Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು; ಉ.ಕನ್ನಡ ಜಿಲ್ಲೆಯ ಪ್ರವಾಸ...

ಬೆಂಗಳೂರು; ಉ.ಕನ್ನಡ ಜಿಲ್ಲೆಯ ಪ್ರವಾಸ ತಾಣಗಳನ್ನೊಳಗೊಂಡ ‘ಈ ಕಾಫಿ ಟೇಬಲ್’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ27 Feb 2018 11:41 PM IST
share
ಬೆಂಗಳೂರು; ಉ.ಕನ್ನಡ ಜಿಲ್ಲೆಯ ಪ್ರವಾಸ ತಾಣಗಳನ್ನೊಳಗೊಂಡ ‘ಈ ಕಾಫಿ ಟೇಬಲ್’ ಪುಸ್ತಕ ಬಿಡುಗಡೆ

ಬೆಂಗಳೂರು, ಫೆ.27: ಪ್ರಕೃತಿ, ಜಲಪಾತ, ಸಸ್ಯವರ್ಗ, ಆಹಾರಪದ್ಧತಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಸುಂದರ ತಾಣಗಳ ವಿವರಗಳನ್ನೊಳಗೊಂಡ ‘ಈ ಕಾಫಿ ಟೇಬಲ್’ ಪುಸ್ತಕವನ್ನು ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆ ಮಾಡಿದರು.

ಮಂಗಳವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಕೃತಿಯನ್ನು ಬಿಡುಗಡೆಗೊಳಿಸಿ, ರಾಜ್ಯದ ಅತಿ ಉದ್ದದ ಸಮುದ್ರ ತೀರವನ್ನು ಹೊಂದಿರುವ ಉತ್ತರ ಕನ್ನಡ ಜಿಲ್ಲೆಯು ಹಲವಾರು ಪ್ರವಾಸಿ ಸ್ಥಳಗಳನ್ನು ಹೊಂದಿದೆ. ವೈವಿಧ್ಯಮಯ ಸಂಸ್ಕೃತಿ, ಆಹಾರ ಪದ್ಧತಿ, ಪ್ರೇಕ್ಷಣೀಯ ಸ್ಥಳಗಳಿಂದ ಪ್ರವಾಸಿಗರಿಗೆ ಅದ್ಭುತ ಅನುಭವ ಕೊಡಲಿದೆ. ಹೀಗೆ ಜಿಲ್ಲೆ ಪ್ರತಿ ಆಯಾಮಗಳನ್ನು ಎಳೆ ಎಳೆಯಾಗಿ ಜನರಿಗೆ ಪರಿಚಯಿಸುವ ಉದ್ದೇಶದಿಂದ ಪುಸ್ತಕವನ್ನು ಹೊರ ತರಲಾಗಿದೆ.

ಈ ಪುಸ್ತಕವು 124 ಪುಟಗಳನ್ನು ಹೊಂದಿದ್ದು, ಜಲಪಾತಗಳು, ಸಸ್ಯವರ್ಗ, ಸಿಂಗಳೀಕ, ಕಪ್ಪು ಚಿರತೆ, ಪ್ರಾಣಿ-ಪಕ್ಷಿ ವರ್ಗ, ಪಶ್ಚಿಮ ಘಟ್ಟಗಳ ಅದ್ಭುತ ಕಾಡುಗಳ ಅತಿ ಸುಂದರ ಚಿತ್ರ ಮತ್ತು ಮಾಹಿತಿಯು ಪುಸ್ತಕದಲ್ಲಿದೆ. ಪುಸ್ತಕವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ಪೇಪರ್ ಮತ್ತು ಬೈಂಡಿಂಗ್ ತಂತ್ರಗಳಿಂದ ತಯಾರಿಸಲಾಗಿದ್ದು, ಎಲ್ಲಾ ಚಿತ್ರಗಳು ರಾಜ್ಯದ ಪ್ರಸಿದ್ಧ ಛಾಯಾಗ್ರಾಹಕರು ಕಳೆದ 10 ವರ್ಷದಲ್ಲಿ ತೆಗೆದ ಚಿತ್ರಗಳಾಗಿವೆ ಎಂದು ಅವರು ಮಾಹಿತಿ ನೀಡಿದರು.

ಪುಸ್ತಕದಲ್ಲಿ ಗ್ರೇಟ್ ಇಂಡಿಯನ್ ಹಾರ್ನ್ಬಿಲ್, ಸಿಂಗಳೀಕ, ಕಪ್ಪು ಚಿರತೆ, ಮೊಸಳೆ ಇತ್ಯಾದಿ ಪ್ರಾಣಿ-ಪಕ್ಷಿ ವರ್ಗಗಳ ಸುಂದರ ಚಿತ್ರಗಳು ನೋಡುಗನ ಕಣ್ಮನ ಸೆಳೆಯುತ್ತವೆ. ಹಬ್ಬಗಳು, ಜಾತ್ರೆಗಳು, ಜನಪದ ಆಚರಣೆಗಳು ಆಹಾರ ಪದ್ಧತಿ ಇತ್ಯಾದಿಗಳ ಪರಿಚಯವನ್ನು ಸಹ ಮಾಡಿಕೊಡಲಾಗಿದೆ. ಜಿಲ್ಲೆಯ ಜನರ ವೃತ್ತಿ ವೈವಿಧ್ಯಮಗಳು, ಬುಡಕಟ್ಟು ಜನಾಂಗಗಳು, ಜೀವನಶೈಲಿಗಳನ್ನು ಚಿತ್ರದ ಮೂಲಕ ತೋರಿಸಿಕೊಡಲಾಗಿದೆ. ಒಟ್ಟಾರೆ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರಿಗೆ ಉತ್ತಮ ಕೈಪಿಡಿಯಾಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X