Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಡಿಮೆ ದರದ ಸ್ಪೀಡ್ ಗೌರ್ನರ್ ಬಗ್ಗೆ...

ಕಡಿಮೆ ದರದ ಸ್ಪೀಡ್ ಗೌರ್ನರ್ ಬಗ್ಗೆ ಪರಿಶೀಲನೆ: ಎಚ್.ಎಂ.ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ23 Feb 2018 9:47 PM IST
share
ಕಡಿಮೆ ದರದ ಸ್ಪೀಡ್ ಗೌರ್ನರ್ ಬಗ್ಗೆ ಪರಿಶೀಲನೆ: ಎಚ್.ಎಂ.ರೇವಣ್ಣ

ಬೆಂಗಳೂರು, ಫೆ.23: ಸ್ಪೀಡ್ ಗೌರ್ನರ್ ಅಳವಡಿಕೆಯಲ್ಲಿ ಭಾರೀ ಗೋಲ್‌ಮಾಲ್ ನಡೆಯುತ್ತಿದೆ. ಅಧಿಕಾರಿಗಳು ಶಾಮೀಲಾಗಿ ತಮಗಿಷ್ಟ ಬಂದ ಕಂಪೆನಿಗಳಿಗೆ ಸ್ಪೀಡ್ ಗೌರ್ನರ್ ಅಳವಡಿಕೆಗೆ ಅವಕಾಶ ನೀಡಿದ್ದಾರೆ ಎಂದು ಜೆಡಿಎಸ್ ಸದಸ್ಯ ಪುಟ್ಟಣ್ಣ , ಬಿಜೆಪಿ ಸದಸ್ಯ ರಾಮಚಂದ್ರಗೌಡ, ವಿಧಾನ ಪರಿಷತ್ ಕಲಾಪದಲ್ಲಿ ಗಂಭೀರ ಆರೋಪ ಮಾಡಿದರು.

ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಪುಟ್ಟಣ್ಣ, ಸ್ಪೀಡ್ ಗೌರ್ನರ್ ಅಳವಡಿಸಲು 19 ಕಂಪೆನಿಗಳಿಗೆ ಅವಕಾಶವಿದ್ದರೂ ರೋಜ್‌ಮಿತ್ರ ಆಟೋ ಟೆಕ್ನೋ ಪ್ರೈವೇಟ್ ಲಿಮಿಟೆಡ್, ಟ್ರೈಕೋ ಲಿಮಿಟೆಡ್ ಎಂಬ ಎರಡು ಕಂಪೆನಿಗಳಿಗೆ ಮಾತ್ರ ನೀಡಲಾಗಿದೆ. ಬೇರೆ ರಾಜ್ಯಗಳಲ್ಲಿ ಒಂದೂವರೆ ಸಾವಿರದಿಂದ 2 ಸಾವಿರ ರೂ.ಗಳಿಗೆ ಸಿಗುವ ಸ್ಪೀಡ್ ಗೌರ್ನರ್ ಅನ್ನು ನಮ್ಮ ರಾಜ್ಯದಲ್ಲಿ ಒಂಭತ್ತೂವರೆ ಸಾವಿರದಿಂದ ಹದಿಮೂರೂವರೆ ಸಾವಿರಗಳಿಗೆ ಖರೀದಿ ಮಾಡಲಾಗುತ್ತಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿ ಭಾರೀ ವಂಚನೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
   
ಬೇರೆ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ದರಕ್ಕೆ ಸಿಗುವ ಸ್ಪೀಡ್ ಗೌರ್ನರ್ (ವೇಗ ನಿಯಂತ್ರಕ)ಗಳನ್ನು ನಮ್ಮ ರಾಜ್ಯದಲ್ಲಿ ಏಕೆ ದುಬಾರಿ ವೆಚ್ಚಕ್ಕೆ ಖರೀದಿಸಬೇಕು. 2009ರ ಮಾರ್ಗಸೂಚಿ ಅಳವಡಿಸಿ ವಾಹನಗಳಿಗೆ ಸ್ಪೀಡ್ ಗೌರ್ನರ್ ಅಳವಡಿಸುವ ಕಂಪೆನಿಗಳಿಗೆ ಅನುಮತಿ ನೀಡಿರುವುದರಿಂದ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹೆಚ್ಚಿನ ದರ ನಿಗದಿ ಪಡಿಸಿ ವಾಹನ ಮಾಲಕರನ್ನು ಸುಲಿಗೆ ಮಾಡುತ್ತಿರುವುದು ಎಷ್ಟು ಸಮಂಜಸ ಎಂದು ಹೇಳಿದರು.

ಇದಕ್ಕೆ ದನಿಗೂಡಿಸಿದ ಬಿಜೆಪಿ ಸದಸ್ಯ ರಾಮಚಂದ್ರಗೌಡ ಅವರು, ಕೇಂದ್ರ ಸರಕಾರ 2016ರಲ್ಲಿ ರೂಪಿಸಿದ ಮಾರ್ಗಸೂಚಿಗಳನ್ನು ಬದಿಗೆ ಸರಿಸಿ ಅಧಿಕಾರಿಗಳು ಈ ಕಂಪೆನಿಗಳೊಂದಿಗೆ ಒಳಒಪ್ಪಂದ ಮಾಡಿಕೊಂಡಂತಿದೆ. ನ್ಯಾಯಾಲಯ ಕಂಪೆನಿಗಳಿಗೆ ತಡೆಯಾಜ್ಞೆ ನೀಡಿದೆಯೇ ಹೊರತು, ಸರಕಾರಕ್ಕಲ್ಲ. ಸರಕಾರ ಮಧ್ಯಪ್ರವೇಶಿಸಿ ವಾಹನ ಮಾಲಕರಿಗೆ ಆಗುತ್ತಿರುವ ಸುಲಿಗೆಯನ್ನು ತಪ್ಪಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ನ್ಯಾಯಾಲಯದ ಆದೇಶದಂತೆ ಈ ಕಂಪೆನಿಗಳಿಗೆ ಅವಕಾಶ ನೀಡಲಾಗಿದೆ. ಆದಾಗ್ಯೂ ಕಡಿಮೆ ದರದಲ್ಲಿ ಸ್ಪೀಡ್ ಗೌರ್ನರ್ ಒದಗಿಸಿಕೊಡುವ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X