Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾತ್ಮಾಗಾಂಧಿ ವಿಚಾರಧಾರೆಗಳು ಇಂದಿನ...

ಮಹಾತ್ಮಾಗಾಂಧಿ ವಿಚಾರಧಾರೆಗಳು ಇಂದಿನ ಯುವಜನತೆಗೆ ಸ್ಫೂರ್ತಿದಾಯಕ: ಮೀರಾನಾಯಕ್

ವಾರ್ತಾಭಾರತಿವಾರ್ತಾಭಾರತಿ24 Feb 2018 10:30 PM IST
share

ಮೈಸೂರು,ಫೆ.24: ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮಾಗಾಂಧಿಯವರ ವಿಚಾರಧಾರೆಗಳು ಇಂದಿನ ಯುವಜನತೆಗೆ ಸ್ಫೂರ್ತಿದಾಯಕವಾಗಿವೆ ಎಂದು ಸಾಮಾಜಿಕ ಕಾರ್ಯಕರ್ತೆ ಮೀರಾ ನಾಯಕ್ ಅಭಿಪ್ರಾಯಪಟ್ಟರು.

ಅವರು ಶನಿವಾರ ಮಾನಸಗಂಗೋತ್ರಿಯ ಗಾಂಧಿ ಭವನ ಸಭಾಂಗಣದಲ್ಲಿ ಮೈಸೂರು ವಿ.ವಿ.ಗಾಂಧಿ ಕೇಂದ್ರದ ವತಿಯಿಂದ ಮಹಾತ್ಮಗಾಂಧಿಯವರ ವಿಚಾರಗಳಿಗೆ ಸಂಬಂಧಿಸಿದ ವಿಶೇಷ ಉಪನ್ಯಾಸಮಾಲೆ ಹಾಗೂ ಸಂವಾದ ಕಾರ್ಯಕ್ರಮವನ್ನು ಮಹಾತ್ಮಗಾಂಧಿಯವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. 

ಗಾಂಧೀಜಿಯವರ ಸ್ವಾತಂತ್ರ್ಯ ಪ್ರೇಮದಿಂದಾಗಿ ದೇಶವು ಬ್ರಿಟಿಷರ ಕಪಿ ಮುಷ್ಠಿಯಿಂದ ಸ್ವಾತಂತ್ರ್ಯ ಪಡೆಯಿತು. ಸ್ವಾತಂತ್ರ್ಯ ಪಡೆಯುವ ನಿಟ್ಟಿನಲ್ಲಿ ಮಹಾತ್ಮಾಗಾಂಧಿ, ಸುಭಾಷ್‍ಚಂದ್ರಬೋಸ್, ಭಗತ್‍ಸಿಂಗ್ ಸೇರಿದಂತೆ ಹಲವಾರು ನಾಯಕರು ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ವಿಶೇಷವಾಗಿ ಗಾಂಧಿಯವರ ಅಹಿಂಸಾ ಚಳುವಳಿಗೆ ಬೆದರಿದ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡದ ಹೊರತು ಅನ್ಯಮಾರ್ಗವಿಲ್ಲವೆಂಬುದನ್ನು ಅರಿತು ಕೂಡಲೇ ಭಾರತಕ್ಕೆ ಸ್ವಾತಂತ್ರ್ಯ ನೀಡಿದರು ಎಂದರು.

ನಾನೂ ಕೂಡ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ದಿಸೆಯಲ್ಲಿ ಹೋರಾಟ ಮಾಡಿದವರಲ್ಲೊಬ್ಬರ ಮೊಮ್ಮಗಳಾಗಿದ್ದು ನಾನು ಪ್ರಾಥಮಿಕ ಶಾಲೆಯನ್ನು ಉ.ಕರ್ನಾಟಕದಲ್ಲಿ ಕಲಿಯುತ್ತಿದ್ದ ವೇಳೆ ಗಾಂಧೀಜಿಯವರ ಹೋರಾಟದ ಬಗ್ಗೆ ತಿಳಿದುಕೊಂಡಿದ್ದೆ. ನಾನು ಓದುತ್ತಿದ್ದ ಶಾಲೆಯಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಕಣ್ತಪ್ಪಿಸಿ ಅಲ್ಲಿ ನೆಲೆಸಿ ಸ್ವಾತಂತ್ರ್ಯ ಯೋಧರಿಗೆ ಉತ್ತೇಜನ ನೀಡುತ್ತಿದ್ದರು. ಈಗ ಆ ಶಾಲೆಯು ನವೀಕರಣಗೊಂಡಿರುವುದು ಸಂತಸದ ಸಂಗತಿ ಎಂದರು.

ಗಾಂಧೀಜಿಯವರು ಅನೇಕ ವಿಚಾರಧಾರೆಗಳನ್ನು ರಚಿಸಿದ್ದಾರೆ. ಅದರಲ್ಲಿ ಕೆಲವು ಇಂದಿನ ಯುವಜನತೆಗೆ ಸ್ಫೂರ್ತಿಯನ್ನು ತುಂಬುವಂತಹವುಗಳಾಗಿರುವುದರಿಂದ ಇಂತಹ ವಿಚಾರಧಾರೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಅವುಗಳಿಗೆ ತಕ್ಕಂತೆ ನಡೆದುಕೊಳ್ಳುವುದರ ಮೂಲಕ ಮಹಾತ್ಮಗಾಂಧಿಯವರನ್ನು ನೆನಪು ಮಾಡಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜವಾದಿ ಚಿಂತಕ ಪ.ಮಲ್ಲೇಶ್, ಮೈಸೂರು ವಿವಿ ಕುಲಸಚಿವೆ ಡಿ.ಭಾರತಿ, ಗಾಂಧಿ ಭವನ ನಿರ್ದೇಶಕ ಎಂ.ಎಸ್.ಶೇಖರ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X