Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಐಎನಲ್ಲಿ ಅವ್ಯವಹಾರ, ಲೋಕಾಯುಕ್ತಕ್ಕೆ...

ಬಿಐಎನಲ್ಲಿ ಅವ್ಯವಹಾರ, ಲೋಕಾಯುಕ್ತಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ22 Feb 2018 11:35 PM IST
share

ಬೆಂಗಳೂರು, ಫೆ.22: ಬೊಮ್ಮಸಂದ್ರ ಇಂಡಸ್ಟ್ರೀಸ್ ಅಸೋಸಿಯೇಶನ್(ಬಿಐಎ)ನಲ್ಲಿ ನಡೆದಿರುವ ಅವ್ಯವಹಾರ ಕುರಿತು ದೂರು ನೀಡಿದ್ದರೂ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಹೆಬ್ಬಗೋಡಿ ಪೊಲೀಸರು ಹಾಗೂ ಸಹಕಾರಿ ಸಂಘಗಳ ಉಪ ನೋಂದಣಾಧಿಕಾರಿ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದೇನೆ ಎಂದು ಬಿಐಎ ಅಧ್ಯಕ್ಷ ದಯಾನಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಐಎ ಸದಸ್ಯರಾಗಿದ್ದ ನರೇಂದ್ರ ಕುಮಾರ ಹಾಗೂ ಪ್ರಸಾದ್ ಎಂಬುವರು ಅಸೋಸಿಯೇಶನ್‌ಗೆ ಸೇರಿದ 1 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬೊಮ್ಮಸಂದ್ರ ಇಂಡಸ್ಟ್ರೀಸ್ ಅಸೋಸಿಯೇಶನ್‌ಗೆ ಎರಡು ವರ್ಷಗಳಿಗೊಮ್ಮೆ ಚುನಾವಣೆ ನಡೆಸಲಾಗುತ್ತದೆ. 2016 ರಲ್ಲಿ ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೆ. ಅಸೋಸಿಯೇಶನ್‌ನ ಕೆಲ ಅಭಿವೃದ್ಧಿ ಕಾರ್ಯಗಳಿಗಾಗಿ ಕೆನರಾ ಬ್ಯಾಂಕ್ ಖಾತೆಯಲ್ಲಿ 2.5 ಕೋಟಿ ರೂ. ಠೇವಣಿ ಇಡಲಾಗಿತ್ತು. ಆದರೆ, ಅಸೋಸಿಯೇಶನ್ ಸದಸ್ಯ ನರೇಂದ್ರಕುಮಾರ್ ಮತ್ತು ಪ್ರಸಾದ್ ಎಂಬುವರು ಈ ಹಣವನ್ನು ದೋಚಲು ಸಂಚು ರೂಪಿಸಿದ್ದರು.

ಸದಸ್ಯದಲ್ಲೇ ಅಸೋಸಿಯೇಶನ್ ಚುನಾವಣೆ ನಡೆಯುವುದಿಲ್ಲ ಎಂಬುದನ್ನು ಅರಿತು ಉಪ ನೋಂದಣಾಧಿಕಾರಿ ಡಾ.ಅಶ್ವತ್ಥ್‌ನಾರಾಯಣ ಅವರಿಗೆ ಹಣದ ಆಮಿಷವೊಡ್ಡಿ ಅಸೋಸಿಯೇಶನ್ ಚುನಾವಣೆ ನಡೆಸುವುದಾಗಿ ನೋಟಿಸ್ ಜಾರಿ ಮಾಡಿಸಿದ್ದರು ಎಂದು ದೂರಿದರು.
ಕೆಲ ದಿನಗಳ ಬಳಿಕ ಈ ವಿಚಾರ ನನ್ನ ಗಮನಕ್ಕೆ ಬಂದಿತ್ತು. ತಕ್ಷಣ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಅಸೋಸಿಯೇಶನ್‌ಗೆ ಯಾವುದೇ ಚುನಾವಣೆ ನಡೆಸದಂತೆ ತಡೆಯಾಜ್ಞೆ ತರಲಾಗಿತ್ತು. ಇದಾದ ಬಳಿಕ ನರೇಂದ್ರಕುಮಾರ್ ಮತ್ತು ಪ್ರಸಾದ್ ಕೆಲ ದಾಖಲೆಗಳಿಗೆ ನಕಲಿ ಸಹಿ ಮಾಡಿ 2017ರ ಎಪ್ರಿಲ್‌ನಲ್ಲಿ ಮತ್ತೆ ಅಸೋಸಿಯೇಶನ್ ಚುನಾವಣೆ ನಡೆಸಲು ಪ್ರಯತ್ನಿಸಿದ್ದರು. ಇದಕ್ಕೂ ನ್ಯಾಯಾಲಯ ತಡೆ ನೀಡಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ ಎಂದು ತಿಳಿಸಿದರು.

ಅಲ್ಲದೇ ನರೇಂದ್ರಕುಮಾರ್ ಮತ್ತು ಪ್ರಸಾದ್ ಅಸೋಸಿಯೇಶನ್‌ನ ಮುಖ್ಯಸ್ಥರಾಗಿರುವುದಾಗಿ ನಕಲಿ ದಾಖಲೆ ತಯಾರಿಸಿ ರಿಜಿಸ್ಟ್ರಾರ್ ಅಶ್ವತ್‌ನಾರಾಯಣ್‌ಗೆ ನೀಡಿದ್ದರು. ಪ್ರಕರಣವಿನ್ನೂ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ ಎಂದು ತಿಳಿದಿದ್ದರೂ ಹಣದ ಆಮಿಷಕ್ಕೊಳಗಾಗಿ ರಿಜಿಸ್ಟ್ರಾರ್ ಈ ಇಬ್ಬರನ್ನು ಅಸೋಸಿಯೇಶನ್ ಮುಖ್ಯಸ್ಥರು ಎಂಬುದನ್ನು ದೃಢಪಡಿಸಿ ದಾಖಲೆ ನೀಡಿದ್ದರು. ಈ ದಾಖಲೆಗಳನ್ನು ಬೊಮ್ಮಸಂದ್ರದಲ್ಲಿರುವ ಕೆನರಾ ಬ್ಯಾಂಕ್‌ಗೆ ನೀಡಿದ್ದ ಆರೋಪಿಗಳು ಅಸೋಸಿಯೇಶನ್ ಚುನಾವಣೆ ನಡೆದು ಅಧ್ಯಕ್ಷರು ಮತ್ತು ಸದಸ್ಯರು ಬದಲಾಗಿದ್ದಾರೆಂದು ನಕಲಿ ಪಟ್ಟಿ ತೋರಿಸಿ, ಬ್ಯಾಂಕ್ ಖಾತೆಯಲ್ಲಿದ್ದ 1 ಕೋಟಿ ರೂ. ಹಣ ಡ್ರಾ ಮಾಡಿಕೊಂಡು ಬೇನಾಮಿ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X