Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಷ್ಕ್ರಿಯ ನೀತಿ ಸಲ್ಲದು,ಶಸ್ತ್ರಾಸ್ತ್ರ...

ನಿಷ್ಕ್ರಿಯ ನೀತಿ ಸಲ್ಲದು,ಶಸ್ತ್ರಾಸ್ತ್ರ ಖರೀದಿ ಪ್ರಕ್ರಿಯೆಗೆ ಬದಲಾವಣೆಗಳು ಅಗತ್ಯ: ಸಚಿವ ಡಾ.ಭಾಂಬ್ರೆ

ವಾರ್ತಾಭಾರತಿವಾರ್ತಾಭಾರತಿ27 Feb 2018 8:21 PM IST
share
ನಿಷ್ಕ್ರಿಯ ನೀತಿ ಸಲ್ಲದು,ಶಸ್ತ್ರಾಸ್ತ್ರ ಖರೀದಿ ಪ್ರಕ್ರಿಯೆಗೆ ಬದಲಾವಣೆಗಳು ಅಗತ್ಯ: ಸಚಿವ ಡಾ.ಭಾಂಬ್ರೆ

ಹೊಸದಿಲ್ಲಿ,ಫೆ.27: ಶಸ್ತ್ರಾಸ್ತ್ರ ಖರೀದಿ ವ್ಯವಸ್ಥೆಯು ದಿಕ್ಕಾಪಾಲಾಗಿ ಹಂಚಿಹೋಗಿರುವದನ್ನು ಕಂಡು ಬೇಸತ್ತಿರುವ ಕೇಂದ್ರ ಸಹಾಯಕ ರಕ್ಷಣಾ ಸಚಿವ ಡಾ.ಸುಭಾಷ್ ಭಾಂಬ್ರೆ ಅವರು ರಕ್ಷಣಾ ಖರೀದಿ ಒಪ್ಪಂದವೊಂದನ್ನು ಪ್ರಕಟಿಸುವ ಮುಂಚಿನ ಒಂಭತ್ತು ಹಂತಗಳಲ್ಲಿ ಪ್ರತಿಯೊಂದರಲ್ಲಿಯೂ ಸರಣಿ ಸುಧಾರಣೆಗಳನ್ನು ಶಿಫಾರಸು ಮಾಡಿದ್ದಾರೆ. ನೀತಿಯಲ್ಲಿ ನಿಷ್ಕ್ರಿಯತೆಯ ಬದಲಾಗಿ ಸಮಯಪ್ರಜ್ಞೆಯಿಂದ ಕೂಡಿರಬೇಕು ಎಂದಿರುವ ಅವರು, ಸೂಕ್ಷ್ಮ ಪರಿಶೀಲನೆಯು ಖರೀದಿಯಲ್ಲಿ ಬೃಹತ್ ವಿಳಂಬಗಳಿಗೆ ನೆಪವಾಗಬಾರದು ಎಂದು ಹೇಳಿದ್ದಾರೆ.

ತನ್ನ ಸಚಿವಾಲಯವು ಬಹು ಮತ್ತು ಹರಡಿಕೊಂಡಿರುವ ವ್ಯವಸ್ಥೆಗಳಿಂದ ತುಂಬಿ ಹೋಗಿದ್ದು, ಏಕೈಕ ಉತ್ತರದಾಯಿತ್ವವಿಲ್ಲ. ನಿರ್ಣಯಗಳನ್ನು ಕೈಗೊಳ್ಳಲು ಹಲವಾರು ಮುಖ್ಯಸ್ಥರಿದ್ದಾರೆ. ಪ್ರಕ್ರಿಯೆಗಳು ಪುನರಾವರ್ತನೆಗೊಳ್ಳುತ್ತಿರುತ್ತವೆ. ಒಂದೇ ಕೆಲಸವನ್ನು ಹಲವರು ಪದೇಪದೇ ಮಾಡುತ್ತಿರುತ್ತಾರೆ. ಷರಾಗಳಲ್ಲಿ ವಿಳಂಬಗಳು, ವಿಳಂಬಿತ ನಿರ್ಧಾರಗಳು, ಕಾರ್ಯಾರಂಭದಲ್ಲಿ ವಿಳಂಬ, ನಿಜಾವಧಿಯ ನಿಗಾಯಿರದಿರುವಿಕೆ ಇತ್ಯಾದಿಗಳು ಹೆಜ್ಜೆಹೆಜ್ಜೆಗೂ ಕಾಣುತ್ತಿವೆ. ಇದರ ಪರಿಣಾಮವಾಗಿ ಕಳೆದ ಮೂರು ವರ್ಷಗಳಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿರುವ 144 ಖರೀದಿ ಯೋಜನೆಗಳ ಪೈಕಿ ಕೇವಲ ಶೇ.8ರಿಂದ ಶೇ.10ರಷ್ಟು ಮಾತ್ರ ನಿಗದಿತ ಅವಧಿಯಲ್ಲಿ ಪೂರ್ಣಗೊಂಡಿವೆ ಎಂದು ಭಾಂಬ್ರೆ ವಿಷಾದಿಸಿದ್ದಾರೆ.

