Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಖಾದ್ರಿ ನೇತೃತ್ವದಲ್ಲಿ ಬಾಬಾ...

ಶಾಖಾದ್ರಿ ನೇತೃತ್ವದಲ್ಲಿ ಬಾಬಾ ಬುಡನ್‍ಗಿರಿ ಉರೂಸ್ ಆಚರಣೆಗೆ ಮನವಿ: ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Feb 2018 8:32 PM IST
share
ಶಾಖಾದ್ರಿ ನೇತೃತ್ವದಲ್ಲಿ ಬಾಬಾ ಬುಡನ್‍ಗಿರಿ ಉರೂಸ್ ಆಚರಣೆಗೆ ಮನವಿ: ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಚಿಕ್ಕಮಗಳೂರು ಫೆ.27: ಶಾಖಾದ್ರಿ ನೇತೃತ್ವದಲ್ಲಿಯೇ ಬಾಬಾ ಬುಡನ್‍ಗಿರಿಯಲ್ಲಿ ಉರೂಸ್ ಆಚರಣೆಗೆ ಉಚ್ಚ ನ್ಯಾಯಾಲಯದ ಆದೇಶವಿದ್ದು, ನ್ಯಾಯಾಲಯದ ಆದೇಶದಂತೆ ಶಾಖಾದ್ರಿ ನೇತೃತ್ವದಲ್ಲಿ ಉರೂಸ್ ಆಚರಣೆಗೆ ಜಿಲ್ಲಾಡಳಿತ ಅನುವು ಮಾಡಿಕೊಡಬೇಕು. ತಪ್ಪಿದಲ್ಲಿ ಬಾಬಾಬುಡನ್‍ಗಿರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹಝ್ರತ್ ದಾದಾ ಹಯಾತ್ ಮೀರ್ ಕಮಿಟಿಯ ಜಿಲ್ಲಾಧ್ಯಕ್ಷ ಸಿರಾಜ್ ಹುಸೈನ್ ಜಿಲ್ಲಾಡಳಿತವನ್ನು ಎಚ್ಚರಿಸಿದ್ದಾರೆ.

ನಗರದ ಪ್ರೆಸ್‍ಕ್ಲಬ್‍ನಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.2-4 ರವರೆಗೆ ಬಾಬಾ ಬುಡನ್‍ಗಿರಿಯಲ್ಲಿ ಉರೂಸ್ ಅಂಗವಾಗಿ ಸಂದಲ್ ಹಾಗೂ ಜನ್ನತ್ ಕಾರ್ಯಕ್ರಮವನ್ನು ಜಿಲ್ಲಾಡಳಿತ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಜಿಲ್ಲಾಡಳಿತ ಉರೂಸ್ ಅನ್ನು ಶಾಖಾದ್ರಿ ನೇತೃತ್ವದಲ್ಲಿಯೇ ನಡೆಸಲು ಅವಕಾಶ ನೀಡಬೇಕು ಹಾಗೂ ಉರೂಸ್ ವೇಳೆ ಗುಹೆಯ ಆವರಣದಲ್ಲಿರುವ ದರ್ಗಾಕ್ಕೆ ಗಂಧ ಲೇಪನ, ಹಸಿರು ಹೊದಿಕೆ ಹೊದಿಸಲು ಅವಕಾಶ ನೀಡಬೇಕು. ಜೊತೆಗೆ ಬಾಬಾಬುಡನ್‍ಗಿರಿ ದರ್ಗಾಕ್ಕೆ ಮುಜಾವರ್ ರನ್ನು ಕೂಡಲೇ ನೇಮಿಸಲು ಮುಂದಾಗಬೇಕೆಂದು ಅವರು ಒತ್ತಾಯಿಸಿದರು.

