Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ: ಪಟ್ಟಣದ ಪಪಂ ಕಾರ್ಯಾಲಯದಲ್ಲಿ...

ಸೊರಬ: ಪಟ್ಟಣದ ಪಪಂ ಕಾರ್ಯಾಲಯದಲ್ಲಿ ಅಯವ್ಯಯ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ23 Feb 2018 11:04 PM IST
share
ಸೊರಬ: ಪಟ್ಟಣದ ಪಪಂ ಕಾರ್ಯಾಲಯದಲ್ಲಿ ಅಯವ್ಯಯ ಸಾಮಾನ್ಯ ಸಭೆ

ಸೊರಬ,ಫೆ.23: ಪಟ್ಟಣದಲ್ಲಿರುವ ಕುರಿಮಾಂಸ ಮಳಿಗೆಗಳಲ್ಲಿ ಮಾರಲು ಮಾಂಸಕ್ಕಾಗಿ ಕಡಿಯುವ ಕುರಿಗಳನ್ನು ವೈದ್ಯರ ತಪಾಸಣೆಯ ನಡೆಸಿ ಕಡಿಯಲಾಗುತ್ತದೆಯೇ ಎಂದು ಪಪಂ ಸದಸ್ಯ ಎಂ.ಡಿ,ಉಮೇಶ್ ಪಪಂ ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದರು. 

ಪಟ್ಟಣದ ಪಪಂ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಯವ್ಯಯ ಸಾಮಾನ್ಯ ಸಭೆಯಲ್ಲಿ ಅವರು ಪ್ರಶ್ನಿಸಿದ್ದೂ ಅಲ್ಲದೇ ಗುಟ್ಕಾವನ್ನು ತಿಂದು ಮಾಂಸದ ಮೇಲೆ ಉಗುಳಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆತಂಕಕಾರಿ ಅಂಶವನ್ನು ಸಭೆಯ ಗಮನಕ್ಕೆ ತಂದರು.

ರೋಗದ, ನಿತ್ರಾಣಗೊಂಡ ಕುರಿಗಳನ್ನು ಕಡಿದು ಮಾರಾಟಮಾಡಲಾಗುತ್ತಿದೆ. ಈ ಕುರಿಗಳನ್ನು ಯಾವುದೇ ಪರಿಕ್ಷೆ ಮಾಡದೆ ಮಾರಟ ಮಾಡಲಾಗುತ್ತಿದೆ ಹಾಗು ಬೇರೆ ಊರುಗಳಿಗಿಂತಲೂ ಹೆಚ್ಚಿನ ಬೆಲೆಯನ್ನು ಪಡೆಯಲಾಗುತ್ತಿದೆ ಎಂಬ ಚರ್ಚೆ ನಡೆದ ನಂತರ ಮಾಂಸ ಮಾರಾಟ ಮಳಿಗೆಗಳಿಗೆ ನೋಟಿಸ್ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. 

ಕಳೆದ ವರ್ಷ ಸಂತೆ ಸುಂಕ ವಸೂಲಾತಿಯನ್ನು ಹರಾಜಿನಲ್ಲಿ ಪಡೆದವರು ಇನ್ನೂ ಒಂದು ಲಕ್ಷ ರೂ ಗಳನ್ನು ಬಾಕಿ ಕೊಡಬೇಕಾಗಿದ್ದು, ಇನ್ನೊಂದು ವಾರದಲ್ಲಿ ಅದನ್ನು ಪಡೆಯಲಾಗುವುದು ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಆಗ ಸದಸ್ಯರು ಪ್ರತಿಕ್ರಿಯಿಸಿ, ಹರಾಜಿನಲ್ಲಿ ಬಿಡ್ ಮಾಡಿದವರು 20 ದಿನಗಳಲ್ಲಿ ಹಣವನ್ನು ಪಾವತಿ ಮಾಡಬೇಕೆಂಬ ನಿಯಮವಿದ್ದಾಗಲೂ ಒಂದು ವರ್ಷ ಕಳೆದರೂ ಈ ಹಣ ಇನ್ನೂ ಜಮೆಯಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ, ಇನ್ನು ಕೆಲವೇ ದಿನಗಳಲ್ಲಿ ಪುನಃ ಹರಾಜು ಪ್ರಕ್ರಿಯೆ ಪ್ರಾರಂಭವಾಗುವುದಿದೆ, ಅಷ್ಟರಲ್ಲಿ ಹಣ ಜಮೆ ಮಾಡಿಸಿಕೊಳ್ಳುವಂತೆ ಆಗ್ರಹಿಸಿದರಲ್ಲದೆ ಅಕಸ್ಮಾತ್ ಹಣ ಪಡೆಯಲಾಗದಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರರು ಎಂದರು.  

