Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದೂಧರ್ಮ ತ್ಯಜಿಸಿ ಬೌದ್ಧದಮ್ಮಕ್ಕೆ...

ಹಿಂದೂಧರ್ಮ ತ್ಯಜಿಸಿ ಬೌದ್ಧದಮ್ಮಕ್ಕೆ ಮತಾಂತರಗೊಂಡ 58 ದಲಿತ ಕುಟುಂಬಗಳು

ಕಲಬುರಗಿಯಲ್ಲಿ ನಡೆದ ಜಾತಿ ದೌರ್ಜನ್ಯದ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 Feb 2018 7:54 PM IST
share
ಹಿಂದೂಧರ್ಮ ತ್ಯಜಿಸಿ ಬೌದ್ಧದಮ್ಮಕ್ಕೆ ಮತಾಂತರಗೊಂಡ 58 ದಲಿತ ಕುಟುಂಬಗಳು

ಕಲಬುರಗಿ, ಫೆ.28: ಸವರ್ಣೀಯರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಜಿಲ್ಲೆಯ ಜೇವರ್ಗಿ ತಾಲೂಕಿನ ಕೊಂಡಗೂಳಿ ಗ್ರಾಮದ 58 ದಲಿತ ಕುಟುಂಬಗಳ ಸದಸ್ಯರು ಹಿಂದೂ ಧರ್ಮವನ್ನು ತ್ಯಜಿಸಿ ಸಾಮೂಹಿಕವಾಗಿ ಬೌದ್ಧದಮ್ಮಕ್ಕೆ ಮತಾಂತರಗೊಂಡರು.

ಬುಧವಾರ ಕೊಂಡಗೂಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ದಲಿತ ಸಮುದಾಯದ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರೂ ಶ್ವೇತವರ್ಣದ ಉಡುಪು ಧರಿಸಿ ‘ಅಸ್ಪ್ರಶ್ಯರ ನಡಿಗೆ ಬುದ್ಧನೆಡೆಗೆ’ ಘೋಷಣೆಯಡಿ ಬೌದ್ಧದಮ್ಮಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಹೊಸದಿಲ್ಲಿ ಹಾಗೂ ಕಲಬುರಗಿ ಬುದ್ಧ ವಿಹಾರದಿಂದ ಆಗಮಿಸಿದ್ದ ಬೌದ್ಧಬಿಕ್ಕುಗಳು ಬೌದ್ಧದಮ್ಮ ದಿಕ್ಷೆಯನ್ನು ಬೋಧಿಸಿದರು. ಇದೇ ವೇಳೆ ಗ್ರಾಮದ ದಲಿತರು ಬುದ್ಧನ ಪುತ್ಥಳಿ ಹಾಗೂ ಭಾವಚಿತ್ರಗಳನ್ನು ಪ್ರದರ್ಶಿಸಿ ಸಂಭ್ರಮಿಸಿದರು.

ಬೌದ್ಧದಮ್ಮ ಸ್ವೀಕರಿಸಿದ ಬಳಿಕ ಮಾತನಾಡಿದ ದಲಿತ ಸೇನೆ ರಾಜಾಧ್ಯಕ್ಷ ಹಣಮಂತ ಯಳಸಂಗಿ, ದಲಿತರು ಜಾತಿ ದೌರ್ಜನ್ಯದ ವಿರುದ್ಧ ಪ್ರಕರಣ ದಾಖಲಿಸುವುದು, ಕೋರ್ಟ್ ಮೆಟ್ಟಿಲೇರುವುದನ್ನು ಬಿಟ್ಟು ಹಿಂದೂಧರ್ಮ ತ್ಯಜಿಸಿ ಬೌದ್ಧ ದಮ್ಮಕ್ಕೆ ಮತಾಂತರಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

58 ದಲಿತ ಕುಟುಂಬಗಳ ಸದಸ್ಯರು ಸಾಮೂಹಿಕವಾಗಿ ಇಂದು ಹಿಂದೂಧರ್ಮ ತ್ಯಜಿಸಿ ಬೌದ್ಧದಮ್ಮ ಸ್ವೀಕರಿಸಿದ್ದಾರೆ. ಇದರಿಂದ ಈ ಗ್ರಾಮದ ದಲಿತರಿಗೆ ಧಾರ್ಮಿಕ ಸ್ವಾತಂತ್ರ್ಯ ಸಿಕ್ಕಂತೆ ಆಗಿದೆ. ಜಾತಿ ದೌರ್ಜನ್ಯದ ವಿರುದ್ಧ ಎಲ್ಲ ದಲಿತರು ಹಿಂದೂಧರ್ಮ ತ್ಯಜಿಸಿ ಬೌದ್ಧದಮ್ಮದತ್ತ ಸಾಗಬೇಕು ಎಂದು ಯಳಸಂಗಿ ಕರೆ ನೀಡಿದರು.