ಪ್ರಮುಖ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಸರಕಾರವು ಒಂಭತ್ತು ಹಂತಗಳನ್ನು ಪಾಲಿಸುತ್ತದೆ. ಬೃಹತ್ ಖರೀದಿ ಯೋಜಜನೆಯಿದ್ದಲ್ಲಿ ಈ ಹಂತಗಳು ಪೂರ್ಣಗೊಂಡು ಹಸಿರು ನಿಶಾನೆ ದೊರೆಯುವಾಗ ದಶಕಕ್ಕೂ ಹೆಚ್ಚಿನ ಸಮಯ ಕಳೆದುಹೋಗಿರುತ್ತದೆ. ಇದರಿಂದಾಗಿ ಆಧುನಿಕ ಯುದ್ಧಕ್ಕೆ ಸಜ್ಜಾಗುವಾಗ ಭಾರತೀಯ ಸಶಸ್ತ್ರ ಪಡೆಗಳು ಹಳೆಯ ಶಸ್ತ್ರಾಸ್ತ್ರಗಳನ್ನೇ ನೆಚ್ಚಿಕೊಳ್ಳಬೇಕಾಗಿದೆ ಎಂದಿರುವ ಅವರು, 2001ರಲ್ಲಿ ಮೊದಲು ಪ್ರಸ್ತಾಪಿಸಲಾಗಿದ್ದ 126 ಯುದ್ಧವಿಮಾನಗಳಿಗಾಗಿ ವಾಯುಪಡೆಯ ಬೇಡಿಕೆಯು ಇಂತಹ ನಿಧಾನ ಪ್ರಕ್ರಿಯೆಗೆ ಉತ್ತಮ ಉದಾಹರಣೆಯಾಗಿದೆ. 17 ವರ್ಷಗಳ ಬಳಿಕ ಕೇವಲ 36 ಫ್ರೆಂಚ್ ರಾಫೇಲ್ ಯುದ್ಧವಿಮಾನಗಳ ಖರೀದಿಗಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ, ಆದರೆ ಈವರೆಗೂ ಒಂದೂ ವಿಮಾನ ಪೂರೈಕೆಯಾಗಿಲ್ಲ ಎಂದು ಬೆಟ್ಟು ಮಾಡಿದ್ದಾರೆ.

 ಕಳೆದ ವರ್ಷದ ನವೆಂಬರ್‌ನಲ್ಲಿ 27 ಅಂಶಗಳ ಆಂತರಿಕ ವರದಿಯಲ್ಲಿ ಭಾಂಬ್ರೆ ಈ ವಿಷಯಗಳನ್ನು ಎತ್ತಿದ್ದಾರೆ. ರಕ್ಷಣಾ ಸಚಿವಾಲಯದಲ್ಲಿ ಪ್ರಸ್ತಾವಕ್ಕಾಗಿ ಮನವಿಯ ಹಂತದಲ್ಲಿ ಖರೀದಿ ಪ್ರಕ್ರಿಯೆಯ ಆರಂಭದ ಮಜಲುಗಳಲ್ಲಿ ಪದೇಪದೇ ವಿಳಂಬಗಳಾಗುತ್ತಿರುವುದನ್ನೂ ಅವರು ಎತ್ತಿ ತೋರಿಸಿದ್ದಾರೆ. ಹಲವಾರು ಹಂತಗಳಲ್ಲಿ ರಕ್ಷಣಾ ಖರೀದಿಯ ನಿಯಮಾವಳಿಗಳು ಅನುಮತಿಸಿರುವ ಸಮಯಕ್ಕಿಂತ ಎಷ್ಟೋ ಪಟ್ಟು ಹೆಚ್ಚು ಸಮಯವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X