Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ವಿಭಜನೆಯಿಂದ ಹೂಡಿಕೆಗೆ...

ಸಾಮಾಜಿಕ ವಿಭಜನೆಯಿಂದ ಹೂಡಿಕೆಗೆ ಹಿನ್ನಡೆ: ಅರುಣ್‌ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ23 Feb 2018 11:26 PM IST
share
ಸಾಮಾಜಿಕ ವಿಭಜನೆಯಿಂದ ಹೂಡಿಕೆಗೆ ಹಿನ್ನಡೆ: ಅರುಣ್‌ಜೇಟ್ಲಿ

ಲಕ್ನೋ,ಫೆ.23: ಸಾಮಾಜಿಕ ವಿಭಜನೆಯು ರಾಜ್ಯಗಳಲ್ಲಿ ಹೂಡಿಕೆಗೆ ಹಿನ್ನಡೆ ಯನ್ನುಂಟು ಮಾಡುತ್ತದೆಯೆಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರತಿಪಾದಿಸಿದ್ದಾರೆ. ಲಕ್ನೋದಲ್ಲಿ ಗುರುವಾರ ನಡೆದ ಉತ್ತರಪ್ರದೇಶ ಹೂಡಿಕೆದಾರರ ಶೃಂಗಸಭೆಯ ಸಮಾರೋಪ ಭಾಷಣ ಮಾಡುತ್ತಿದ್ದ ಅವರು ಉತ್ತರಪ್ರದೇಶದಲ್ಲಿ ಈ ಹಿಂದೆ ಇದ್ದಂತೆ, ಸಾಮಾಜಿಕವಾಗಿ ವಿಭಜಿತವಾಗಿರುವ ರಾಜ್ಯಗಳಲ್ಲಿ ಹೂಡಿಕೆಯ ಚಕ್ರವು ತಿರುಗಲಾರದು ಎಂದರು.

ಉತ್ತರಪ್ರದೇಶ ಹೂಡಿಕೆದಾರರ ಶೃಂಗಸಭೆಯ ರಾಜ್ಯದ ಪ್ರಗತಿಯ ಕಾರ್ಯಸೂಚಿಯನ್ನು ರೂಪಿಸುವ ಅತಿ ದೊಡ್ಡ ಪ್ರಯತ್ನವಾಗಿದೆಯೆಂದು ಹೇಳಿದ್ದಾರೆ.

 ‘‘ ಸಮಾಜವನ್ನು ವಿಭಜಿಸುವ ರಾಜಕೀಯ ಕಾರ್ಯಸೂಚಿಯೊಂದಿಗೆ ಒಂದು ರಾಜ್ಯ ಹಾಗೂ ಸಮಾಜವು ಸಾಗುತ್ತಿದ್ದರೆ ಅಲ್ಲಿ ಹೂಡಿಕೆಯ ಚಕ್ರವು ಆರಂಭವಾಗಲು ಸಾಧ್ಯವಿಲ್ಲ. ದುರದೃಷ್ಟವಶಾತ್ ಈ ಹಿಂದೆ ಉತ್ತರಪ್ರದೇಶದಲ್ಲಿ ಇಂತಹ ವಾತಾವರಣವಿದ್ದುದರಿಂದ ಅಲ್ಲಿ ಹೂಡಿಕೆಯ ಚಕ್ರವು ಆರಂಭವಾಗಿರಲಿಲ್ಲ. ಒಂದು ಹೂಡಿಕೆಯಾಗುತ್ತಿದ್ದರೂ, ಅದರಿಂದ ಸಹಜ ಪ್ರಯೋಜನಗಳು ಲಭ್ಯವಾಗು ತ್ತಿರಲಿಲ್ಲವೆಂದು ಅವರು ಹೇಳಿದ್ದಾರೆ. ಸರಕಾರಗಳು ಹಾಗೂ ಮುಖ್ಯಮಂತ್ರಿಗಳು ಬರುತ್ತಾರೆ, ಹೋಗುತ್ತಾರೆ. ಆದರೆ ಯಾವುದೇ ನಾಯಕತ್ವವು ಅದರ ಕೆಲಸಗಳಿಂದಾಗಿ ಸ್ಮರಿಸಲ್ಪಡುತ್ತದೆಯೆಂದು ಜೇಟ್ಲಿ ಅಭಿಪ್ರಾಯಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ನಾಯಕತ್ವದಲ್ಲಿ, ಈ ಸರಕಾರವು ನೂತನ ಇತಿಹಾಸವೊಂದನ್ನು ಬರೆಯಲು ಯತ್ನಿಸುತ್ತಿದೆಯೆಂದವರು ಹೇಳಿದರು.

ತನ್ನ ಭಾಷಣದಲ್ಲಿ ಆದಿತ್ಯನಾಥ್ ಸರಕಾರದ ಗುಣಗಾನ ಮಾಡಿದ ಅವರು ಕಳೆದ 11 ತಿಂಗಳುಗಳಲ್ಲಿ ಉತ್ತರಪ್ರದೇಶದಲ್ಲಿ ಕಾನೂನಿನ ಪ್ರಭುತ್ವ ಸ್ಥಾಪಿಸಲ್ಪಟ್ಟಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X