Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಯುವಜನಾಂಗಕ್ಕೆ ತುಳು ಸಂಸ್ಕೃತಿ...

‘ಯುವಜನಾಂಗಕ್ಕೆ ತುಳು ಸಂಸ್ಕೃತಿ ಕಟ್ಟಿಕೊಡುವ ಕೆಲಸವಾಗಲಿ’

‘ತುಳು ಐಸಿರಿ’ ಯಲ್ಲಿ ಡಾ.ಚಿನ್ನಪ್ಪ ಗೌಡ

ವಾರ್ತಾಭಾರತಿವಾರ್ತಾಭಾರತಿ23 Feb 2018 10:44 PM IST
share
‘ಯುವಜನಾಂಗಕ್ಕೆ ತುಳು ಸಂಸ್ಕೃತಿ ಕಟ್ಟಿಕೊಡುವ ಕೆಲಸವಾಗಲಿ’

ಉಡುಪಿ, ಫೆ.23: ಆಧುನಿಕತೆ ಹಾಗೂ ಆಧುನಿಕ ತಂತ್ರಜ್ಞಾನದ ಹಿಂದೆ ಬಿದ್ದಿರುವ ಇಂದಿನ ಯುವಜನತೆಯಲ್ಲಿ ತುಳು ಸಂಸ್ಕೃತಿ, ಪರಂಪರೆಯನ್ನು ಕಟ್ಟಿ ಕೊಡುವ ಕಾರ್ಯಕ್ರಮಗಳನ್ನು ಆಯೋಜಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಹಾವೇರಿಯ ಕರ್ನಾಟಕ ಜಾನಪದ ವಿವಿಯ ವಿಶ್ರಾಂತ ಕುಲಪತಿ ಹಾಗೂ ಜಾನಪದ ವಿದ್ವಾಂಸ ಡಾ.ಚಿನ್ನಪ್ಪ ಗೌಡ ಹೇಳಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಎಂಜಿಎಂ ಕಾಏಜಿನ ತುಳುಸಂಘದ ಜಂಟಿ ಆಶ್ರಯದಲ್ಲಿ ಕಾಲೇಜಿನ ಮುದ್ದಣಮಂಟಪದಲ್ಲಿ ಶುಕ್ರವಾರ ನಡೆದ ತುಳು ಸಂಸ್ಕೃತಿ ಹಬ್ಬ ‘ತುಳು ಐಸಿರಿ- 2018’ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಇಂದಿನ ಯುವಜನಾಂಗ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಅವಲೋ ಕಿಸುತ್ತಿಲ್ಲ. ಬೇರು ಗಟ್ಟಿಯಿಲ್ಲದ ಕನಸುಗಳು ನಮ್ಮ ವಿದ್ಯಾರ್ಥಿಗಳನ್ನು ಆವರಿಸಿ ಕೊಂಡಿವೆ. ಇವರಲ್ಲಿ ತುಳುವರ ಆರಾಧನಾ ಪರಂಪರೆ, ಸಿರಿ ಪಾಡ್ದನ, ಭೂತಾರಾಧನೆ, ನಾಗರಾಧನೆ, ಯಕ್ಷಗಾನ, ಕಂಬಳ, ತುಳುವರ ಆಹಾರ ಪದ್ಧತಿಗಳ ಕುರಿತಂತೆ ಅರಿವು ಮೂಡಿಸಬೇಕು. ಆಗಷ್ಟೇ ಅವರಲ್ಲಿ ತುಳು ಸಂಸ್ಕೃತಿಯ ಕುರಿತಂತೆ ಒಲವು ಬೆಳೆಯಲು ಸಾಧ್ಯವಿದೆ ಎಂದರು.

