Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬರಗೂರು ಕಣ್ಣಲ್ಲಿ ‘ಶಿಕ್ಷಣದಲ್ಲಿ ಕನ್ನಡ’

ಬರಗೂರು ಕಣ್ಣಲ್ಲಿ ‘ಶಿಕ್ಷಣದಲ್ಲಿ ಕನ್ನಡ’

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ24 Feb 2018 12:12 AM IST
share
ಬರಗೂರು ಕಣ್ಣಲ್ಲಿ ‘ಶಿಕ್ಷಣದಲ್ಲಿ ಕನ್ನಡ’

ಬರಗೂರು ರಾಮಚಂದ್ರಪ್ಪ ಬಂಡಾಯ ಸಾಹಿತ್ಯದ ಸಂದರ್ಭದಲ್ಲಿ ಕೇಳಿ ಬಂದ ಪ್ರಮುಖ ಹೆಸರು. ಹಲವು ಸಾಮಾಜಿಕ ಚಳವಳಿಗಳಲ್ಲಿ ಗುರುತಿಸಿಕೊಂಡದ್ದಲ್ಲದೆ ಕನ್ನಡ ಭಾಷೆ ಪರಂಪರೆಗಾಗಿಯೂ ಅಪಾರ ಕೆಲಸ ಮಾಡಿದವರು. ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು ಬರಗೂರು. ತಾವು ನಂಬಿದ್ದನ್ನು ಬರೆಯುತ್ತಾ, ಬದುಕುತ್ತಾ ಬಂದಿರುವ ಅವರು ಸಾಹಿತ್ಯ, ಸಿನೆಮಾ, ಸಂಸ್ಕೃತಿ, ಸಂಘಟನೆ ಹೀಗೆ ವಿವಿಧ ನೆಲೆಗಳಿಗೆ ತಮ್ಮನ್ನು ಒಡ್ಡಿಕೊಂಡು ಬಂದ ವರು. ‘ಶಿಕ್ಷಣದಲ್ಲಿ ಕನ್ನಡ’ ಇಂದಿನ ದಿನಗಳಲ್ಲಿ ಚರ್ಚೆಯಲ್ಲಿರುವ ವಿಷಯ. ಬರಗೂರು ಈ ಕೃತಿಯಲ್ಲಿ ಕನ್ನಡವನ್ನು ಶಿಕ್ಷಣದಲ್ಲಿ ತರುವಾಗ ಎದುರಾಗುವ ಸವಾಲುಗಳು ಮತ್ತು ಅದನ್ನು ಎದುರಿಸುವ ಬಗೆಯನ್ನು ಚರ್ಚಿಸಿದ್ದಾರೆ. ವಿವಿಧ ಸಂದರ್ಭಗಳಲ್ಲಿ ಅವರು ವಿವಿಧ ಪತ್ರಿಕೆಗಳಿಗಾಗಿ ಬರೆದ ಲೇಖನಗಳನ್ನು ಇಲ್ಲಿ ಒಟ್ಟು ಸೇರಿಸಲಾಗಿದೆ. ಶಿಕ್ಷಣದಲ್ಲಿ ಕನ್ನಡದ ಸ್ಥಾನ, ಸಮಸ್ಯೆ, ಸವಾಲುಗಳನ್ನು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾಂವಿಧಾನಾತ್ಮಕ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ ಬರಹಗಳು ಇವು. ವಿವಿಧ ಸಂದರ್ಭಗಳಲ್ಲಿ ವಿಷಯ ವಿಶ್ಲೇಷಣೆ ಮಾಡಿದ್ದರಿಂದ ಓದುಗರಿಗೆ ಮನವರಿಕೆಯಾಗಬೇಕೆಂಬ ಕಾರಣಕ್ಕಾಗಿ ಕೆಲವು ಸಂಗತಿಗಳು ಪುನರುಕ್ತವಾಗಿವೆ. ಉದಾಹರಣೆಗೆ ಹೇಳುವುದಾದರೆ ಗೋಕಾಕ್ ಸಮಿತಿಯ ಸುತ್ತಮುತ್ತಲ ಸಂಗತಿಗಳು ಮತ್ತು ನ್ಯಾಯಾಲಯದಲ್ಲಿ ನಡೆದ ಮಾತೃಭಾಷಾ ಮಾಧ್ಯಮದ ಕಾನೂನು ಸಮರ ಸಂಗತಿಗಳು ಪುನರುಕ್ತವಾಗಿವೆ.

