.

ಒಂದು ವರ್ಷದ ಹಿಂದೆ ಅಲ್ಲಿ ರಸ್ತೆಗಳು, ಕಟ್ಟಡಗಳು, ಜನರಿರಲಿಲ್ಲ.

ಫೆಬ್ರವರಿ 14ರಂದು ‘ರಾಯ್ಟರ್ಸ್’ ಮತ್ತೆ ಭೇಟಿ ನೀಡಿದಾಗ ನೂರಾರು ಕಾರ್ಮಿಕರು ಹಡಗುಗಳಿಂದ ಇಟ್ಟಿಗೆಗಳು ಮತ್ತು ಮರಳನ್ನು ಸಾಗಿಸುತ್ತಿದ್ದರು. ಅಲ್ಲಿ ಈಗ ರಸ್ತೆಗಳು ಮತ್ತು ಹೆಲಿಪ್ಯಾಡ್ ನಿರ್ಮಾಣಗೊಂಡಿವೆ.

ಪದೇ ಪದೇ ಪ್ರವಾಹ ಕಾಡುವ ದ್ವೀಪ

ಈ ತೇಲುವ ದ್ವೀಪವು 20 ವರ್ಷಗಳ ಹಿಂದೆಯಷ್ಟೇ ಹೂಳಿನಿಂದಾಗಿ ಸೃಷ್ಟಿಯಾಗಿದೆ. ಅದು ಬಾಂಗ್ಲಾದೇಶದ ಪ್ರಧಾನ ನೆಲದಿಂದ ಸುಮಾರು 30 ಕಿ.ಮೀ. ದೂರವಿದೆ.

 ಅಲ್ಲಿ ಜೂನ್-ಸೆಪ್ಟಂಬರ್ ಅವಧಿಯಲ್ಲಿ ಪದೇ ಪದೇ ಪ್ರವಾಹ ಸಂಭವಿಸುತ್ತದೆ. ಸಮೀಪದ ಜಲಪ್ರದೇಶದಲ್ಲಿ ಹಣಕ್ಕಾಗಿ ಮೀನುಗಾರರನ್ನು ಅಪಹರಿಸಲು ಕಡಲ್ಗಳ್ಳರು ಸುತ್ತುತ್ತಿರುತ್ತಾರೆ ಎಂದು ಸಮೀಪದ ದ್ವೀಪಗಳ ನಿವಾಸಿಗಳು ಹೇಳುತ್ತಾರೆ.

ಈ ಹೂಳು ದ್ವೀಪವು ಪದೇ ಪದೇ ಚಂಡಮಾರುತಕ್ಕೆ ಗುರಿಯಾಗುತ್ತದೆ ಹಾಗೂ ಸಾವಿರಾರು ಜನರ ಬದುಕಿಗೆ ಇದು ಬೆಂಬಲ ನೀಡದು ಎಂದು ನೆರವು ಕಾರ್ಯಕರ್ತರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X