Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ. 26: ಮಂಗಳೂರು ವಿಶ್ವವಿದ್ಯಾನಿಲಯದ...

ಫೆ. 26: ಮಂಗಳೂರು ವಿಶ್ವವಿದ್ಯಾನಿಲಯದ 36ನೆ ಘಟಿಕೋತ್ಸವ

97 ಮಂದಿಗೆ ಪಿಎಚ್‌ಡಿ ಪ್ರದಾನ, 65 ವಿದ್ಯಾರ್ಥಿಗಳಿಗೆ ಪ್ರಥಮ ರ್ಯಾಂಕ್ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ24 Feb 2018 10:59 PM IST
share
ಫೆ. 26: ಮಂಗಳೂರು ವಿಶ್ವವಿದ್ಯಾನಿಲಯದ 36ನೆ ಘಟಿಕೋತ್ಸವ

ಮಂಗಳೂರು, ಫೆ.24: ಮಂಗಳೂರು ವಿಶ್ವವಿದ್ಯಾನಿಲಯದ 36ನೆ ವಾರ್ಷಿಕ ಘಟಿಕೋತ್ಸವವು ಫೆ.26ರಂದು ಪೂ.11ಕ್ಕೆ ವಿವಿ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರು ವಿವಿ ಕುಲಪತಿ ಡಾ. ಕೆ.ಭೈರಪ್ಪ ಹೇಳಿದರು.

ನಗರದ ಮಂಗಳೂರು ವಿವಿ ಕಾಲೇಜಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಂಗಾಪುರ ನಾನ್ಯಾಂಗ್ ತಾಂತ್ರಿಕ ವಿಶ್ವವಿದ್ಯಾನಿಲಯದ ಅಧ್ಯಕ್ಷ ಪ್ರೊ. ಸುಬ್ರ ಸುರೇಶ್ ಮುಖ್ಯ ಅತಿಥಿಯಾಗಿ ಟಿಕೋತ್ಸವ ಭಾಷಣ ಮಾಡಲಿರುವರು. ರಾಜ್ಯಪಾಲ ಹಾಗೂ ವಿವಿ ಕುಲಾಧಿಪತಿ ವಾಜುಭಾಯಿ ರೂಡಾಭಾಯಿ ವಾಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನೆರವೇರಿಸುವರು. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ 97 ಮಂದಿಗೆ ಡಾಕ್ಟರೇಟ್ ಪದವಿ (ಕಲೆ-17, ವಿಜ್ಞಾನ 74, ವಾಣಿಜ್ಯ-04, ಶಿಕ್ಷಣ-02), 45 ಮಂದಿಗೆ ಚಿನ್ನದ ಪದಕ ಮತ್ತು 75 ಮಂದಿಗೆ ನಗದು ಬಹುಮಾನ ನೀಡಲಾಗುವುದು. ವಿವಿಧ ಕೋರ್ಸುಗಳ 242 ರ್ಯಾಂಕ್‌ಗಳಲ್ಲಿ ಪ್ರಥಮ ರಾಂಕ್ ಪಡೆದ 65 ಮಂದಿಗೆ ರ್ಯಾಂಕ್ ಪ್ರಮಾಣ ಪತ್ರ (ಸ್ನಾತಕೋತ್ತರ ಪದವಿ-48 ಮತ್ತು ಪದವಿ-17: ಕಲೆ-17, ವಿಜ್ಞಾನ ಮತ್ತು ತಂತ್ರಜ್ಞಾನ-33, ವಾಣಿಜ್ಯ-10, ಶಿಕ್ಷಣ-02, ಸ್ನಾತಕೋತ್ತರ ಡಿಪ್ಲೊಮಾ-03) ನೀಡಲಾಗುವುದು ಎಂದು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯವು 2016-17ನೆ ಸಾಲಿನಲ್ಲಿ ನಡೆಸಿದ ವಿವಿಧ ಪರೀಕ್ಷೆಗಳಿಗೆ ಹಾಜರಾದ 36,280 ವಿದ್ಯಾರ್ಥಿಗಳ ಪೈಕಿ 26,164 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಗೆ 6,323 ವಿದ್ಯಾರ್ಥಿಗಳು ಹಾಜರಾಗಿದ್ದು, 5,929 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪದವಿ ಪರೀಕ್ಷೆಗೆ 29,843 ವಿದ್ಯಾರ್ಥಿಗಳು ಹಾಜರಾಗಿದ್ದು, 20,122 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ನಾತಕೋತ್ತರ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಡಾ.ಕೆ. ಭೈರಪ್ಪ ತಿಳಿಸಿದರು.

ಘಟಿಕೋತ್ಸವದಲ್ಲಿ ಪ್ರೊ. ಸುಬ್ರ ಸುರೇಶ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಡಾ.ಕೆ. ಭೈರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಂ.ಎಂ.ಖಾನ್, ಕುಲಸಚಿವ ಪ್ರೊ.ಬಿ.ಎಸ್. ನಾಗೇಂದ್ರ ಪ್ರಕಾಶ್, ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಉದಯ್‌ಕುಮಾರ್ ಇರ್ವತ್ತೂರು, ಪ್ರೊ.ರವೀಂದ್ರ ಆಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X