Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2ನೆ ಹಂತದ ಯೋಜನೆಯ ಲೋಪದೋಷ...

2ನೆ ಹಂತದ ಯೋಜನೆಯ ಲೋಪದೋಷ ನಿವಾರಣೆಯಾಗಲಿ: ಮನಪಾ ವಿಪಕ್ಷ

502.66 ಕೋಟಿ ರೂ. ಎಡಿಬಿ ಪ್ರಥಮ ಹಂತದ ಸಾಲ ಬಾಕಿ !

ವಾರ್ತಾಭಾರತಿವಾರ್ತಾಭಾರತಿ23 Feb 2018 7:58 PM IST
share

ಮಂಗಳೂರು, ಫೆ. 23: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾದ ಪ್ರಥಮ ಹಂತದ ಎಡಿಬಿ ಯೋಜನೆಗಾಗಿ ವೆಚ್ಚ ಮಾಡಲಾದ ಸಾಲದ ಹಣ ಹಾಗೂ ಬಡ್ಡಿ ಸೇರಿ 502,66,41,978 ರೂ. ಒಟ್ಟು ಬಾಕಿ ಇದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಎಡಿಬಿ ಸಾಲ ಪಡೆದು ಕೈಗೆತ್ತಿಕೊಳ್ಳಲು ನಿರ್ಧರಿ ಸಲಾಗಿರುವ ದ್ವಿತೀಯ ಹಂತದ ಯೋಜನೆಯ ಲೋಪದೋಷಗಳನ್ನು ನಿವಾರಿಸಿ ಮುಂದುವರಿಯಬೇಕು ಎಂದು ಮನಪಾ ವಿಪಕ್ಷ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಮನಪಾದ ವಿಪಕ್ಷ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು ಮಾಹಿತಿ ನೀಡಿದರು. ಎಡಿಬಿ ನೆರವಿನ ಸಾಲ ಯೋಜನೆ ಅತ್ಯಂತ ದುಬಾರಿಯಾಗಿದೆ. ಸಾರ್ವಜನಿಕರ ತೆರಿಗೆ ಹಣದಿಂದ ಸಾಲ ಪಾವತಿಸಬೇಕಾಗಿದೆ. ಪ್ರಥಮ ಹಂತದ ಯೋಜನೆಗಾಗಿ ಸಾಲದ ಅಸಲು 176,41, 37,401 ರೂ., ಬಡ್ಡಿ 326,25,04,577 ಸೇರಿ ಒಟ್ಟು ಬಾಕಿ ಹಣದಲ್ಲಿ ಈವರೆಗೂ ಒಂದು ರೂಪಾಯಿಯನ್ನೂ ಪಾವತಿಸಲಾಗಿಲ್ಲ. ಹೀಗಿರುವಾಗ ಮತ್ತೆ ದ್ವಿತೀಯ ಹಂತದ ಯೋಜನೆಗೆ ಸಾಲದ ಹಣದಲ್ಲಿ ನಡೆದರೆ ಆ ಹೊರೆಯನ್ನು ಸಾರ್ವಜನಿಕರು ಹೊರಬೇಕಾುತ್ತದೆ ಎಂದು ಅವರು ಹೇಳಿದರು.

ಮನಪಾ  ಸಭೆಯಲ್ಲಿ ವಿಪಕ್ಷದ ವಿರೋಧದ ನಡುವೆಯೂ ಎಡಿಬಿ ನೆರವಿನ ಒಳಚರಂಡಿ ಯೋಜನೆಗೆ 195 ಕೋಟಿ ರೂ., ನೀರಿನ ಸಂಪರ್ಕದ ವಿಸ್ತರಣೆಗೆ 218 ಕೋಟಿ ರೂ., ಅಮೃತ್ ಯೋಜನೆಯ 33.25 ಕೋಟಿರೂ. ಹಾಗೂ ಸ್ಮಾರ್ಟ್ ಸಿಟಿಯಡಿ 40 ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ಪಡೆಯಲಾಗಿದೆ. ಎಡಿಬಿ ಪ್ರಥಮ ಹಂತದ ಯೋಜನೆಯಡಿ ಕುಡಿಯುವ ನೀರು ಯೋಜನೆಗೆ 106.319 ಕೋಟಿ ರೂ. ಖರ್ಚು ಮಾಡಿ 2026ರ ಜನಸಂಖ್ಯೆ ಆಧಾರದಲ್ಲಿ ವಾರವಿಡೀ ದಿನದ 24 ಗಂಟೆಯೂ ನೀರು ಕೊಡುವ ಭರವಸೆಯೊಂದಿಗೆ ಯೋಜನೆ 2013ಕ್ಕೆ ಪೂರ್ಣಗೊಂಡಿದೆ. ಆದರೆ 2018ರ ಜನಸಂಖ್ಯೆ ಆಧಾರದಲ್ಲಿಯೇ ಈ ವ್ಯವಸ್ಥೆಯಡಿ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಮತ್ತೆ 2046ರ ಜನಸಂಖ್ಯೆ ಆಧಾರದಲ್ಲಿ 291.25 ಕೋಟಿ ರೂ. ಹಣವನ್ನು ವೆಚ್ಚ ಮಾಡುವುದು ಅವೈಜ್ಞಾನಿಕ ಎಂದು ಅವರು ಆಕ್ಷೇಪಿಸಿದರು.

