Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ರ‍್ಯಾಫ್ಟಿಂಗ್‌ ಮೇಲೆ ಹಿಡಿತ...

ಮಡಿಕೇರಿ: ರ‍್ಯಾಫ್ಟಿಂಗ್‌ ಮೇಲೆ ಹಿಡಿತ ಸಾಧಿಸಲು ಉದ್ಯಮಿಗಳ ಹುನ್ನಾರ; ಚಿದಾನಂದ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Feb 2018 11:33 PM IST
share
ಮಡಿಕೇರಿ: ರ‍್ಯಾಫ್ಟಿಂಗ್‌ ಮೇಲೆ ಹಿಡಿತ ಸಾಧಿಸಲು ಉದ್ಯಮಿಗಳ ಹುನ್ನಾರ; ಚಿದಾನಂದ ಆರೋಪ

ಮಡಿಕೇರಿ ಫೆ.24: ಜಿಲ್ಲೆಯ ಸಾವಿರಾರು ಮಂದಿಗೆ ಉದ್ಯೋಗ ಕಲ್ಪಿಸಿರುವ ರ್ಯಾಫ್ಟಿಂಗ್‍ನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳಲು ಕೆಲವು ವಿಕೃತ ಮನೋಭಾವದ ಉದ್ಯಮಿಗಳು ಕುತಂತ್ರ ನಡೆಸುತ್ತಿದ್ದು, ರ್ಯಾಫ್ಟಿಂಗ್ ಕೇಂದ್ರಗಳನ್ನು ಟೆಂಡರ್ ಮೂಲಕ ನೀಡಿದಲ್ಲಿ ಸ್ಥಳೀಯರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ರ್ಯಾಫ್ಟಿಂಗ್ ಕೇಂದ್ರದ ಮಾಲೀಕರೂ ಆಗಿರುವ ಗುಡ್ಡೆಹೊಸೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ಚಿದಾನಂದ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯಮಿಗಳು ಮಾತ್ರ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲಿದ್ದು, ಟೆಂಡರ್ ಪ್ರಕ್ರಿಯೆಯಿಂದ ಯುವ ಸಮೂಹ ಬೀದಿ ಪಾಲಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ದುಬಾರೆಯಲ್ಲಿ ಪ್ರವಾಸಿಗನೊಬ್ಬನ ಮೇಲೆ ನಡೆದ ಹಲ್ಲೆ ಪ್ರಕರಣದ ಬಳಿಕ ಕಳೆದ ಎರಡು ವಾರಗಳಿಂದ ರ್ಯಾಫ್ಟಿಂಗ್ ಬಗ್ಗೆ ಹಲವು ಆರೋಪಗಳು ಕೇಳಿ ಬಂದಿದೆ. ಇದರ ಹಿಂದೆ ಈ ಉದ್ಯಮವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಷಡ್ಯಂತ್ರ ಅಡಗಿದೆ ಎಂದು ಆರೋಪಿಸಿದರು.

ಕೊಡಗು ಇಂದು ಪ್ರವಾಸೋದ್ಯಮದಲ್ಲಿ ವಿಶ್ವ ಪ್ರಸಿದ್ಧಿ ಪಡೆಯಲು ರ್ಯಾಫ್ಟಿಂಗ್ ಕೂಡಾ ಕಾರಣವಾಗಿದೆ. ರ್ಯಾಫ್ಟಿಂಗ್ ನಡೆಸುವವರು ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ ಪಡೆದು ಅದನ್ನು ನಡೆಸುತ್ತಿದ್ದು, ಎಲ್ಲಾ ರ್ಯಾಫ್ಟಿಂಗ್ ಕೇಂದ್ರಗಳು ಪಬ್ಲಿಕ್ ಲಯಬಿಲಿಟಿ ಇನ್ಸೂರೆನ್ಸ್‍ನಿಂದ ರಕ್ಷಿಸಲ್ಪಟ್ಟಿವೆ. ಅಲ್ಲದೆ ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಇಂದಿನ ದಿನಗಳಲ್ಲಿ ಸುಮಾರು 900ರಿಂದ 1000 ಕುಟುಂಬಗಳಿಗೆ ಉದ್ಯೋಗವನ್ನೂ ನೀಡಿವೆ ಎಂದು ಚಿದಾನಂದ ತಿಳಿಸಿದರು.

ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸರಕಾರಗಳು ಇಂದು ಹಲವಾರು ಯೋಜನೆಗಳಡಿ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡುತ್ತಿವೆ. ಆದರೆ ಇದರ ಯಾವುದೇ ಪ್ರಯೋಜನವನ್ನು ಪಡೆಯದೆ ರ್ಯಾಫ್ಟಿಂಗ್ ಕೇಂದ್ರಗಳು ತಮ್ಮ ಉಳಿತಾಯದಲ್ಲಿ ಉದ್ಯೋಗವನ್ನು ಸೃಷ್ಟಿಸಿದ್ದು, ಉದ್ಯೋಗ ಪಡೆದವರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಹಾಗೂ ಇತರ ವರ್ಗದವರೂ ಇದ್ದಾರೆ ಎಂದು ಹೇಳಿದರು.

ಇಂತಹ ಒಂದು ಉದ್ಯಮವನ್ನು ಇಂದು ಕೆಲವು ವಿಕೃತ ಮನೋಭಾವದ ಉದ್ಯಮಗಳು ತಮ್ಮ ತೆಕ್ಕೆಗೆ ಪಡೆಯುವ ಹುನ್ನಾರವನ್ನು ನಡೆಸುತ್ತಿದ್ದು, ರ್ಯಾಫ್ಟಿಂಗ್ ಕೇಂದ್ರಗಳನ್ನು ಟೆಂಡರ್ ಮೂಲಕ ನೀಡಲು ಜಿಲ್ಲಾಡಳಿತದ ಮೇಲೆ ಒತ್ತಡ ಹೇರುತ್ತಿವೆ. ಸಾವಿನಲ್ಲೂ ವ್ಯಾಪಾರ ನಡೆಸುವ ನೀಚ ಸ್ಥಿತಿಗೆ ಉದ್ಯಮಿಗಳು ತಲುಪುತ್ತಿರುವುದು ಕೊಡಗಿನ ಘನತೆಗೆ ಕಪ್ಪು ಚುಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಸತ್ಯಾಂಶಗಳನ್ನು ಪರಿಶೀಲಿಸಿ, ಉದ್ಯಮಿಗಳಿಂದ ಸಾವಿರಾರು ಕುಟುಂಬಗಳು ಬೀದಿ ಪಾಲಾಗುವುದನ್ನು ತಡೆಯಬೇಕಿದೆ ಎಂದರು.
ರ್ಯಾಫ್ಟಿಂಗ್ ಕೇಂದ್ರಗಳಲ್ಲಿ ನೈರ್ಮಲ್ಯ ಕಾಪಾಡುವುದು ಆಯಾ ಕೇಂದ್ರದ ಮಾಲೀಕರ ಆದ್ಯ ಕರ್ತವ್ಯವಾಗಿದೆ ಎಂದು ಪ್ರತಿಪಾದಿಸಿದ ಚಿದಾನಂದ, ದುಬಾರೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾನೂನು ಕ್ರಮ ಜರುಗಿಸಿದೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಗಣಪತಿ, ವಿನೋದ್ ಸಿದ್ದಯ್ಯ, ರಾಮು ಹಾಗೂ ಉಮೇಶ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X