ನಾಲ್ಕೈದು ದಶಕಗಳ ಹಿಂದೆ ಶಾಲಾ-ಕಾಲೇಜುಗಳಲ್ಲಿ ತುಳು ಭಾಷೆಯನ್ನು ಕದ್ದುಮುಚ್ಚಿ ಮಾತನಾಡಬೇಕಿತ್ತು. ಆದರೆ ಇಂದು ಕಾಲೇಜೊಂದರಲ್ಲಿ ತುಳು ಐಸಿರಿಯಂಥ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಆದರೂ ತುಳು ಸಂಸ್ಕೃತಿ, ಪರಂಪರೆ ನಿಧಾನವಾಗಿ ಮರೆಯಾಗುತ್ತಿದೆ ಎಂದು ವಿಷಾಧಿಸಿದ ಡಾ.ಗೌಡ, ವೇಗವಾಗಿ ಧಾವಂತದಿಂದ ಮುಂದೆ ಸಾಗುತ್ತಿರುವ ಯುವಜನಾಂಗ ಸ್ವಲ್ಪ ನಿಂತು, ಹಿಂದಿರುಗಿ ನೋಡಿದರೆ ಅಲ್ಲಿ ನಮ್ಮ ಹಿರಿಯರು ಬಿಟ್ಟು ಹೋದ ನಮ್ಮ ಪರಂಪರೆ ಕಾಣಿಸುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ವೈ.ಎನ್.ಶೆಟ್ಟಿ ಮಾತನಾಡಿ, ಹಿಂದಿನಿಂದಲೂ ಪಂಚದ್ರಾವಿಡ ಭಾಷೆಗಳಲ್ಲಿ ತುಳುವಿಗೆ ಅಗ್ರಸ್ಥಾನವಿತ್ತು. ತುಳುವಿಗೆ ಪ್ರಬುದ್ಧವಾದ ಲಿಪಿ ಇದೆ ಎಂಬುದನ್ನು ಸಂಶೋಧಕ ವೆಂಕಟರಾಜ ಪುಣಿಚಿತ್ತಾಯ ಕಂಡುಹಿಡಿದಿದ್ದಾರೆ. ಹೀಗಾಗಿ ತುಳು ಸಶಕ್ತ ಭಾಷೆ ಎಂಬ ಬಗ್ಗೆ ಸಂದೇಹವೇ ಇಲ್ಲ ಎಂದರು.

ಇಂಥ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಇನ್ನೂ ಗಂಭೀರ ಚಿಂತನೆ ನಡೆಯುತ್ತಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದ ಡಾ.ಶೆಟ್ಟಿ, ತುಳುವರ ಆಹಾರ ಪದ್ಧತಿಯನ್ನು ಅವಲೋಕಿಸಿದರೆ ಅದರಲ್ಲಿ ಔಷಧೀಯ ಗುಣವಿರುವುದನ್ನು ಕಾಣಬಹುದು. ಆದರೆ ‘ಆಟಿಡೊಂಜಿ ಕೂಟ’ ಹೆಸರಿನಲ್ಲಿ ನಾವು ಒಂದೇ ದಿನ ಪೈಪೋಟಿಯಲ್ಲಿ 50-100 ಆಹಾರ ಪದಾರ್ಥಗಳನ್ನು ಒಟ್ಟಿಗೆ ತಿಂದು ಅವುಗಳನ್ನು ವ್ಯರ್ಥಗೊಳಿಸುತಿದ್ದೇವೆ ಎಂದರು.

ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್. ಶಾಂತಾರಾಮ್ ಅಧ್ಯಕ್ಷತೆ ವಹಿಸಿದ್ದರು. ತುಳುಕೂಟ ಉಡುಪಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಆರ್. ನಂಬಿಯಾರ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. 

ಎಂಜಿಎಂ ಕಾಲೇಜಿನ ತುಳುಸಂಘದ ಸಂಚಾಲಕ ಡಾ.ಪುತ್ತಿ ವಸಂತಕುಮಾರ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಕಾರ್ಯದರ್ಶಿ ಪುನರ್ವಸು ನಾಗೇಶ್ ವಂದಿಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X