Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೇನಲ್ಲಿ ಜೆರುಸಲೇಂಗೆ ರಾಯಭಾರಿ ಕಚೇರಿ...

ಮೇನಲ್ಲಿ ಜೆರುಸಲೇಂಗೆ ರಾಯಭಾರಿ ಕಚೇರಿ ಸ್ಥಳಾಂತರ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ24 Feb 2018 9:44 PM IST
share
ಮೇನಲ್ಲಿ ಜೆರುಸಲೇಂಗೆ ರಾಯಭಾರಿ ಕಚೇರಿ ಸ್ಥಳಾಂತರ: ಅಮೆರಿಕ

ವಾಶಿಂಗ್ಟನ್,ಫೆ.24: ಪ್ರಬಲ ಜಾಗತಿಕ ವಿರೋಧದ ನಡುವೆಯೇ ಅಮೆರಿಕವು ಇಸ್ರೇಲ್‌ನಲ್ಲಿರುವ ತನ್ನ ರಾಯಬಾರಿ ಕಚೇರಿಯನ್ನು ಟೆಲ್‌ಅವೀವ್‌ನಿಂದ ಜೆರುಸಲೇಂಗೆ ಮೇ ತಿಂಗಳ ವೇಳೆಗೆ ಸ್ಥಳಾಂತರಿಸಲಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಶುಕ್ರವಾರ ಘೋಷಿಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ಸನ್, ಹಲವು ವಾರಗಳ ವಿಳಂಬದ ಬಳಿಕ ರಾಯಭಾರಿ ಕಚೇರಿಗೆ ರೂಪಿಸಲಾದ ಭದ್ರತಾ ಯೋಜನೆಗೆ ಅಂತಿಮ ಒಪ್ಪಿಗೆ ನೀಡಿದ್ದಾರೆಂದು ಹಿಲ್ ವರದಿ ಮಾಡಿದ್ದಾರೆ.

      ‘‘ಇಸ್ರೇಲ್‌ನ ಉದಯದ 70ನೇ ವರ್ಷಾಚರಣೆಯ ಸಂದರ್ಭದಲ್ಲಿಯೇ ಅಮೆರಿಕದ ರಾಯಭಾರಿ ಕಚೇರಿಯು ಟೆಲ್‌ಅವೀವ್‌ನಿಂದ ಜೆರುಸಲೇಂಗೆ ಸ್ಥಳಾಂತರಿಸಲಿದೆ. ಆರಂಭದಲ್ಲಿ ರಾಯಭಾರಿ ಕಚೇರಿಯು, ಜೆರುಸಲೇಂನಲ್ಲಿರುವ ಅಮೆರಿಕದ ಕಾನ್ಸುಲೇಟ್ ಜನರಲ್ ಕಾರ್ಯಾಲಯವಿರುವ ಅತ್ಯಾಧುನಿಕ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದೆ’’ ಎಂದು ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರೆ ಹೀಥರ್ ನ್ಯೂಯೆರ್ಟ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

 2019ರೊಳಗೆ ಅಮೆರಿಕವು ತನ್ನ ರಾಯಬಾರಿ ಕಚೇರಿಯನ್ನು ಜೆರುಸಲೇಂನಲ್ಲಿ ಬೇರೆಯೇ ಇರುವ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಲಿದೆ ಎಂದು ಇಸ್ರೇಲ್ ಪ್ರದಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.

  ಈ ಮಧ್ಯೆ ಶ್ವೇತಭವವು ಹೇಳಿಕೆಯೊಂದನ್ನು ನೀಡಿ, ‘‘ ಟೆಲ್‌ಅವೀವ್‌ನಿಂದ ಜೆರುಸಲೇಂಗೆ ರಾಯಭಾರಿ ಕಚೇರಿಯನ್ನು ವರ್ಗಾಯಿಸುವ ಐತಿಹಾಸಿಕ ಕ್ರಮದ ಬಗ್ಗೆ ನಾವು ತುಂಬಾ ಪುಳಕಿತರಾಗಿದ್ದೇವೆ ಹಾಗೂ ಮೇ ತಿಂಗಳಲ್ಲಿ ರಾಯಭಾರ ಕಚೇರಿಯು ಜೆರುಸಲೇಂನಲ್ಲಿ ಆರಂಭಗೊಳ್ಳುವುದನ್ನು ಕಾತರದಿಂದ ನಿರೀಕ್ಷಿಸುತ್ತಿದ್ದೇವೆ ಎಂದು ತಿಳಿಸಿದೆ.

  ಡೊನಾಲ್ಡ್ ಟ್ರಂಪ್ ತನ್ನ ಶುಕ್ರವಾರದ ಭಾಷಣದಲ್ಲಿ ಅಮೆರಿಕದ ರಾಯಭಾರಿ ಕಚೇರಿಯನ್ನು ಜೆರುಸಲೇಂಗೆ ವರ್ಗಾಯಿಸುವುದಕ್ಕಾಗಿ, ಶ್ರೀಮಂತ ಅಮೆರಿಕನ್ ಹಾಗೂ ಯೆಹೂದಿ ದಾನಿಗಳಿಂದ ಯಥೇಚ್ಛ ದೇಣಿಗಳ್ನು ಸಂಗ್ರಹಿಸುವ ಸಾಧ್ಯತೆಯ ಬಗೆಗೂ ತಾನು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದರು.

