Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಲಿಂಪಿಕ್ಸ್ ಕಂಪ್ಯೂಟರ್‌ಗಳಿಗೆ ಕನ್ನ...

ಒಲಿಂಪಿಕ್ಸ್ ಕಂಪ್ಯೂಟರ್‌ಗಳಿಗೆ ಕನ್ನ ಹಾಕಿದ್ದು ರಶ್ಯ, ದೂರು ಉ. ಕೊರಿಯದ ಮೇಲೆ

‘ವಾಶಿಂಗ್ಟನ್ ಪೋಸ್ಟ್’ ವರದಿ

ವಾರ್ತಾಭಾರತಿವಾರ್ತಾಭಾರತಿ26 Feb 2018 9:49 PM IST
share
ಒಲಿಂಪಿಕ್ಸ್ ಕಂಪ್ಯೂಟರ್‌ಗಳಿಗೆ ಕನ್ನ ಹಾಕಿದ್ದು ರಶ್ಯ, ದೂರು ಉ. ಕೊರಿಯದ ಮೇಲೆ

ವಾಶಿಂಗ್ಟನ್, ಫೆ. 26: ರಶ್ಯದ ಸೇನಾ ಬೇಹುಗಾರರು ದಕ್ಷಿಣ ಕೊರಿಯದಲ್ಲಿ ನಡೆದ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಬಳಸಲಾದ ನೂರಾರು ಕಂಪ್ಯೂಟರ್‌ಗಳಿಗೆ ಕನ್ನ ಹಾಕಿದ್ದಾರೆ ಹಾಗೂ ಅದು ಉತ್ತರ ಕೊರಿಯ ನಡೆಸಿದ ಕೃತ್ಯ ಎಂಬುದಾಗಿ ಬಿಂಬಿಸಿದ್ದಾರೆ ಎಂದು ಅಮೆರಿಕದ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ‘ವಾಶಿಂಗ್ಟನ್ ಪೋಸ್ಟ್’ ರವಿವಾರ ವರದಿ ಮಾಡಿದೆ.

ಫೆಬ್ರವರಿ 9ರಂದು ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ನಡೆಯುತ್ತಿರುವಂತೆಯೇ, ಹಲವಾರು ಒಲಿಂಪಿಕ್ ಸಂಬಂಧಿ ಇಂಟರ್‌ನೆಟ್ ಸೈಟ್‌ಗಳು ಮತ್ತು ಪ್ರಸಾರ ವ್ಯವಸ್ಥೆಗಳ ವೈಫಲ್ಯದ ಬಗ್ಗೆ ತನಿಖೆ ನಡೆಸುವುದಾಗಿ ದಕ್ಷಿಣ ಕೊರಿಯ ಘೋಷಿಸಿರುವುದನ್ನು ಸ್ಮರಿಸಬಹುದಾಗಿದೆ.

ಒಲಿಂಪಿಕ್ ಸಂಘಟನೆಯೊಂದಿಗೆ ಜೋಡಣೆಯಾದ ಸುಮಾರು 300 ಕಂಪ್ಯೂಟರ್‌ಗಳ ನಿಯಂತ್ರಣವನ್ನು ರಶ್ಯದ ಜಿಆರ್‌ಯು ಸೇನಾ ಗುಪ್ತಚರ ಸಂಸ್ಥೆ ಫೆಬ್ರವರಿ ಆದಿ ಭಾಗದಲ್ಲೇ ಹೊಂದಿತ್ತು.

ಇದರ ಪರಿಣಾಮವಾಗಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸಿದವರಿಗೆ ತಮ್ಮ ಟಿಕೆಟ್‌ಗಳನ್ನು ಮುದ್ರಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಸಮಾರಂಭದಲ್ಲಿ ಖಾಲಿ ಆಸನಗಳಿದ್ದವು.

ರಶ್ಯನ್ನರು ದಕ್ಷಿಣ ಕೊರಿಯದ ಕಂಪ್ಯೂಟರ್ ರೂಟರ್‌ಗಳಿಗೆ ಕನ್ನ ಹಾಕಿ ಒಂದು ರೀತಿಯ ‘ಕಳ್ಳ ಸಾಫ್ಟ್‌ವೇರ್ (ಮಾಲ್‌ವೇರ್)’ ಅಳವಡಿಸಿದ್ದಾರೆ ಹಾಗೂ ಈ ಮಾಲ್‌ವೇರ್ ಸಹಾಯದಿಂದ ಮಾಹಿತಿಯನ್ನು ಕದ್ದಿದ್ದಾರೆ ಹಾಗೂ ಕಂಪ್ಯೂಟರ್ ಜಾಲವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಈ ಕನ್ನ ದಾಳಿಯನ್ನು ಉತ್ತರ ಕೊರಿಯ ಮಾಡಿದೆ ಎಂದು ಬಿಂಬಿಸುವುದಕ್ಕಾಗಿ ‘ಫಾಲ್ಸ್ ಫ್ಲಾಗ್’ ಎನ್ನುವ ಕಾರ್ಯಾಚರಣೆ ಮೂಲಕ ಉತ್ತರ ಕೊರಿಯದ ಇಂಟರ್‌ನೆಟ್ ಪೂರೈಕೆದಾರ ಸಂಸ್ಥೆಯನ್ನು ಬಳಸಿದ್ದಾರೆ ಎಂದು ಅದು ತಿಳಿಸಿದೆ.

ರಶ್ಯ ತಂಡದ ನಿಷೇಧಕ್ಕೆ ಪ್ರತೀಕಾರವೇ?

ಉದ್ದೀಪನಾ ದ್ರವ್ಯ ಸೇವನೆಗಾಗಿ ರಶ್ಯ ತಂಡಕ್ಕೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವುದಕ್ಕೆ ನಿಷೇಧ ಹೇರಲಾಗಿತ್ತು ಎಂಬುದನ್ನು ಸ್ಮರಿಸಬಹುದಾಗಿದೆ.

ನಿಷೇಧಕ್ಕೆ ಪ್ರತೀಕಾರ ತೀರಿಸುವುದಕ್ಕಾಗಿ ಸೈಬರ್ ದಾಳಿ ನಡೆಸಲಾಗಿದೆ ಎಂಬುದಾಗಿ ಕೆಲವು ವಿಶ್ಲೇಷಕರು ಭಾವಿಸುತ್ತಾರೆ.

ಈ ಒಲಿಂಪಿಕ್ಸ್‌ನಲ್ಲಿ ದಕ್ಷಿಣ ಮತ್ತು ಉತ್ತರ ಕೊರಿಯಗಳ ಆಟಗಾರರು ಒಂದೇ ತಂಡವಾಗಿ ಉದ್ಘಾಟನಾ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ ಹಾಗೂ ಉಭಯ ದೇಶಗಳು ಒಂದೇ ಐಸ್ ಹಾಕಿ ತಂಡವನ್ನು ಕಣಕ್ಕಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X