ಇಲ್ಲಿ ಒಟ್ಟು 10 ಲೇಖನಗಳಿವೆ. ಮೊದಲ ಲೇಖನದಲ್ಲಿ ಕನ್ನಡ, ಸಂಸ್ಕೃತಿ ಮತ್ತು ಸ್ವಾಯತ್ತೆಯ ಕುರಿತಂತೆ ಚರ್ಚಿಸಲಾಗಿದೆ. ಹಾಗೆಯೇ ಕನ್ನಡ ಮಾಧ್ಯಮಕ್ಕೆ ಸವಾಲಾಗಿರುವ ನ್ಯಾಯಾಲಯದ ತೀರ್ಪನ್ನು ಎದುರಿಸುವ ಬಗೆಯನ್ನು ಅವರು ಒಂದು ಲೇಖನದಲ್ಲಿ ಚರ್ಚಿಸಿದ್ದಾರೆ. ಹಾಗೆಯೇ ಇಂಗ್ಲಿಷ್‌ನ್ನೂ ತೊಡಗಿಸಿಕೊಂಡು ಕನ್ನಡವನ್ನು ಬದುಕುವ ಅಥವಾ ಅನ್ನ ಕೊಡುವ ಭಾಷೆಯಾಗಿ ಬೆಳೆಸುವ ಬಗೆಯನ್ನೂ ಅವರು ವಿವರಿಸುತ್ತಾರೆ. ಹಿಂದಿ ಹೇರಿಕೆ ಹೇಗೆ ಕನ್ನಡದ ಮೇಲೆ ತನ್ನ ಪರಿಣಾಮ ಬೀರಿದೆ ಎನ್ನುವುದನ್ನು ‘ಹಿಂದಿ ಹೇರಿಕೆಗೆ ಇದೆ ಒಂದು ಇತಿಹಾಸ’ ಲೇಖನದಲ್ಲಿ ಚರ್ಚಿಸುತ್ತಾರೆ. ಹಾಗೆಯೇ ಕಾಲೇಜು ಶಿಕ್ಷಣದಲ್ಲಿ ಕನ್ನಡವನ್ನು ಅನುಷ್ಠಾನಗೊಳಿಸುವುದರ ಹಿಂದಿನ ತೊಡಕುಗಳನ್ನು ಇನ್ನೊಂದು ಬರಹದಲ್ಲಿ ಚರ್ಚಿಸುತ್ತಾರೆ. ಈ ಕೃತಿ ಕನ್ನಡ ಭಾಷೆ ಮತ್ತು ಮಾಧ್ಯಮವನ್ನು ಭಾವುಕ ಕಣ್ಣಿನಿಂದ ನೋಡದೆ, ವಾಸ್ತವದ ನೆಲೆಯಲ್ಲಿ ನೋಡುತ್ತದೆ. ಆದುದರಿಂದಲೇ ಕನ್ನಡ ಮಾಧ್ಯಮದ ಅನುಷ್ಠಾನದ ಕುರಿತಂತೆ ಮಾತನಾಡುವವರಿಗೆ ಈ ಕೃತಿ ಒಂದು ಕೈ ಪಿಡಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹೊರತಂದಿರುವ ಕೃತಿಯ ಒಟ್ಟು ಪುಟಗಳು 80. ಮುಖಬೆಲೆ 60 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X