  ಜೆರುಸಲೇಂ ನಗರವು ಮುಸ್ಲಿಮ್, ಕ್ರೈಸ್ತರು ಹಾಗೂ ಯಹೂದಿಗಳ ಪವಿತ್ರ ಶ್ರದ್ದಾಕೇಂದ್ರಗಳಿರುವ ಸ್ಥಳವಾಗಿದೆ. ಆದರೆ ಇದೊಂದು ವಿವಾದಿತ ಪ್ರದೇಶವಾಗಿದ್ದು, ಇಸ್ರೇಲ್ ಹಾಗೂ ಫೆಲೆಸ್ತೀನ್‌ಗಳೆರಡೂ ಈ ನಗರದ ಮೇಲೆ ಹಕ್ಕುಸ್ಥಾಪನೆಗೆ ಯತ್ನಿಸುತ್ತಿದ್ದಾರೆ. ಫೆಲೆಸ್ತೀನಿಯರು ಜೆರುಸಲೇಂ ನಗರವನ್ನು, ಭವಿಷ್ಯತ್ತಿನಲ್ಲಿ ಸ್ಥಾಪನೆಯಾಗಲಿರುವ ತಮ್ಮ ದೇಶದ ರಾಜಧಾನಿಯೆಂದು ಪರಿಗಣಿಸಿದ್ದಾರೆ.

ಪಶ್ಚಿಮದಂಡೆ, ಗಾಝಾಗಳಲ್ಲಿ ಭುಗಿಲೆದ್ದ ಪ್ರತಿಭಟನೆ

 ಇಸ್ರೇಲ್‌ನಲ್ಲಿರುವ ತನ್ನ ರಾಯಭಾರಿ ಕಚೇರಿಯನ್ನು ಟೆಲ್‌ಅವೀವ್‌ನಿಂದ ಜೆರುಸಲೇಂ ನಗರಕ್ಕೆ ಮೇ ತಿಂಗಳಲ್ಲಿ ಸ್ಥಳಾಂತರಿಸುವ ಅಮೆರಿಕದ ನಿರ್ಧಾರಕ್ಕೆ ಅರಬ್ ಹಾಗೂ ಇತರ ಮುಸ್ಲಿಂ ರಾಷ್ಟ್ರಗಳಿಂದ ವ್ಯಾಪಕ ಖಂಡನೆ ಹಾಗೂ ಪ್ರತಿಭಟನೆ ವ್ಯಕ್ತವಾಗಿದೆ.

  ಮೇ ತಿಂಗಲ್ಲಿ ಜೆರುಸಲೇಂ ನಗರಕ್ಕೆ ತನ್ನ ರಾಯಭಾರಿ ಕಚೇರಿಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ಅಮೆರಿಕವು ಶುಕ್ರವಾರ ಪ್ರಕಟಿಸಿದ ಬೆನ್ನಲ್ಲೇ ಇಸ್ರೇಲಿ ಸೈನಿಕರು ಹಾಗೂ ಫೆಲೆಸ್ತೀನ್ ಪ್ರತಿಭಟನಕಾರರ ಮಧ್ಯೆ ಪಶ್ಚಿಮದಂಡೆ ಹಾಗೂ ಗಾಝಾ ಪಟ್ಟಿ ಪ್ರದೇಶಗಳಲ್ಲಿ ಭಾರೀ ಘರ್ಷಣೆಗಳು ಭುಗಿಲೆದ್ದಿದ್ದು, ಕನಿಷ್ಠ 32 ಮಂದಿ ಫೆಲೆಸ್ತೀನ್ ನಾಗರಿಕರು ಗಾಯಗೊಂಡಿದ್ದಾರೆಂದು ಫೆಲೆಸ್ತೀನ್ ರೆಡ್ ಕ್ರಿಸೆಂಟ್ ಸೊಸೈಟಿಯು ತಿಳಿಸಿದೆ.

ಶುಕ್ರವಾರ ಮಧ್ಯಾಹ್ನ ಸಹಸ್ರಾರು ಫೆಲೆಸ್ತೀನಿಯರು ಪಶ್ಚಿಮದಂಡೆಯ ವಿವಿಧ ಸ್ಥಳಗಳಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಗಾಝಾ ಪಟ್ಟಿಗೆ ತಾಗಿಕೊಂಡಿರುವ ಇಸ್ರೇಲ್ ಗಡಿ ಸಮೀಪವೂ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆಂದು ‘ಹಾರೆಟ್ಝ್ ಡೈಲಿ’ ಪತ್ರಿಕೆ ವರದಿ ಮಾಡಿದೆ.

 ಅಮೆರಿಕವು ತನ್ನ ರಾಯಭಾರಿ ಕಚೇರಿಯನ್ನು ಜೆರುಸಲೇಂಗೆ ಸ್ಥಳಾಂತರಿಸುತ್ತಿರುವುದು ಅಸ್ವೀಕಾರಾರ್ಹ ನಡೆಯೆಂದು ಫೆಲೆಸ್ತೀನ್ ಅಧ್ಯಕ್ಷ ಮುಹಮ್ಮದ್ ಅಬ್ಬಾಸ್ ಅವರ ವಕ್ತಾರ ನಬಿಲ್ ಅಬು ರದೈನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಕೈಗೊಳ್ಳುವ ಯಾವುದೇ ಏಕಪಕ್ಷೀಯ ಕ್ರಮದಿಂದ ಅದಕ್ಕೆ ಮಾನ್ಯತೆ ಸಿಗಲಾರದು ಹಾಗೂ ಪ್ರದೇಶದಲ್ಲಿ ಶಾಂತಿಯನ್ನು ಸೃಷ್ಟಿಸುವ ಯಾವುದೇ ಪ್ರಯತ್ನಕ್ಕೂ ಅಡ್ಡಿಯಾಗಲಿದೆಯೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X