ಅಯವ್ಯಯ ಮಂಡನೆಯ ವೇಳೆ ಘನ ತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕವಾಗಿ ಲಕ್ಷ-ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗುತ್ತಿದೆ. ಇಷ್ಟೆಲ್ಲಾ ಹಣದ ಅವಶ್ಯಕತೆಯಿದೆಯೇ ಎಂದು ಸದಸ್ಯ ಮಹೇಶ ಗೌಳಿ ಪ್ರಶ್ನಿಸಿದ್ದಲ್ಲದೆ ಸಂಬಂಧಿಸಿದ ಸ್ಥಳ ಪರಿಶೀಲನೆಗೆ ಹೋಗುವ ಆಸಕ್ತಿ ತೋರಿಸಿದಾಗ, ಆ ಸ್ಥಳಕ್ಕೆ ಹೋಗುವುದು ಬೇಡ, ಅಲ್ಲಿಯ ವಾಸನೆ ತಡೆಯಲು ಆಗುವುದಿಲ್ಲ ಎಂದು ಹೇಳುತ್ತಿರಿ. ನಿಜವಾಗಿಯೂ ಇಷ್ಟು ಹಣದ ಅವಶ್ಯಕತೆ ಘನತ್ಯಾಜ್ಯ ನಿರ್ವಹಣೆಗೆ ಬೇಕಾಗಿದೆಯಾ ಎಂಬ ಅನುಮಾನ ವ್ಯಕ್ತಪಡಿಸಿದರು. 

ಪಟ್ಟಣ ಪಂಚಾಯತ್ ಸಮೀಪದಲ್ಲಿಯೇ ವೈನ್‍ಶಾಪ್ ಮಳಿಗೆಯೊಂದು ತಲೆಯತ್ತಿದ್ದು, ಆ ರಸ್ತೆಯಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದೆ. ವೈನ್‍ಶಾಪ್‍ನಿಂದ ಹೊರಬರುವವರೇ ಈ ಅವಘಡಕ್ಕೆ ತುತ್ತಾಗುತ್ತಿದಾರೆ. ಪಟ್ಟಣ ಪಂಚಾಯತ್ ನಿಂದ ಈ ವೈನ್‍ಶಾಪ್ ನಡೆಸಲು ಅನುಮತಿ ಪಡೆಯಲಾಗಿದೆಯೇ ಎಂದು ಎಂ.ಡಿ. ಉಮೇಶ್ ಪ್ರಶ್ನಿಸಿದಾಗ, ಅಧಿಕಾರಿಗಳಿಂದ ವೈನ್‍ಶಾಪ್‍ಗೆ ಅನುಮತಿ ಪಡೆಯಲಾಗಿಲ್ಲ ಎಂಬ ಉತ್ತರ ಬಂತು. ಕೂಡಲೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ಪಪಂ ಮುಖ್ಯಾಧಿಕಾರಿ ಟಿ.ಬಾಲಚಂದ್ರ ಅಯ-ವ್ಯಯವನ್ನು ಮಂಡಿಸಿ, 2018-19ನೇ ಸಾಲಿಗೆ ಒಟ್ಟು 70.95 ಲಕ್ಷಗಳ ಆದಾಯ ನಿರೀಕ್ಷೆಯ ಮಾಡಿರುವುದಾಗಿಯೂ ಮತ್ತು 2017-18ನೇ ಸಾಲಿಗೆ 12.77 ಲಕ್ಷ ರೂಗಳ ಉಳಿತಾಯ ಮತ್ತು 2018-19 ನೇ ಸಾಲಿನ ಉಳಿತಾಯ ಬಜೆಟ್ ಮಡಿಸಿದರು. ಒಟ್ಟು ಉಳಿತಾಯ 14.87 ಲಕ್ಷ ರೂ ಗಳನ್ನು ಬಜೆಟ್‍ನಲ್ಲಿ ನಿರೀಕ್ಷೆ ಮಾಡಲಾಗಿದೆ.

ಸಭೆಯಲ್ಲಿ ಪ.ಪಂ ಅಧ್ಯಕ್ಷೆ ಬೀಬಿ ಝುಲೇಖಾ, ಉಪಾಧ್ಯಕ್ಷೆ ರತ್ನಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಚಿ ಹನುಮಂತಪ್ಪ, ಪ್ರಶಾಂತ್ ಮೇಸ್ತ್ರಿ ಸೇರಿದಂತೆ ಪಪಂ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X