Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್ನದಾತ ನೆಮ್ಮದಿ, ಗೌರವದಿಂದ...

ಅನ್ನದಾತ ನೆಮ್ಮದಿ, ಗೌರವದಿಂದ ಬಾಳುವುದಕ್ಕಾಗಿ ನನ್ನ ಜೀವನವನ್ನೇ ಮುಡುಪಾಗಿಟ್ಟಿದ್ದೇನೆ: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ27 Feb 2018 9:32 PM IST
share
ಅನ್ನದಾತ ನೆಮ್ಮದಿ, ಗೌರವದಿಂದ ಬಾಳುವುದಕ್ಕಾಗಿ ನನ್ನ ಜೀವನವನ್ನೇ ಮುಡುಪಾಗಿಟ್ಟಿದ್ದೇನೆ: ಯಡಿಯೂರಪ್ಪ

ದಾವಣಗೆರೆ,ಫೆ.27: ನನಗೆ ಬೇರೆ ಆಸೆಯೇನೂ ಇಲ್ಲ. ನನ್ನದೊಂದೇ ಆಸೆ. ಅನ್ನದಾತನು ನೆಮ್ಮದಿ, ಗೌರವದಿಂದ ಬಾಳಬೇಕು. ಅದಕ್ಕಾಗಿ ನನ್ನ ಜೀವನವನ್ನೇ ಮುಡುಪಾಗಿಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ತಾಲೂಕಿನ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರಂಗಸ್ವಾಮಿ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಆರೂವರೆ ಕೋಟಿ ಜನರ ಕಣ್ಣೀರೊರೆಸಲು ನಾನು ಬದ್ದ, ರೈತರ ಸಂಕಷ್ಟಗಳಿಗೆ ಸ್ಪಂದಿಸುವೆ. ಇದೇ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ನೊಂದ ಕುಟುಂಬಗಳಿಗೆ ಸಾಂತ್ವನ ಪತ್ರ ನೀಡಿ, ಧೈರ್ಯ ತುಂಬುತ್ತಿದ್ದೇನೆ. ರಾಜ್ಯದಲ್ಲಿ 3750 ರೈತರು ಸಾವಿಗೆ ಶರಣಾಗಿದ್ದಾರೆ. ಆ ರೈತ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡುತ್ತಿದ್ದೇವೆ ಎಂದರು.

ಪ್ರಧಾನಿ ಮೋದಿ ಕೇಂದ್ರದ ಬಜೆಟ್‍ನಲ್ಲಿ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕೆಂಬ ಸದುದ್ದೇಶದಿಂದ ಈಗಿರುವ ದರಕ್ಕಿಂತ ಒಂದೂವರೆ ಪಟ್ಟು ಹೆಚ್ಚು ಬೆಲೆ ಸಿಗುವಂತಹ ವ್ಯವಸ್ಥೆ ತರುವ ಭರವಸೆ ನೀಡಿದ್ದಾರೆ. ದೇಶದ 10 ಕೋಟಿ ಕುಟುಂಬಗಳಿಗೆ ಒಂದು ವಿಮಾ ಯೋಜನೆ ಜಾರಿಗೊಳಿಸಿದ್ದಾರೆ. ಪ್ರತಿ ಕುಟುಂಬಕ್ಕೂ 5 ಲಕ್ಷ ರು. ಪರಿಹಾರ ನೀಡುವಂತಹ ಐತಿಹಾಸಿಕ ನಿರ್ಣಯ ಇದಾಗಿದೆ. ಆತ್ಮಹತ್ಯೆ ತಡೆಗೆ ಮುಂಚೆಯೇ ಅನುಕೂಲ ಮಾಡಿಕೊಡಲು ಸಂಕಲ್ಪ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಕೆರೆಯಾಗಳಹಳ್ಳಿ, ಕಂದನಕೋವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ನಿವಾಸಕ್ಕೆ ಹೋಗಿ, ಅಲ್ಲಿಂದ ಪ್ರಧಾನಿ ಭಾಗವಹಿಸುವ ರಾಜ್ಯ ರೈತ ಸಮಾವೇಶಕ್ಕೆ ತೆರಳುತ್ತಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.