ಸಮಾರಂಭದಲ್ಲಿ ಗ್ರಾಮದ ಮುಖಂಡರಾದ ವಿಠ್ಠಲ್ ದೊಡ್ಡಮನಿ, ದಿನೇಶ್ ದೊಡ್ಡಮನಿ, ಸಂತೋಷ್, ನಾಗೇಶ್ ಕೊಳ್ಳಿ, ನಾಗೇಂದ್ರ ಜವಳಿ, ಹುಸನಪ್ಪ ತಳಕೇರಿ ಸೇರಿದಂತೆ ಗ್ರಾಮದ ದಲಿತ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

ಘಟನೆಯ ಹಿನ್ನೆಲೆ: ಜಿಲ್ಲೆಯ ಜೇವರ್ಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಗ್ರಾಮದೇವ ದ್ಯಾಮವ್ವನ ಜಾತ್ರೆಯ ತೇರು ಎಳೆಯುವ ವೇಳೆ ಉಂಟಾದ ನೂಕು-ನುಗ್ಗಲು ಜಾತಿ ಸಂಘರ್ಷಕ್ಕೆ ತಿರುಗಿತ್ತು. ಅನಂತರ ದಲಿತ ಮತ್ತು ಸವರ್ಣೀಯರ ಮಧ್ಯೆ ನಡೆದ ಘರ್ಷಣೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರತಿ 3 ವರ್ಷಗಳಿಗೊಮ್ಮೆ ಗ್ರಾಮದೇವತೆ ಜಾತ್ರೆಯನ್ನು ದಲಿತ ಮತ್ತು ಸವರ್ಣೀಯರು ಸೇರಿ ಆಚರಿಸಿಕೊಂಡು ಬರುತ್ತಿದ್ದರು. ಆದರೆ, ಫೆ.9ರಂದು ಸಂಜೆ ದಲಿತರು ಪ್ರಾಣಿ ಬಲಿ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿ ತೇರು ಎಳೆಯಲು ಅವಕಾಶ ಕೋರಿದ್ದರು. ಆದರೆ ಇದನ್ನು ಸವರ್ಣೀಯರು ವಿರೋಧಿಸಿದ್ದರು. ನಂತರ ಸಂಘರ್ಷವೇರ್ಪಟ್ಟಿತ್ತು. ಇದರಿಂದ ಬೇಸತ್ತ ದಲಿತರು ತಮ್ಮ ಮನೆಯಲ್ಲಿದ್ದ ದೇವರ ಫೋಟೋಗಳನ್ನು ಬೀದಿಗೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.

"ಸಾಮಾಜಿಕ ಬಹಿಷ್ಕಾರ, ದೇವಸ್ಥಾನ-ಹೊಟೇಲ್ ಪ್ರವೇಶ ನಿರಾಕರಣೆಯಂತಹ ಘೋರ ಅನ್ಯಾಯವನ್ನು ಇನ್ನೂ ಎಷ್ಟು ದಿನ ಸಹಿಸಬೇಕು. ಇತ್ತೀಚೆಗೆ ನಡೆದ ಗ್ರಾಮ ದೇವತೆ ಜಾತ್ರೆ ವೇಳೆ ತೇರು ಏಳೆಯಲು ದಲಿತರಿಗೆ ಅವಕಾಶವಿಲ್ಲ. ಹೀಗಾಗಿ ಬೇಸತ್ತು ಬೌದ್ಧದಮ್ಮಕ್ಕೆ ಮತಾಂತರಗೊಂಡಿದ್ದು ಖುಷಿ ತಂದಿದೆ"
-ಹುಸನಪ್ಪ ತಳಕೇರಿ, ದಲಿತ ಸೇವೆ ತಾಲೂಕು ಉಪಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X