Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಯನೈಡ್ ಹಂತಕ ಮೋಹನ್ ವಿರುದ್ಧ ಮತ್ತೊಂದು...

ಸಯನೈಡ್ ಹಂತಕ ಮೋಹನ್ ವಿರುದ್ಧ ಮತ್ತೊಂದು ಪ್ರಕರಣ ಸಾಬೀತು

ಫೆ. 24ರಂದು ಶಿಕ್ಷೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ23 Feb 2018 7:49 PM IST
share
ಸಯನೈಡ್ ಹಂತಕ ಮೋಹನ್ ವಿರುದ್ಧ ಮತ್ತೊಂದು ಪ್ರಕರಣ ಸಾಬೀತು

ಮಂಗಳೂರು, ಫೆ. 23: ಯುವತಿಯರ ಸರಣಿ ಹಂತಕ ಸಯನೈಡ್ ಕಿಲ್ಲರ್ ಮೋಹನ್ ಮೇಲಿನ ಅತ್ಯಾಚಾರ ಹಾಗೂ ಕೊಲೆಯ ಐದನೇ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶುಕ್ರವಾರ ಸಾಬೀತುಗೊಂಡಿದ್ದು, ಶಿಕ್ಷೆಯ ಪ್ರಮಾಣವನ್ನು ಫೆ. 24ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.

ಬೆಳ್ತಂಗಡಿ ಮೇಗಿನ ಮಾಲಾಡಿ ನಿವಾಸಿ ಯಶೋಧ (28) ಎಂಬವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಾಬೀತುಗೊಂಡಿದ್ದು, ಶನಿವಾರ ಶಿಕ್ಷೆ ಪ್ರಕಟಿಸು ವುದಾಗಿ ನ್ಯಾಯಾಲಯ ತಿಳಿಸಿದೆ.

ಯಶೋಧರ ಜೊತೆಗೆ ಸಲುಗೆ ಬೆಳೆಸಿಕೊಂಡ ಮೋಹನ್ ಕುಮಾರ್, ತನ್ನ ಹೆಸರನ್ನು ಶಶಿಧರ ಪೂಜಾರಿ ಎಂದು ಹೇಳಿಕೊಂಡಿದ್ದ. ಆಕೆಯನ್ನು ಮದುವೆ ಯಾಗುವುದಾಗಿ ನಂಬಿಸಿ ಚಿನ್ನಾಭರಣದೊಂದಿಗೆ ತನ್ನ ಜೊತೆಗೆ ಬರುವಂತೆ ತಿಳಿಸಿದ್ದ. ಅದರಂತೆ ಆಕೆ 2009 ಸೆ.24ರಂದು ಮನೆ ಮಂದಿಗೆ ಹೇಳದೆ ಮೋಹನ್ ಜೊತೆಗೆ ಹಾಸನಕ್ಕೆ ತೆರಳಿದ್ದರು.

ಹಾಸನದಲ್ಲಿ ಲಾಡ್ಜ್ ಮಾಡಿ ಅಲ್ಲಿ ತನ್ನ ಹೆಸರನ್ನು ಶಶಿಧರ ಪೂಜಾರಿ ಎಂದು ಬರೆಸಿದ್ದ. ಅಲ್ಲದೆ ಆಕೆಯ ಮೊಬೈಲ್ ಸಂಖ್ಯೆಯನ್ನು ನೀಡಿದ್ದ. ಆಕೆಯ ಮನೆಗೆ ಫೋನಾಯಿಸಿದ ಮೋಹನ್ ಕುಮಾರ್, ನಾನು ಮತ್ತು ಯಶೋಧ ವಿವಾಹವಾಗಿದ್ದು, ಇನ್ನು ಎರಡು ದಿನ ಕಳೆದು ಬರುವುದಾಗಿ ಹೇಳಿದ್ದ. ರಾತ್ರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಮೋಹನ್ ಕುಮಾರ್, ಮರುದಿನ ಬೆಳಗ್ಗೆ ಆಕೆಯನ್ನು ಹಾಸನ ಬಸ್ ನಿಲ್ದಾಣಕ್ಕೆ ಕರೆದುಕೊಂಡು ಬಂದಿದ್ದ. ಗರ್ಭ ಧರಿಸಿದರೆ ತೊಂದರೆಯಾಗುವುದಾಗಿ ತಿಳಿಸಿ ಆಕೆಗೆ ಗರ್ಭ ನಿರೋಧಕ ಮಾತ್ರೆ ಎಂದು ಸಯನೈಡ್ನ್ನು ನೀಡಿದ್ದ. ಅದನ್ನು ಶೌಚಾಲಯದಲ್ಲಿ ಸೇವಿಸುವಂತೆ ಸೂಚಿಸಿದ್ದ. ಅದರಂತೆ ಆಕೆ ಶೌಚಾಲಯದಲ್ಲಿ ಸಯನೈಡ್ ತಿಂದು ಅಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದರು. ಈ ರೀತಿ ಸಯನೈಡ್ ನೀಡಿ ಮಹಿಳೆಯರನ್ನು ಕೊಲೆ ಮಾಡುತ್ತಿದ್ದ ಆತ ಕುತ್ತಿಗೆಗೆ ಮಾಂಗಲ್ಯ ಸರವನ್ನು ಧರಿಸುವಂತೆ ಹೇಳಿ, ತನಿಖೆ ನಡೆಸುವ ಪೊಲೀಸರ ದಾರಿಯನ್ನು ತಪ್ಪಿಸುತ್ತಿದ್ದ. ತನಿಖೆಯ ವೇಳೆ ಪೊಲೀಸರು ಈ ಕೊಲೆಗಳನ್ನು ದಾಂಪತ್ಯ ವಿರಸದ ಪ್ರಕರಣವಾಗಿ ತಿಳಿಯುವಂತೆ ಆತ ಕುತಂತ್ರ ರೂಪಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ಒಟ್ಟು 39 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ 43 ಪ್ರಬಲ ಸಾಕ್ಷಿ, 48 ಸಾಕ್ಷ್ಯಾಧಾರಗಳು, ಲಾಡ್ಜ್ ಮಾಲಕರು, ಮೊಬೈಲ್ ಕರೆಗಳ ದಾಖಲೆ, ಚಿನ್ನಾಭರಣ ಮಾರಾಟ ಮಾಡಿದ ಅಂಗಡಿಯಾತನ ಸಾಕ್ಷ್ಯಗಳನ್ನು ದಾಖಲಿಸಿತ್ತು . ಎಎಸ್ಪಿ ಚಂದ್ರಗುಪ್ತ ತನಿಖೆ ನಡೆಸಿದ ನಂತರ ಸಿಒಡಿ ಡಿವೈಎಸ್ಪಿ ಎಂ.ಎಸ್.ಪಾಟೀಲ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿ ಮೋಹನ್ ಕುಮಾರ್ ವಿರುದ್ಧ ಸೆಕ್ಷನ್ 302ರಲ್ಲಿ ಕೊಲೆ, 366ರಲ್ಲಿ ಪುಸಲಾವಣೆ, 376 ಅತ್ಯಾಚಾರ, 417 ವಿವಾಹ ವಂಚನೆ, 328 ವಿಷ ಪದಾರ್ಥ ನೀಡಿಕೆ, 201 ಸಾಕ್ಷ್ಯ ನಾಶ ಹಾಗೂ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಿತ್ತು. ಶುಕ್ರವಾರ ಈ ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ನ್ಯಾಯಾಧೀಶ ಡಿ.ಜೆ.ಪುಟ್ಟರಂಗ ಸ್ವಾಮಿ ಅವರು ಅಪರಾಧಕ್ಕೆ ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸುವುದಾಗಿ ಹೇಳಿದರು. ಪಬ್ಲಿಕ್ ಪ್ರಾಸಿಕ್ಯೂಷನ್ ಪರವಾಗಿ ಜುಡಿತ್ ಕ್ರಾಸ್ತಾ ವಾದಿಸಿದ್ದರು.