50 ಸಾವಿರ ರು. ವೈಯಕ್ತಿಕ ಪರಿಹಾರ
ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಾಲ ಬಾಧೆ ತಾಳಲಾರದೇ ಸಾವಿಗೆ ಶರಣಾಗಿದ್ದ ತಾಲೂಕಿನ ಇಬ್ಬರು ರೈತರ ಮನೆಗೆ ಮಂಗಳವಾರ ಭೇಟಿ ನೀಡಿ, ಸಂತ್ರಸ್ಥ ಕುಟುಂಬಕ್ಕೆ ಸಾಂತ್ವನ ಪತ್ರ, ತಲಾ 50 ಸಾವಿರ ರು. ವೈಯಕ್ತಿಕವಾಗಿ ಪರಿಹಾರ ನೀಡಿದರು. 
ತಾಲೂಕಿನ ಕೆರೆಯಾಗಳಹಳ್ಳಿ ಗ್ರಾಮದ ತನ್ನ ಹೊಲದಲ್ಲಿ ಕಳೆದ ಜ. 14ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವ ರೈತ ರಂಗಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದ ಬಿ.ಎಸ್. ಯಡಿಯೂರಪ್ಪ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ 50 ಸಾವಿರ ರು. ಪರಿಹಾರ ನೀಡುವ ಮೂಲಕ ರೈತ ಕುಟುಂಬಕ್ಕೆ ಧೈರ್ಯ ಹೇಳಿದರು.

ಮೃತ ರೈತ ರಂಗಸ್ವಾಮಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ರಂಗಸ್ವಾಮಿ ತಂದೆ ರಂಗಪ್ಪ ಹೆಸರಿಗೆ 7 ಎಕರೆ ಜಮೀನಿದ್ದು, ಬೆಳೆ ಬೆಳೆಯಲು ಪ್ರಗತಿ ಕೃಷ್ಣ ಬ್ಯಾಂಕ್‍ನಲ್ಲಿ 1.5 ಲಕ್ಷ, ಕರೂರು ವೈಶ್ಯ ಬ್ಯಾಂಕ್‍ನಲ್ಲಿ 1.5 ಲಕ್ಷ ಸೇರಿದಂತೆ ಖಾಸಗಿಯಾಗಿ ಒಟ್ಟು 8 ಲಕ್ಷ ರು.ಗಳ ಸಾಲವಿತ್ತು. ಸತತ ಬರ, ಬೆಳೆಗೆ ಬೆಲೆ ಸಿಗದೇ ನೊಂದ ರಂಗಸ್ವಾಮಿ ಸಾವಿಗೆ ಶರಣಾದ ವಿಚಾರ ಕುಟುಂಬವು ಯಡಿಯೂರಪ್ಪ ಗಮನಕ್ಕೆ ತಂದಿತು. ಪತ್ನಿ ಮಂಗಳಮ್ಮ, 5 ವರ್ಷದ ಹೆಣ್ಣು ಮಗು, 3 ವರ್ಷದ ಗಂಡು ಮಗುವಿದ್ದ ರಂಗಸ್ವಾಮಿ ಸಾಲದ ಶೂಲಕ್ಕೆ ಹೆದರಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದರು. 

ಈ ವೇಳೆ ಸಂಸದರಾದ ಜಿ.ಎಂ. ಸಿದ್ದೇಶ್ವರ, ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ, ಬಿ.ವೈ. ರಾಘವೇಂದ್ರ, ಎಂ.ಪಿ. ರೇಣುಕಾಚಾರ್ಯ, ಕುಮಾರ ಬಂಗಾರಪ್ಪ, ಮಾಜಿ ಶಾಸಕ ಬಿ.ಪಿ. ಹರೀಶಗೌಡ, ಹುಲಿಕಟ್ಟೆ ಶಿವಣ್ಣ, ಗ್ರಾಪಂ ಅಧ್ಯಕ್ಷ ರಾಜಪ್ಪ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X