ಮಂಗಳೂರಿಗೆ ತುಂಬೆಯಿಂದ ಈಗಾಗಲೇ 160 ಎಂಎಲ್‌ಡಿ ನೀರು ಸರಬರಾಜು ಆಗುತ್ತಿದೆ. ಇದೀಗ ಮತ್ತೆ ಇಷ್ಟೊಂದು ಖರ್ಚು ಮಾಡಿ 10 ಎಂಎಲ್‌ಡಿ ಹೆಚ್ಚುವರಿ ನೀರು ತರಿಸುವ ಯೋಜನೆ ಅಗತ್ಯವಿದೆಯೇ ಎಂದು ಅವರು ಪ್ರಶ್ನಿಸಿದರು. 

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಪ್ರತಿಪಕ್ಷವಾಗಿ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ದ್ವಿತೀಯ ಹಂತದ ಎಡಿಬಿ ಕಾಮಗಾರಿ ಚರ್ಚೆ ವೇಳೆ ಆಕ್ಷೇಪ ದಾಖಲಿಸಿದ್ದೇವೆ ಎಂದರು.  

ಗೋಷ್ಠಿಯಲ್ಲಿ ಪ್ರೇಮಾನಂದ ಶೆಟ್ಟಿ, ಸುರೇಂದ್ರ, ವಿಜಯ ಕುಮಾರ್ ಶೆಟ್ಟಿ, ದಿವಾಕರ, ರೂಪಾ ಡಿ. ಬಂಗೇರ, ಜಯಂತಿ ಆಚಾರ್, ರಾಜೇಂದ್ರ ಉಪಸ್ಥಿತರಿದ್ದರು.

ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗ್ರಹ
ಪ್ರಥಮ ಹಂತದ ಎಡಿಬಿಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಿರುವ ಸಚಿವ ರೋಶನ್ ಬೇಗ್‌ರವರು ಸಿಒಡಿ ತನಿಖೆಗೆ ಆದೇಶಿಸಿದ್ದಾರೆ. ಆದ್ದರಿಂದ ಎರಡನೆ ಹಂತದ ಎಡಿಬಿ ಯೋಜನೆ ಅನುಷ್ಠಾನಗೊಳಿಸುವ ಮೊದಲು ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಬೇಕು. ಭ್ರಷ್ಟಾಚಾರ ಆಗದಂತೆ ಎಚ್ಚರಿಕೆ ವಹಿಸಬೇಕು ಸುಧೀರ್ ಶೆಟ್ಟಿ ಕಣ್ಣೂರು ಆಗ್ರಹಿಸಿದರು.

 

ಶೇ. 10ರ ಯೋಜನೆ !
ಮನಪಾ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುವ ಎಡಿಬಿ ದ್ವಿತೀಯ ಹಂತದ ಯೋಜನೆ ಶೇ. 10ರ ಯೋಜನೆ ಎಂದು ಶಾಸಕ ಜೆ.ಆರ್. ಲೋಬೊ ಅವರನ್ನು ಉಲ್ಲೇಖಿಸಿ ಆರೋಪಿಸಿದ ಸುಧೀರ್ ಶೆಟ್ಟಿ ಕಣ್ಣೂರು, ಮನಪಾದ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯದೆ, ಚರ್ಚಿಸದೆ ನೇರವಾಗಿ ಕಚೇರಿಯಲ್ಲಿಯೇ ಈ ಯೋಜನೆಯನ್ನು ತಯಾರಿಸಲಾಗಿದೆ ಎಂದರು.

10 ಪರ್ಸೆಂಟ್‌ನ ಯೋಜನೆ ಕುರಿತಾದ ಆರೋಪಕ್ಕೆ ದಾಖಲೆ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ನಮ್ಮ ಅವಧಿಯಲ್ಲಿ ಯೋಜನೆಗಳನ್ನು ತಯಾರಿಸು ವಾಗ ಕನ್ಸಲ್ಟಂಟ್‌ಗಳಿದ್ದರು. ಈಗ ಆ ವ್ಯವಸ್ಥೆ ಇಲ್ಲ. ಯಾವ ಕಾಮಗಾರಿ ಯಾರಿಗೆ ಕೊಡಬೇಕು ಎಂದು ಆಡಳಿತ ಪಕ್ಷದವರೇ ನಿರ್ಧರಿಸಿ ತುಂಡು ಗುತ್ತಿಗೆ ನೀಡುತ್ತಾರೆ. ಯೋಜನೆಯಲ್ಲಿನ ಭ್ರಷ್ಟಾಚಾರದ ಕುರಿತಾದ ಹೋರಾಟ ಮುಂದುವರಿಯಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X