Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುರಿಸಾಧನೆಯ ಒತ್ತಡದಿಂದಾಗಿ...

ಗುರಿಸಾಧನೆಯ ಒತ್ತಡದಿಂದಾಗಿ ಉದ್ಯೋಗಿಗಳಿಗೆ ಕಾಯಿಲೆ: ಅಸೋಚಾಮ್

ವಾರ್ತಾಭಾರತಿವಾರ್ತಾಭಾರತಿ26 Feb 2018 9:31 PM IST
share
ಗುರಿಸಾಧನೆಯ ಒತ್ತಡದಿಂದಾಗಿ ಉದ್ಯೋಗಿಗಳಿಗೆ ಕಾಯಿಲೆ: ಅಸೋಚಾಮ್

ಹೊಸದಿಲ್ಲಿ,ಫೆ.26: ಉದ್ಯೋಗದಾತರು ನಿಗದಿಗೊಳಿಸಿರುವ ಕಠಿಣ ಗುರಿಗಳಿಂದಾಗಿ ತೀವ್ರ ಒತ್ತಡದಲ್ಲಿರುವ ಕಾರ್ಪೊರೇಟ್ ಸಂಸ್ಥೆಗಳ ಉದ್ಯೋಗಿಗಳಿಗೆ ದಿನಕ್ಕೆ ಕನಿಷ್ಠ ನಾಲ್ಕರಿಂದ ಆರು ಗಂಟೆಗಳ ಕಾಲವೂ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಇದರಿಂದಾಗಿ ಅವರು ಅಧಿಕ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಅಸೋಚಾಮ್‌ನ ಆರೋಗ್ಯ ರಕ್ಷಣೆ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

 ತರ್ಕಹೀನ ಮತ್ತು ಅವಾಸ್ತವಿಕ ಗುರಿಗಳನ್ನು ನಿಗದಿಗೊಳಿಸುವುದರಿಂದ ಸೃಷ್ಟಿಯಾಗುವ ಒತ್ತಡದಿಂದಾಗಿ ಉದ್ಯೋಗಿಗಳು ನಿದ್ರಾಹೀನತೆಗೆ ಗುರಿಯಾಗುತ್ತಿದ್ದಾರೆ ಮತ್ತು ಇದು ಹಗಲುವೇಳೆಯಲ್ಲಿ ಬಳಲಿಕೆ, ದೈಹಿಕ ಅನಾರೋಗ್ಯ, ಮಾನಸಿಕ ಒತ್ತಡ, ಸಾಧನೆಯಲ್ಲಿ ಕುಸಿತ ಮತ್ತು ಹೆಚ್ಚಿನ ಗೈರುಹಾಜರಿಯಂತಹ ವ್ಯಾಪಕ ಪರಿಣಾಮಗಳನ್ನು ಹೊಂದಿದೆ ಎಂದು ವರದಿಯು ಬೆಟ್ಟು ಮಾಡಿದೆ.

ನಿದ್ರಾಹೀನತೆಯ ಕಾರಣದಿಂದಾಗಿ ಅಧಿಕ ಒತ್ತಡ ಮತ್ತು ಕೆಲಸದ ಸ್ಥಳದಲ್ಲಿ ಕುಂಠಿತ ಉತ್ಪಾದಕತೆಯು ವಾರ್ಷಿಕ 150 ಶತಕೋಟಿ ಡಾಲರ್ ನಷ್ಟವನ್ನುಂಟು ಮಾಡುತ್ತಿದೆ ಎಂದಿರುವ ವರದಿಯು, ಗುರಿ ಸಾಧನೆಯ ಒತ್ತಡ, ಸಹೋದ್ಯೋಗಿಗಳ ಒತ್ತಡ ಮತ್ತು ಕಠಿಣ ನಿಲುವಿನ ಮಾಲಕರಿಂದಾಗಿ ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳುಂಟಾಗುತ್ತಿವೆ ಎಂದಿದೆ.

ಭಾರತದ ಕಾರ್ಪೊರೇಟ್ ಸಂಸ್ಥೆಗಳಲ್ಲಿಯ ಶೇ.46ರಷ್ಟು ಉದ್ಯೋಗಿಗಳು ಒಂದಲ್ಲ ಒಂದು ಒತ್ತಡದಿಂದ ಬಳಲುತ್ತಿದ್ದಾರೆ. ಈ ಒತ್ತಡವು ವೈಯಕ್ತಿಕ ವಿಷಯಗಳು, ಕಚೇರಿ ರಾಜಕೀಯ ಅಥವಾ ನಿಗದಿತ ಗುರಿಗಳಿಗೆ ಸಂಬಂಧಿಸಿದ್ದಿರಬಹುದು. ಉದ್ಯೋಗಿಗಳಲ್ಲಿ ಮಧುಮೇಹ, ಅಧಿಕ ಯೂರಿಕ್ ಆ್ಯಸಿಡ್, ಅಧಿಕ ರಕ್ತದೊತ್ತಡ, ಬೊಜ್ಜು ಮತ್ತು ಅಧಿಕ ಕೊಲೆಸ್ಟ್ರಾಲ್‌ನಂತಹ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ವರದಿಯು ಕಳವಳ ವ್ಯಕ್ತಪಡಿಸಿದೆ.

ನಿದ್ರಾಹೀನತೆಯಿಂದಾಗಿ ತಾವು ನಿರಂತರವಾಗಿ ಬಳಲಿಕೆಯನ್ನು ಅನುಭವಿಸುತ್ತಿದ್ದೇವೆ ಎಂದು ಸಮೀಕ್ಷೆಗೆ ಒಳಪಡಿಸಲಾಗಿದ್ದ ಉದ್ಯೋಗಿಗಳ ಪೈಕಿ ಶೇ.46ರಷ್ಟು ಜನರು ಹೇಳಿದ್ದರೆ, ಶೇ.25ರಷ್ಟು ಜನರು ತಾವು ತಲೆನೋವಿನಿಂದ ಪೀಡಿತರಾಗಿದ್ದೇವೆ ಎಂದು ತಿಳಿಸಿದ್ದಾರೆ. ಶೇ.49ರಷ್ಟು ಜನರು ಖಿನ್ನತೆಯನ್ನು ಅನುಭವಿಸುತ್ತಿದ್ದಾರೆ.

ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆ, ಕಚೇರಿ ಆವರಣದಲ್ಲಿ ಜಿಮ್ ಮತ್ತು ಫಿಟ್ನೆಸ್ ಸೆಂಟರ್‌ಗಳಂತಹ ಸೌಲಭ್ಯಗಳನ್ನು ಒದಗಿಸುತ್ತಿವೆಯಾದರೂ ಉನ್ನತ ಹುದ್ದೆಗಳಲ್ಲಿರುವ ಹೆಚ್ಚಿನವರಿಗೆ ಇವುಗಳನ್ನು ಬಳಸಿಕೊಳ್ಳಲೂ ಸಮಯಾವಕಾಶ ಸಿಗುತ್ತಿಲ್ಲ ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X