Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

ವಾರ್ತಾಭಾರತಿವಾರ್ತಾಭಾರತಿ23 Feb 2018 9:37 PM IST
share
ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

ಬೆಂಗಳೂರು, ಫೆ,23: ಮಹಿಳಾಪರ ಹೋರಾಟಗಾರ್ತಿಯಾಗಿ, ಮಹಿಳೆಯರ ನೋವು, ಸಂಕಷ್ಟಗಳನ್ನು ಸಾಹಿತ್ಯದ ಮೂಲಕ ಎಳೆ ಎಳೆಯಾಗಿ ಬಿಡಿಸಿಟ್ಟ ಹಿರಿಯ ಸಾಹಿತಿ ವಿಜಯಾ ದಬ್ಬೆ ಇಂದು ಸಂಜೆ ಉಸಿರಾಟದ ತೊಂದರೆಯಿಂದ ನಿಧನರಾದರು.

ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಅಮೂಲ್ಯ ಕೊಡುಗೆಗಳನ್ನು ನೀಡಿದ್ದ ವಿಜಯಾ ದಬ್ಬೆ ಅವರು ರಾಜ್ಯದ ಪ್ರಮುಖ ಮಹಿಳಾ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಕನ್ನಡದ ಮೊದಲ ಸ್ತ್ರೀವಾದಿ ಎಂಬ ಅಗ್ಗಳಿಕೆಗೆ ಪಾತ್ರರಾಗಿದ್ದರು. ಅವರು ಮಾನವೀಯ ಚಿಂತನೆ ಮತ್ತು ಪ್ರಗತಿಪರ ಆಶಯಗಳ ಲೇಖಕಿಯಾಗಿದ್ದು, ತಮ್ಮ ನಂಬಿಕೆ ಮತ್ತು ಚಿಂತನೆಗಳಿಗೆ ತಕ್ಕಂತೆಯೇ ಎಲ್ಲ ಬಗೆಯ ಕಂದಾಚಾರಗಳನ್ನೂ ಬದಿಗೊತ್ತಿ ಬದುಕಿ ತೋರಿ, ತಮ್ಮ ದಿಟ್ಟ ಬರವಣಿಗೆಗಳಿಂದ ಈ ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದವರು.

ಲೇಖಕಿ ಡಾ.ವಿಜಯಾ ದಬ್ಬೆ ನೇರ ಹಾಗೂ ನಿಷ್ಠುರ ಮಾತು ಮತ್ತು ನಡವಳಿಕೆಯ ಮೂಲಕ ಎಪ್ಪತ್ತು-ಎಂಬತ್ತರ ದಶಕದಲ್ಲಿ ಕನ್ನಡ ಸಾರಸ್ವತ ಲೋಕದ ತೀವ್ರ ಗಮನ ಸೆಳೆದವರು. ಮಾತಿನಲ್ಲಿ ಹರಿತವಿರುವಂತೆ ಬರವಣಿಗೆಯಲ್ಲೂ ಖಚಿತತೆ ಮತ್ತು ಪ್ರಾಮಾಣಿಕತೆಗಳ ಜೀವ ಎರೆವ ಅಪರೂಪದ ಲೇಖಕಿ ಎನಿಸಿಕೊಂಡಿದ್ದರು.

‘ಇರುತ್ತವೆ’, ‘ನೀರು ಲೋಹದ ಚಿಂತೆ’, ‘ತಿರುಗಿ ನಿಂತ ಪ್ರಶ್ನೆ’, ‘ಇತಿಗೀತಿಕೆ’ ಎಂಬ ನಾಲ್ಕು ಕವನಸಂಕಲನಗಳು; ‘ನಯಸೇನ’, ‘ಸಂಪ್ರತಿ’, ‘ಮಹಿಳೆ, ಸಾಹಿತ್ಯ, ಸಮಾಜ’, ‘ನಾರಿ ದಾರಿ ದಿಗಂತ’, ‘ಅನುಪಮಾ ನಿರಂಜನ’ ಮತ್ತು ‘ಮಹಿಳೆ ಮತ್ತು ಮಾನವತೆ’ ಎಂಬ ಆರು ವಿಮರ್ಶಾ ಸಂಕಲನಗಳು; ‘ನಾಗಚಂದ್ರ- ಒಂದು ಅಧ್ಯಯನ’, ‘ಹಿತೈಷಿಯ ಹೆಜ್ಜೆಗಳು’ ಮತ್ತು ‘ಸಾರ ಸರಸ್ವತಿ’ ಎಂಬ ಮೂರು ಮಹತ್ವದ ಸಂಶೋಧನಾ ಕೃತಿಗಳಷ್ಟೇ ಅಲ್ಲದೆ ಸಂಪಾದನೆ, ವ್ಯಕ್ತಿಚಿತ್ರ, ಪ್ರವಾಸ ಹಾಗೂ ಅನುವಾದಗಳೊಂದಿಗೆ ಕನ್ನಡ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದವರು.

ಡಾ. ವಿಜಯಾ ದಬ್ಬೆಯವರ ಸಾರಸ್ವತ ಸಾಧನೆಗೆ ಕವಿತಾ ಸ್ಮಾರಕ ಪ್ರಶಸ್ತಿ, ವರ್ಧಮಾನ ಸಾಹಿತ್ಯ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಅನುಪಮಾ ಪ್ರಶಸ್ತಿ, ರತ್ನಮ್ಮ ಹೆಗಡೆ ಪ್ರಶಸ್ತಿ ಹಾಗೂ 2012ರಲ್ಲಿ ಡಾ.ಎಲ್.ಬಸವರಾಜು ಪ್ರಶಸ್ತಿ ಪಡೆದು ಗೌರವಕ್ಕೆ ಭಾಜನರಾಗಿದ್ದರು. ಹಿರಿಯ ಸಾಹಿತಿಯಾದ ವಿಜಯಾ ಅವರು ಬೇಲೂರು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X