ಇನ್ನೂ 15 ಪ್ರಕರಣಗಳ ವಿಚಾರಣೆ ಬಾಕಿ

ಒಟ್ಟು 20 ಮಂದಿ ಯುವತಿಯರನ್ನು ಮೋಹನ್ ಕುಮಾರ್ ಅತ್ಯಾಚಾರ ನಡೆಸಿ, ಸಯನೈಡ್ ನೀಡಿ ಕೊಲೆ ನಡೆಸಿದ್ದ. ಇದರಲ್ಲಿ ನಾಲ್ಕು ಪ್ರಕರಣಗಳಲ್ಲಿ ಮೋಹನ್ ಅಪರಾಧಿ ಎಂಬುದು ಸಾಬೀತಾಗಿದೆ. ಈ ಪೈಕಿ ಸುನಂದ ಪ್ರಕರಣದಲ್ಲಿ ಮೋಹನ್‌ಗೆ ಮಂಗಳೂರು ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಇದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಲೀಲಾವತಿ ಪ್ರಕರಣದಲ್ಲಿ 5 ವರ್ಷ ಸಜೆ, ಅನಿತಾ ಬರಿಮಾರ್ ಹಾಗೂ ವಿನುತಾ ಕೇಸಿನಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆಯ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ನಿಂದ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಈ ಮಧ್ಯೆ ತೀರ್ಪನ್ನು ಮರು ವಿಮರ್ಶಿಸುವಂತೆ ಮೋಹನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಇದು ವಿಚಾರಣೆಯಲ್ಲಿದೆ. ಉಳಿದ 15 ಪ್ರಕರಣಗಳ ವಿಚಾರಣೆಗೆ ಬಾಕಿ ಇದೆ.

2009 ಅ. 21ರಂದು ಸಯನೈಡ್‌ನಿಂದ ಕೊಲೆಯಾದ ವನಿತಾ ಪ್ರಕರಣದಲ್ಲಿ ಮೋಹನ್ ಕುಮಾರ್ ವಿರುದ್ಧ ಕೇಸು ದಾಖಲಾಗಿತ್ತು. ಪುತ್ತೂರು ಎಎಸ್ಪಿ ಚಂದ್ರಗುಪ್ತ ಅವರು ಮೋಹನ್ ಕುಮಾರ್‌ನನ್ನು 2009 ಡಿ.29ರಂದು ಬಂಧಿಸಿದ್ದರು. ಆಗ ಮೋಹನ್ ಕುಮಾರ್, ಯಶೋಧ ಕೊಲೆ ಪ್ರಕರಣವನ್ನು ಬಾಯಿಬಿಟ್ಟಿದ್ದ. ಈ ಬಳಿಕ ಯಶೋಧ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ನಾಪತ್ತೆ ಹಾಗೂ ಕೊಲೆ ಪ್ರಕರಣ ದಾಖಲಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X