Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 400ಕ್ಕೂ ಅಧಿಕ ಡ್ರೋನ್‌ಗಳು,ಮುಂದಿನ...

400ಕ್ಕೂ ಅಧಿಕ ಡ್ರೋನ್‌ಗಳು,ಮುಂದಿನ ಪೀಳಿಗೆಯ ಶಸ್ತ್ರಾಸ್ತ್ರಗಳನ್ನು ಬಯಸಿರುವ ಭಾರತೀಯ ಸೇನೆ

ವಾರ್ತಾಭಾರತಿವಾರ್ತಾಭಾರತಿ24 Feb 2018 8:34 PM IST
share
400ಕ್ಕೂ ಅಧಿಕ ಡ್ರೋನ್‌ಗಳು,ಮುಂದಿನ ಪೀಳಿಗೆಯ ಶಸ್ತ್ರಾಸ್ತ್ರಗಳನ್ನು ಬಯಸಿರುವ ಭಾರತೀಯ ಸೇನೆ

ಹೊಸದಿಲ್ಲಿ,ಫೆ.24: ಮುಂದಿನ ಒಂದು ದಶಕದಲ್ಲಿ 400 ಕ್ಕೂ ಅಧಿಕ ವಿವಿಧ ಮಾದರಿಗಳ ಡ್ರೋನ್‌ಗಳನ್ನು ತಮ್ಮ ಬತ್ತಳಿಕೆಯಲ್ಲಿ ಹೊಂದಲು ಭಾರತೀಯ ಸಶಸ್ತ್ರ ಪಡೆಗಳು ಬಯಸಿವೆ. ಅಲ್ಲದೇ ಶತ್ರುಗುರಿಗಳು, ಜೊತೆಗೆ ಉಪಗ್ರಹಗಳನ್ನೂ ಧ್ವಂಸ ಮಾಡುವ ಸಾಮರ್ಥ್ಯವುಳ್ಳ ಅಧಿಕ ಶಕ್ತಿಯ ಲೇಸರ್‌ಗಳು ಮತ್ತು ಮೈಕ್ರೋವೇವ್‌ಗಳಂತಹ ನಿರ್ದೇಶಿತ ಶಕ್ತ್ಯಾಯುಧಗಳು(ಡಿಇಡಬ್ಲೂ) ಅವುಗಳಿಗೆ ಅಗತ್ಯವಾಗಿವೆ.

ರಕ್ಷಣಾ ಸಚಿವಾಲಯದ ನೂತನ ‘ತಂತ್ರಜ್ಞಾನ ದೃಷ್ಟಿಕೋನ ಮತ್ತು ಸಾಮರ್ಥ್ಯವೃದ್ಧಿ ಮಾರ್ಗಸೂಚಿ-2018’ರಲ್ಲಿ ಇಂತಹ ಹಲವಾರು ಮಿಲಿಟರಿ ಉಪಕರಣಗಳನ್ನು ಗುರುತಿಸಲಾಗಿದೆ. 2020ರ ದಶಕದಲ್ಲಿ ದೇಶದ ದಾಳಿ ಮತ್ತು ರಕ್ಷಣಾ ಮಿಲಿಟರಿ ಅಗತ್ಯಗಳ ಬಗ್ಗೆ ರಕ್ಷಣಾ ಕೈಗಾರಿಕೆಗಳು ಸಜ್ಜಾಗಲು ಅವುಗಳಿಗೆ ತಿಳುವಳಿಕೆಯನ್ನು ನೀಡುವುದು ಈ ಮಾರ್ಗಸೂಚಿಯ ಉದ್ದೇಶವಾಗಿದೆ.

  ಈ ಮಾರ್ಗಸೂಚಿಯು ತಂತ್ರಜ್ಞಾನ ಅಭಿವೃದ್ಧಿ, ಸಹಭಾಗಿತ್ವ ಮತ್ತು ಉತ್ಪಾದನಾ ವ್ಯವಸ್ಥೆಯ ಬಗ್ಗೆ ಯೋಜನೆಗಳನ್ನು ರೂಪಿಸಿಕೊಳ್ಳಲು ರಕ್ಷಣಾ ಕೈಗಾರಿಕೆಗಳಿಗೆ ನೆರವಾಗ ಬಹುದು. ಭಾರತೀಯ ಕೈಗಾರಿಕೆಯು ಯಾವುದೇ ಅಭಿವೃದ್ಧಿ ಕಾರ್ಯ ಮತ್ತು ಸಹಭಾಗಿತ್ವಕ್ಕೆ ಮುಂದಾಗುವ ಮುನ್ನ ‘ಮೇಕ್ ಇನ್ ಇಂಡಿಯಾ’ಕ್ಕೆ ಸರಕಾರದ ಉತ್ತೇಜನಕ್ಕೆ ಸೂಕ್ತ ಮಹತ್ವವನ್ನು ನೀಡಬೇಕು ಎಂದು ಮಾರ್ಗಸೂಚಿಯು ಹೇಳಿದೆ.

 ಮುಂದಿನ ತಲೆಮಾರಿನ ವಿನಾಶಕ ನೌಕೆಗಳು, ಯುದ್ಧನೌಕೆಗಳು ಮತ್ತು ಕ್ಷಿಪಣಿಗಳಿಂದ ಹಿಡಿದು ಪದಾತಿದಳಗಳ ಶಸ್ತ್ರಾಸ್ತ್ರಗಳು, ವಿಶೇಷ ಮದ್ದುಗುಂಡುಗಳು ಮತ್ತು ರಾಸಾಯನಿಕ, ಜೈವಿಕ, ವಿಕಿರಣಶೀಲ ಮತ್ತು ಪರಮಾಣು (ಸಿಬಿಆರ್‌ಎನ್) ರಕ್ಷಣಾ ವ್ಯವಸ್ಥೆಗಳವರೆಗೆ ಅತ್ಯಗತ್ಯ ಉಪಕರಣಗಳಲ್ಲದೆ, ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ವಿವಿಧ ಮಾದರಿಗಳ ಮಾನವರಹಿತ ವೈಮಾನಿಕ ವಾಹನಗಳು ಅಥವಾ ಡ್ರೋನ್‌ಗಳಿಗೂ ಮಾರ್ಗಸೂಚಿ ಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.

ಸಶಸ್ತ್ರ ಪಡೆಗಳು ಹಾಲಿ 200ಕ್ಕೂ ಅಧಿಕ ಡ್ರೋನ್‌ಗಳನ್ನು ಹೊಂದಿದ್ದು, ಈ ಪೈಕಿ ಹೆಚ್ಚಿನವು ಇಸ್ರೇಲ್‌ನಿಂದ ಆಮದಾಗಿವೆ.ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ)ಯು 2,650 ಕೋ.ರೂ.ಗಳ ವೆಚ್ಚದಲ್ಲಿ ‘ಘಾತಕ್’ ಡ್ರೋನ್‌ಗಳ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿ ಕೊಂಡಿದೆಯಾದರೂ, ಸೇನೆ ಮತ್ತು ನೌಕಾಪಡೆಗಳಿಗೆ 30 ಕ್ಕೂ ಅಧಿಕ ಹೋರಾಟ ದೂರನಿಯಂತ್ರಿತ ವಿಮಾನಗಳ ಅಗತ್ಯವಿದೆ ಎಂದು ಮಾರ್ಗಸೂಚಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X