Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ನಾಟಕ ತಂಡ ಫೈನಲ್ ಗೆ

ಕರ್ನಾಟಕ ತಂಡ ಫೈನಲ್ ಗೆ

ಮಯಾಂಕ್, ನಾಯರ್ ಭರ್ಜರಿ ಬ್ಯಾಟಿಂಗ್

ವಾರ್ತಾಭಾರತಿವಾರ್ತಾಭಾರತಿ24 Feb 2018 11:42 PM IST
share
ಕರ್ನಾಟಕ ತಂಡ ಫೈನಲ್ ಗೆ

ಹೊಸದಿಲ್ಲಿ, ಫೆ.24: ವಿಜಯ್ ಹಝಾರೆ ಟ್ರೋಫಿ ಸೆಮಿಫೈನಲ್‌ನಲ್ಲಿ ಇಂದು ಮಹಾರಾಷ್ಟ್ರದ ವಿರುದ್ಧ ಭರ್ಜರಿ ಜಯ ಗಳಿಸಿರುವ ಕರ್ನಾಟಕ ಫೈನಲ್ ಪ್ರವೇಶಿಸಿದೆ.

 ಫಿರೋಝ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಗೆಲುವಿಗೆ 161 ರನ್‌ಗಳ ಸವಾಲನ್ನು ಪಡೆದ ಕರ್ನಾಟಕ ತಂಡ ಇನ್ನೂ 117 ಎಸೆತಗಳು ಬಾಕಿ ಇರುವಾಗಲೇ 1 ವಿಕೆಟ್ ನಷ್ಟದಲ್ಲಿ 164 ರನ್ ಗಳಿಸಿ ಗೆಲುವಿನ ದಡ ಸೇರಿತು. ಮಯಾಂಕ್ ಅಗರ್‌ವಾಲ್ 81 ರನ್(116ನಿ, 86ಎ, 8ಬೌ,1ಸಿ) ಮತ್ತು ನಾಯಕ ಕರುಣ್ ನಾಯರ್ ಔಟಾಗದೆ 70 ರನ್(125ನಿ, 90ಎ, 10ಬೌ) ಗಳಿಸಿ ತಂಡಕ್ಕೆ ಫೈನಲ್‌ನಲ್ಲಿ ಅವಕಾಶ ದೃಢಪಡಿಸಲು ನೆರವಾದರು.

ಕರ್ನಾಟಕ ತಂಡದ ಆರಂಭಿಕ ದಾಂಡಿಗರಾದ ಮಯಾಂಕ್ ಅಗರವಾಲ್ ಮತ್ತು ಕರುಣ್ ನಾಯರ್ ಅವರು ಮೊದಲ ವಿಕೆಟ್‌ಗೆ 28.5 ಓವರ್‌ಗಳಲ್ಲಿ 155 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರು. ತಂಡದ ಗೆಲುವಿಗೆ 6 ರನ್‌ಗಳ ಆವಶ್ಯಕತೆ ಇದ್ದಾಗ ಅಗರವಾಲ್ ಅವರನ್ನು ಮಹಾರಾಷ್ಟ್ರ ತಂಡದ ಸತ್ಯಜಿತ್ ಬಚ್ಚಾವ್ ಅವರು ಪೆವಿಲಿಯನ್‌ಗೆ ಅಟ್ಟಿದರು. ಬಚ್ಚಾವ್ ಎಸೆತದಲ್ಲಿ ಅಗರವಾಲ್ ಅವರು ನಿಖಿಲ್ ನಾಯ್ಕಾಗೆ ಕ್ಯಾಚ್ ನೀಡಿದರು.

 ಬಳಿಕ ಕ್ರೀಸ್‌ಗೆ ಆಗಮಿಸಿದ ಆರ್.ಸಮರ್ಥ್ ಔಟಾಗದೆ 3 ರನ್ ಗಳಿಸಿದರು. 30.3ನೇ ಓವರ್‌ನಲ್ಲಿ ಕರುಣ್ ನಾಯರ್ ಅವರು ಬಚ್ಚಾವ್ ಎಸೆತದಲ್ಲಿ ಚೆಂಡನ್ನು ಬೌಂಡರಿ ಗೆರೆ ದಾಟಿಸಿ ಗೆಲುವಿನ ವಿಧಿ ವಿಧಾನವನ್ನು ಪೂರೈಸಿದರು.

ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಮಹಾರಾಷ್ಟ್ರ ತಂಡ ಕರ್ನಾಟಕದ ಆಟಗಾರರ ಸಂಘಟಿತ ದಾಳಿಗೆ ಸಿಲುಕಿ 44.3 ಓವರ್‌ಗಳಲ್ಲಿ 160 ರನ್‌ಗಳಿಗೆ ಆಲೌಟಾಗಿತ್ತು.

 ಶ್ರೀಕಾಂತ್ ಮುಂಢೆ (50) ತಂಡದ ಪರ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದರು. ಇವರನ್ನು ಹೊರತುಪಡಿಸಿದರೆ ಎನ್.ಎಸ್.ಶೇಖ್ 42 ರನ್ ಗಳಿಸಿದರು.

ಮಹಾರಾಷ್ಟ್ರ ತಂಡ ಮೊದಲ ಓವರ್‌ನ 5ನೇ ಎಸೆತದಲ್ಲಿ ಋತುರಾಜ್ ಗಾಯಕ್‌ವಾಡ್ (1) ವಿಕೆಟ್‌ನ್ನು ಕಳೆದುಕೊಂಡಿತ್ತು. ಪ್ರಸಿದ್ಧ್ ಕೃಷ್ಣ ಅವರ ಓವರ್‌ನ 5ನೇ ಎಸೆತದಲ್ಲಿ ಗಾಯಕ್‌ವಾಡ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

ಎರಡನೇ ವಿಕೆಟ್‌ಗೆ ಮುಂಢೆ ಮತ್ತು ನಾಯಕ ರಾಹುಲ್ ತ್ರಿಪಾಠಿ 57ರನ್‌ಗಳ ಜೊತೆಯಾಟ ನೀಡಿದರು. ತ್ರಿಪಾಠಿ 16 ರನ್ ಗಳಿಸಿದರು.

ತ್ರಿಪಾಠಿ ನಿರ್ಗಮನದ ಬಳಿಕ ಅಂಕಿತ್ ಬಾವ್ನೆ ಕ್ರೀಸ್‌ಗೆ ಆಗಮಿಸಿದರು. ಇವರ ಜೊತೆಯಾಟದಲ್ಲಿ 36 ರನ್ ಬಂತು. ಮುಂಢೆ 107 ನಿಮಿಷಗಳ ಬ್ಯಾಟಿಂಗ್‌ನಲ್ಲಿ 77 ಎಸೆತಗಳನ್ನು ಎದುರಿಸಿದರು. 5 ಬೌಂಡರಿಗಳ ಸಹಾಯದಿಂದ ಅರ್ಧಶತಕ ದಾಖಲಿಸಿ ರೋನಿತ್ ಮೋರೆಗೆ ವಿಕೆಟ್ ಒಪ್ಪಿಸಿದರು. ಬಾವ್ನೆ 18 ರನ್ ಗಳಿಸಿದರು.

 ಮುಂಢೆ ಔಟಾದ ಬಳಿಕ ಮಹಾರಾಷ್ಟ್ರದ ಬ್ಯಾಟಿಂಗ್ ದುರ್ಬಲಗೊಂಡಿತು. ಕೇವಲ 65 ರನ್‌ಗಳಿಗೆ ಅಂತಿಮ 7 ವಿಕೆಟ್‌ಗಳು ಉರುಳಿತು. ಅಂತಿಮವಾಗಿ ಶೇಖ್ ಅವರು ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಅಗರವಾಲ್ ಅವರಿಗೆ ಕ್ಯಾಚ್ ನೀಡುವುದರೊಂದಿಗೆ ಮಹಾರಾಷ್ಟ್ರದ ಇನಿಂಗ್ಸ್ ಮುಕ್ತಾಯಗೊಂಡಿತು. ಕರ್ನಾಟಕ ತಂಡದ ಗೌತಮ್ 26ಕ್ಕೆ 3 ವಿಕೆಟ್, ಪ್ರಸಿದ್ಧ್ ಕೃಷ್ಣ 26ಕ್ಕೆ 2, ಟಿ.ಪ್ರದೀಪ್, ರೋನಿತ್ ಮೋರೆ ಮತ್ತು ಕೆ.ಗೌತಮ್ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X