Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಲಭೆ ಸೃಷ್ಟಿಸುವುದಕ್ಕಾಗಿ ಅಮಿತ್ ಶಾ...

ಗಲಭೆ ಸೃಷ್ಟಿಸುವುದಕ್ಕಾಗಿ ಅಮಿತ್ ಶಾ ರಾಜ್ಯ ಪ್ರವಾಸ: ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ23 Feb 2018 6:17 PM IST
share
ಗಲಭೆ ಸೃಷ್ಟಿಸುವುದಕ್ಕಾಗಿ ಅಮಿತ್ ಶಾ ರಾಜ್ಯ ಪ್ರವಾಸ: ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.23: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡಿ ಜನರ ನಡುವೆ ದ್ವೇಷ ಬಿತ್ತುವ ಮೂಲಕ ಗಲಭೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದರು.

ನಗರದಲ್ಲಿಂದು ಲಾಲ್‌ಬಾಗ್‌ನ ಗಾಜಿನ ಮನೆ ಬಳಿ ಹಾಪ್‌ಕಾಮ್ಸ್ ಆಯೋಜಿಸಿದ್ದ ದ್ರಾಕ್ಷಿ ಮತ್ತು ಕಲ್ಲಂಗಡಿ ಹಣ್ಣು ಮಾರಾಟ ಮೇಳಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ, ರಾಜ್ಯದಲ್ಲಿ ಪುಂಡಾಟಿಕೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರಲ್ಲಿ ಅಮಿತ್ ಶಾ ಅವರ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಇರುವ ಹಿನ್ನೆಲೆಯಲ್ಲಿ ಅಪರಾಧ ಪ್ರಕರಣಗಳನ್ನು ಹೆಚ್ಚಿಸಲು ಕೆಲವರು ಸಂಚು ಹೂಡುತ್ತಿದ್ದಾರೆ. ಅದಲ್ಲದೆ, ಗಲಭೆಗಳು ನಡೆಯುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ನಾಯಕರಿಗೆ ಸೂಚಿಸಿರಬಹುದು. ಈ ಕುರಿತು ಮೈಸೂರು ಸಂಸದ ಪ್ರತಾಪ್ ಸಿಂಹ ಕೆಲವು ದಿನಗಳ ಹಿಂದೆಯೆ ವಿಡಿಯೋ ಒಂದರಲ್ಲಿ ಹೇಳಿದ್ದಾರೆ. ಹೀಗಾಗಿ ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವುದು ಗಲಭೆ ಸೃಷ್ಟಿಸುವುದಕ್ಕಾಗಿಯೆ ಎಂಬ ಅನುಮಾನ ಕಾಡುತ್ತಿದೆ ಎಂದು ತಿಳಿಸಿದರು.

ಶಾಂತಿನಗರ ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ಪ್ರಕರಣದಲ್ಲಿ ನಾವು ಪಕ್ಷಾತೀತವಾಗಿ ಕಾನೂನು ಕ್ರಮ ಕೈಗೊಂಡಿದ್ದೇವೆ. ಆದರೆ, ರಾಜ್ಯದ ಬಿಜೆಪಿ ನಾಯಕರು ನಡೆಸಿರುವ ಪುಂಡಾಟಿಕೆ ಬಗ್ಗೆ ಇದುವರೆಗೂ ಆ ಪಕ್ಷದ ನಾಯಕರು ಎಲ್ಲಿಯೂ ಖಂಡಿಸಿಲ್ಲ. ತಪ್ಪು ಯಾರೇ ಮಾಡಿದರೂ ಖಂಡಿಸಬೇಕೆ ಹೊರತು, ಒಂದು ಪಕ್ಷದ ತಪ್ಪುಗಳನ್ನೇ ಪದೇ ಪದೇ ಟೀಕೆ ಮಾಡುವುದು ಸರಿಯಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ರಾಜ್ಯದಲ್ಲಿ ಸುರಕ್ಷತೆಯ ವಾತಾವರಣ ಇದೆ. ಆದರೆ, ರಾಜಕೀಯ ಲಾಭಕ್ಕಾಗಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳುವುದು ಸರಿಯಲ್ಲ. ಬಿಜೆಪಿ ನಾಯಕರು ಈ ಕುರಿತು ನೇರ ಚರ್ಚೆಗೆ ಬರಲಿ. ಅವರಿಗೆ ತಕ್ಕ ಉತ್ತರ ನೀಡಲು ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ಸಿದ್ಧವಿದೆ ಎಂದು ಅವರು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X