Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರದ್ಧೆಯಿಂದ ಮಾತ್ರ ಕಲಾವಿದ ಬೆಳೆಯಲು...

ಶ್ರದ್ಧೆಯಿಂದ ಮಾತ್ರ ಕಲಾವಿದ ಬೆಳೆಯಲು ಸಾಧ್ಯ: ದಿಲೀಪ್ ರಾನಡೆ

ಕಲಾವಿದ ತಲ್ಲೂರು ಎಲ್.ಎನ್. ಕುರಿತ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Feb 2018 5:22 PM IST
share
ಶ್ರದ್ಧೆಯಿಂದ ಮಾತ್ರ ಕಲಾವಿದ ಬೆಳೆಯಲು ಸಾಧ್ಯ: ದಿಲೀಪ್ ರಾನಡೆ

ಉಡುಪಿ, ಫೆ.24: ಕಲಾವಿದನೊಬ್ಬ ತೀವ್ರವಾದ ಶ್ರದ್ಧೆಯಿಂದ ಕೆಲಸ ಮಾಡಿದಾಗ ಮಾತ್ರ ಬೆಳೆಯಲು ಸಾಧ್ಯ ಎಂದು ಹಿರಿಯ ಕಲಾವಿದ ಹಾಗೂ ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ವಸ್ತುಸಂಗ್ರಹಾಲಯದ ಆಧುನಿಕ ಕಲೆಗಳ ವಿಭಾಗದ ನಿವೃತ್ತ ನಿರ್ದೇಶಕ ದಿಲೀಪ್ ರಾನಡೆ ಹೇಳಿದ್ದಾರೆ.
ಕಲಾವಿದ ತಲ್ಲೂರು ಎಲ್.ಎನ್. ಅವರ ಕುರಿತ ಪುಸ್ತಕವನ್ನು ಶುಕ್ರವಾರ ಮಣಿಪಾಲದ ಖಾಸಗಿ ಹೊಟೇಲಿನಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು. ಕಲಾವಿದ ತಲ್ಲೂರು ಎಲ್.ಎನ್. ಕಲೆಯನ್ನೇ ಬದುಕಾಗಿಸಿಕೊಂಡದ್ದರಿಂದಾಗಿ ಅವರು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.

ನಾಡೋಜ ಕೆ.ಪಿ.ರಾವ್ ಮಾತನಾಡಿ, ಇತರರ ಯೋಚನೆಗಳನ್ನು ಕೇಳುವ ಕಿವಿ ಹಾಗೂ ಅದನ್ನು ಗ್ರಹಿಸುವ ಎಳೆಯರ ಉತ್ಸಾಹ ಎರಡೂ ಕೂಡ ತಲ್ಲೂರು ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ತಿಳಿಸಿದರು.

ಮಣಿಪಾಲ್ ಬಳಗದ ವನಿತಾ ಪೈ ಮಾತನಾಡಿ, ತಲ್ಲೂರು ಕಲಾವಿದರಾಗಿ ಗಮನದಲ್ಲಿರಿಸಿಕೊಳ್ಳಬೇಕಾದ ದೇಶದ ಮೂರು ನಾಲ್ಕು ಮಂದಿಯಲ್ಲಿ ಒಬ್ಬರೆಂದು ಕಲೋದ್ಯಮದ ಸಮೀಕ್ಷೆಗಳು ಗುರುತಿಸಿವೆ. ಅಂತಹ ಕಲಾವಿದ ಈ ಭಾಗದವರಾಗಿರುವುದು ಮತ್ತು ಅವರು ಮಣಿಪಾಲ ಬಳಗದ ಹಿರಿಯ ಉಪೇಂದ್ರ ಪೈ ಅವರ ಸ್ಮಾರಕ ವೃತ್ತವನ್ನು ವಿನ್ಯಾಸ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಬೆಂಗಳೂರಿನ ಕಲಾ ವಿಮರ್ಶಕ ಗಿರಿಧರ ಖಾಸನೀಸ್, ಛಾಯಾಗ್ರಾಹಕ ಮಲ್ಲಿಕಾರ್ಜುನ ಕಟಕೋಳ, ಕಲಾವಿದೆ ಶಾಂತಾಮಣಿ, ಇಂಗ್ಲಂಡಿನ ಕ್ಯುರೇಟರ್ ಮೇರಿ ಜಾರ್ಜ್, ಮುಂಬಯಿಯ ಕಲಾವಿದ ಭುವನೇಶ್, ಪತ್ರಕರ್ತ ಸತೀಶ್ ಚಪ್ಪರಿಕೆ, ಉಡುಪಿ ಜಂಗಮ ಮಠದ ಡಾ. ಯು.ಸಿ.ನಿರಂಜನ, ಗ್ಯಾಲರಿಸ್ಟ್ ಡಾ.ಕಿರಣ ಆಚಾರ್ಯ, ಹಿರಿಯ ಕಲಾವಿದ ರಮೇಶ್ ರಾವ್, ಕಲಾವಿದರಾದ ಸಕುಪಾಂಗಾಳ, ಪುರುಷೋತ್ತಮ ಅಡ್ವೆ, ರಾಜೇಂದ್ರ ಕೇದಗೆ, ಕುಸುಮಾಧರ ಸೋನ ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಗಳ ಹಲವು ಮಂದಿ ಕಲಾವಿದರು, ಕಲಾಸಕ್ತರು ಪಾಲ್ಗೊಂಡಿದ್ದರು.
ತಲ್ಲೂರು ಎಲ್.ಎನ್. ಪುಸ್ತಕವನ್ನು ಪತ್ರಕರ್ತ ರಾಜಾರಾಂ ತಲ್ಲೂರು ಸಂಪಾ ದಿಸಿದ್ದು, ಅದರಲ್ಲಿ ಹರ್ಷ್ ಫಾಯ್, ಪೀಟರ್ ನ್ಯಾಗಿ, ಡಾ.ಹೊಲ್ಲಿ ಷಾಫರ್ ಮತ್ತಿತರ ಹಿರಿಯ ಕಲಾವಿಮರ್ಶಕರ ಲೇಖನಗಳು ಹಾಗೂ ತಲ್ಲೂರು ಎಲ್.ಎನ್. ಆರ್ಥಿಕತೆ ವಿಷಯದಲ್ಲಿ ರಚಿಸಿದ ಕಲಾಕೃತಿಗಳ ಚಿತ್ರಗಳು ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X