Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: 42 ಎಕರೆ ಅರಣ್ಯ ಪ್ರದೇಶ...

ಹೊನ್ನಾವರ: 42 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ

ವಾರ್ತಾಭಾರತಿವಾರ್ತಾಭಾರತಿ27 Feb 2018 10:53 PM IST
share
ಹೊನ್ನಾವರ: 42 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ

ಹೊನ್ನಾವರ,ಫೆ.27: ತಾಲೂಕಿನ ಕಡ್ನೀರದಲ್ಲಿ ಅರಣ್ಯ ಪ್ರದೇಶಕ್ಕೆ ಮಂಗಳವಾರ ಬೆಂಕಿ ತಗುಲಿದ ಪರಿಣಾಮ ಸುಮಾರು 42 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ಬೆಲೆಬಾಳುವ ಸಾಗವಾನಿ ಸೇರಿದಂತೆ ವಿವಿಧ ಜಾತಿಯ ಮರಗಳು ಹಾಗೂ ವನ್ಯಜೀವಿ ಸಂಕುಲಗಳು ಬೆಂಕಿಯ ಕೆನ್ನಾಲೆಗೆ ಆಹುತಿಯಾಗಿವೆ. 

ಕಳೆದ ಶನಿವಾರ ಮಧ್ಯಾಹ್ನ ಕಡ್ನೀರು ಭಾಗದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅರಣ್ಯದಲ್ಲಿ ಸಾಗವಾನಿ ಹಾಗೂ ಇತರೆ ಜಾತಿಯ ಮರದ ತರಗೆಲೆಗಳು ನೆಲಹಾಸಿ ಬಿದ್ದಿದ್ದರಿಂದ ಬೆಂಕಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಈ ಕುರಿತು ಸ್ಥಳೀಯರು ಶನಿವಾರ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಮೂರು ದಿನಗಳ ಕಾಲ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅರಣ್ಯದಲ್ಲಿ ಕಾಣಿಸಿಕೊಂಡಿರುವ ಬೆಂಕಿಯನ್ನು ನಂದಿಸಿದ್ದರು. ಆದರೆ ಸೋಮವಾರ ತಡರಾತ್ರಿ ಮತ್ತೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಂಗಳವಾರ ಇನ್ನೂ ವಿಸ್ತರಿಸಿ ಸುಮಾರು 42 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಸ್ಥಳಕ್ಕಾಗಮಿಸಿದ ಉಪ ವಲಯ ಅರಣ್ಯಾಧಿಕಾರಿ ರಾಜೇಶ. ಎಂ ಕೊಚರೇಕರ್, ವಲಯ ಅರಣ್ಯಾಧಿಕಾರಿ ವರದರಂಗನಾಥ, ಅರಣ್ಯ ರಕ್ಷಕರು, ಅರಣ್ಯ ವೀಕ್ಷಕರು, ಗ್ರಾಮ ಅರಣ್ಯ ಸಮಿತಿಯ ಪ್ರಮುಖರು ಹಾಗೂ ಊರಿನವರು ಸೇರಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಅರಣ್ಯ ಸಿಬ್ಬಂದಿಗಳು ಅರಣ್ಯದಲ್ಲಿ ಬಿದ್ದಿರುವ ತರಗೆಲೆಗಳನ್ನು ಬೆಂಕಿ ತಗುಲದಂತೆ ಬೇರ್ಪಡಿಸಿದರು. ಸ್ಥಳೀಯರು ಬೆಂಕಿ ನಂದಿಸುವಲ್ಲಿ ಮುಂದಾದರು. ಕೋಟ್ಯಾಂತರ ರೂ. ಮೌಲ್ಯದ ಸಾಗವಾನಿ ಮತ್ತು ಇತರೆ ಜಾತಿಯ ಸಸಿಗಳು ಹಾಗೂ ಅರಣ್ಯ ಸಂಪತ್ತು ನಾಶವಾಗಿದ್ದಲ್ಲದೇ ಹಿಂಡು ಪೊದೆಗಳಲ್ಲಿ ವಾಸವಾಗಿರುವ ಪ್ರಾಣಿ ಪಕ್ಷಿಗಳು ಅಪಾಯಕ್ಕೆ ಸಿಲುಕಿವೆ. ಸಂತಾನೋತ್ಪತ್ತಿ ನಡೆಸಲಾರಂಭಿಸಿರುವ ಹಕ್ಕಿ ಪಕ್ಷಿಗಳ ಮೊಟ್ಟೆ ಹಾಗೂ ಮರಿಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X