ಬಾಬಾ ಬುಡನ್‍ಗಿರಿ ವಿವಾದ ಇತ್ಯರ್ಥ ಆಗುವವರೆಗೂ 1947ರ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ 1989ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಅಂದಿನ ಜಿಲ್ಲಾಧಿಕಾರಿ ನ್ಯಾಯಾಲಯದ ಆದೇಶದಂತೆ ಜಿಲ್ಲಾಡಳಿತವೇ ಉರೂಸ್ ನಡೆಸುತ್ತದೆ ಎಂದು ಹೇಳಿಕೆ ನೀಡಿದ್ದರು. ಆದರೆ ಗಿರಿಯ ಅಂದಿನ ಶಾಖಾದ್ರಿ ಸೈಯದ್ ಫೀರ್ ಮುಹಮ್ಮದ್ ಅವರು ಎಲ್ಲ ಫಕೀರರ ಸಭೆ ನಡೆಸಿ 1989ರಲ್ಲಿ ಉರೂಸ್ ವೇಳೆ ಗುಹೆಯ ಒಳ ಪ್ರವೇಶಿಸಿ ಗೋರಿಗಳಿಗೆ ಗಂಧ, ಹಸಿರು ಬಟ್ಟೆ ಹಾಕಿ ವಿಧಿ ವಿಧಾನಗಳನ್ನು ಪೂರೈಸಿದ್ದರು. ಈ ಪದ್ಧತಿ 1945ರಿಂದ 1999ರವರೆಗೆ ನಡೆದುಕೊಂಡು ಬಂದಿದೆ. ಆದರೆ ಶಾಖಾದ್ರಿ ನಿಧನದ ಬಳಿಕ ಅವರ ಮಗ ಸೈಯದ್ ಗೌಸ್ ಮೊಹಿದ್ದೀನ್ ಖಾದ್ರಿ ಅವರು ಈ ಪದ್ಧತಿಯನ್ನು 2000-2005ರವರೆಗೆ ಮುಂದುವರಿಸಿಕೊಂಡು ಬಂದಿದ್ದಾರೆ. ಆ ಬಳಿಕ ಜಿಲ್ಲಾಡಳಿತ ಕೆಲ ಕಾರಣಗಳನ್ನು ಮುಂದಿಟ್ಟುಕೊಂಡು ಉರೂಸ್ ಸ್ಥಗಿತಗೊಳಿಸಿತ್ತು. ಇದರ ವಿರುದ್ಧ  ಸೈಯದ್ ಗೌಸ್ ಮೊಹಿದ್ದೀನ್ ಶಾಖಾದ್ರಿ ನ್ಯಾಯಾಲಯದ ಮೊರೆ ಹೋಗಿದ್ದು, ಸುಪ್ರೀಂಕೋರ್ಟ್ 2011 ಮತ್ತು 2015ರಲ್ಲಿ ಈ ಸಂಬಂಧ ನೀಡಿದ ಆದೇಶದಲ್ಲಿ 1989ರ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿದೆ.

ಆದರೆ ಜಿಲ್ಲಾಡಳಿತವು, 'ನ್ಯಾಯಾಲಯದ ಆದೇಶದಲ್ಲಿ ಶಾಖಾದ್ರಿಯವರನ್ನು ಗುಹೆಯ ಒಳಗೆ ಬಿಡಬೇಕೆಂದು ಹೇಳಿಲ್ಲ' ಎಂದು ಹೇಳಿಕೆ ನೀಡಿ, ಸಾಂಪ್ರದಾಯಿಕ ಉರೂಸ್ ಆಚರಣೆಗೆ ಅವಕಾಶ ನೀಡುತ್ತಿಲ್ಲ. ಆದ್ದರಿಂದ ಈ ಬಾರಿಯಾದರೂ ಜಿಲ್ಲಾಡಳಿತ ಬಾಬಾ ಬುಡನ್‍ಗಿರಿಗೆ ಮುಜಾವರ್ ರನ್ನು ನೇಮಕ ಮಾಡಿ, ಶಾಖಾದ್ರಿಯವರ ನೇತೃತ್ವದಲ್ಲಿಯೇ ಉರೂಸ್ ಆಚರಣೆಗೆ ಅವಕಾಶ ಕಲ್ಪಿಸಬೇಕು. ತಪ್ಪಿದಲ್ಲಿ ಪ್ರತಿಭಟನೆ ಅನಿವಾರ್ಯ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಮುಬಾರಕ್, ಕಾರ್ಯದರ್ಶಿ ಔರಂಗ್ ಪಾಶ ಹಾಗೂ ಸಮಿತಿ ಸದಸ್ಯ ಇಮ್ರಾನ್ ಖಾನ್ ಉಪಸ್ಥಿತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X