Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾಸ್‍ಪೋರ್ಟ್ ವ್ಯಕ್ತಿಯ ಪ್ರತಿಷ್ಠಿತ...

ಪಾಸ್‍ಪೋರ್ಟ್ ವ್ಯಕ್ತಿಯ ಪ್ರತಿಷ್ಠಿತ ದಾಖಲೆ: ಸಚಿವ ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ28 Feb 2018 10:35 PM IST
share
ಪಾಸ್‍ಪೋರ್ಟ್ ವ್ಯಕ್ತಿಯ ಪ್ರತಿಷ್ಠಿತ ದಾಖಲೆ: ಸಚಿವ ಜಯಚಂದ್ರ

ತುಮಕೂರು,ಫೆ.28: ಪಾಸ್ ಪೋರ್ಟ್ ಎಂಬುದು ವ್ಯಕ್ತಿಯ ಪ್ರತಿಷ್ಠಿತ ದಾಖಲೆಯಾಗಿದ್ದು, ಪ್ರಪಂಚದ ಯಾವುದೇ ಮೂಲೆಗೆ ಹೋಗಲು ಇದರ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ನಗರದ ಅಂಚೆ ಮತ್ತು ತಂತಿ ಇಲಾಖೆಯ ವಸತಿಗೃಹ ಸಮುಚ್ಚಯದಲ್ಲಿ ಭಾರತ ವಿದೇಶಾಂಗ ಸಚಿವಾಲಯ, ಅಂಚೆ ಕಚೇರಿ ತುಮಕೂರು ಆಯೋಜಿಸಿದ್ದ ಅಂಚೆ ಕಚೇರಿ ಪಾಸ್‍ಪೋರ್ಟ್ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು, ಒಂದು ಪಾಸ್‍ಪೋರ್ಟ್ ಪಡೆಯುವುದು ತುಂಬ ಕಷ್ಟದ ದಿನಗಳಿದ್ದವು. ಆದರೆ ಇಂದು ನಮ್ಮ ಜಿಲ್ಲಾ ಕೇಂದ್ರದಲ್ಲಿಯೇ ಇಂತಹ ಕೇಂದ್ರ ಉದ್ಘಾಟನೆಯಾಗುತ್ತಿದ್ದು, ಇದರ ಲಾಭವನ್ನು ಎಲ್ಲರು ಪಡೆಯಬೇಕು. ಅದರಲ್ಲಿಯೂ ವಿದ್ಯಾರ್ಥಿಗಳು ಹೆಚ್ಚಿನದಾಗಿ ಇದರ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಎಸ್.ಪಿ.ಮುದ್ದ ಹನುಮೇಗೌಡ, ತುಮಕೂರು ನಗರದಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ತೆರೆಯಲು ಅನುಮತಿ ನೀಡಿದ ಕೇಂದ್ರ ಸರಕಾರಕ್ಕೆ ಮೊದಲು ಅಭಿನಂದನೆ ಸಲ್ಲಿಸಿದರು. ಅಂಚೆ ಇಲಾಖೆ, ವಿದೇಶಾಂಗ ಇಲಾಖೆ ಹಾಗೂ ಸ್ಥಳೀಯ ಶಾಸಕರಾದ ಡಾ.ರಫೀಕ್ ಅಹಮದ್ ಅವರ ಸಹಕಾರದಿಂದ ಅತಿ ಶೀಘ್ರವಾಗಿ ಅಂಚೆ ಪಾಸ್‍ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆಗೊಂಡಿದೆ. ಪಾಸ್ ಪೋರ್ಟ್‍ಗೆ ಅರ್ಜಿ ಸಲ್ಲಿಸುವವರ ಪ್ರತಿಯೊಬ್ಬರ ದೂರು ಪೊಲೀಸ್ ತನಿಖೆಯ ವಿಳಂಬ ಎಂಬುದಾಗಿದೆ. ವೇದಿಕೆಯಲ್ಲಿಯೇ ಪೊಲೀಸ್ ವರಿಷ್ಠಾಧಿಕಾರಿಗಳಿದ್ದು, ತುರ್ತಾಗಿ ಮತ್ತು ಕಟ್ಟು ನಿಟ್ಟಾಗಿ ತನಿಖೆ ನಡೆಸಿ ಸಹಕರಿಸುವಂತೆ ಮನವಿ ಮಾಡಿದರು.

ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರು ನಗರ ಬೆಳೆಯುತ್ತಿದ್ದು, ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಹೊಂದುತ್ತಿದೆ. ಅದರ ಒಂದು ಭಾಗವೇ ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರ. ಇಲ್ಲದೆ ಸದ್ಯದಲ್ಲಿಯೇ ಹಳೆಯ ಹೆಚ್.ಎಂ.ಟಿ.ಜಾಗದಲ್ಲಿ ಇಸ್ರೋ ಕಾರ್ಯನಿರ್ವಹಿಸಲಿದೆ. ಹೆಚ್.ಎ.ಎಲ್.,ತುಮಕೂರು ಮಿಷನ್ ಟೂಲ್ ಪಾರ್ಕು,ಎಂ.ಎಸ್.ಎಂ.ಇ ತರಬೇತಿ ಕೇಂದ್ರ,ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ಯೋಜನೆಗಳು ತುಮಕೂರು ಜಿಲ್ಲೆಯಲ್ಲಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳಲಿದೆ ಎಂಬ ವಿಶ್ವಾಸವನ್ನು ಮುದ್ದಹನುಮೇಗೌಡರು ವ್ಯಕ್ತಪಡಿಸಿದರು.

ಪ್ರಾದೇಶಿಕ ಪಾಸ್‍ಪೋರ್ಟ್ ಅಧಿಕಾರಿ ಭರತ್‍ಕುಮಾರ್ ಕುಟಿಯಾ ಮಾತನಾಡಿ, ಭಾರತ ಸರಕಾರ ಜನರ ಅನುಕೂಲಕ್ಕಾಗಿ ಪ್ರತಿ 50 ಕಿ.ಮಿ.ಗೆ ಒಂದು ಪಾಸ್‍ಪೋರ್ಟ್ ಸೇವಾ ಕೇಂದ್ರವನ್ನು ತೆರೆಯಲು ಮುಂದಾಗಿದ್ದು, ಇದರ ಭಾಗವಾಗಿ ಈ ವರ್ಷದ ಅಂತ್ಯಕ್ಕೆ 251 ಪಾಸ್ ಪೊರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಕರ್ನಾಟಕದಲ್ಲಿ ಈ ವರ್ಷ 12 ಸೇವಾ ಕೇಂದ್ರಗಳು ಆರಂಭವಾಗಲಿದ್ದು, ಈಗಾಗಲೇ ಮೈಸೂರು, ಬಳ್ಳಾರಿ, ಹಾಸನ, ಗದಗ ಹಾಗೂ ತುಮಕೂರು ಸೇರಿದಂತೆ ಒಟ್ಟು 5  ಕೇಂದ್ರಗಳು ಉದ್ಘಾಟನೆಯಾಗಿವೆ. ಪಾಸ್‍ಪೋರ್ಟ್ ಕೇವಲ ವಿದೇಶಕ್ಕೆ ಹೋಗಲು ಬೇಕಾದ ದಾಖಲೆಯಲ್ಲ. ಪ್ರತಿಯೊಬ್ಬ ವ್ಯಕ್ತಿಯ ಬಳಿ ಇರಲೇಬೇಕಾದ ದಾಖಲೆ, ಆದರೆ ಭಾರತದ ಶೇ5 ರಷ್ಟು ಜನ ಮಾತ್ರ ಹೊಂದಿದ್ದಾರೆ. ಇದನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಭಾರತ ಸರಕಾರ ಕ್ರಮ ಕೈಗೊಂಡಿದೆ. ತುಮಕೂರಿನ ಈ ಅಂಚೆ ಕಚೇರಿ ಪಾರ್ಸ್‍ಪೋರ್ಟ್ ಸೇವಾ ಕೇಂದ್ರ ಜಿಲ್ಲೆಯ ಜನರಲ್ಲಿ ಧನಾತ್ಮಕ ಬದಲಾವಣೆ ತರಲಿದೆ ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದ ಅಂಚೆ ಇಲಾಖೆಯ ಪ್ರಧಾನ ವ್ಯವಸ್ಥಾಪಕ ರಾಜೇಂದ್ರಕುಮಾರ್,ಪಾಸ್‍ಪೋರ್ಟ್ ಪಡೆಯುವುದು ಕಷ್ಟ ಎಂಬ ಕಾಲದಲ್ಲಿ, ಸರಕಾರ ಜನರ ಮನೆ ಬಾಗಿಲಲ್ಲಿಯೇ ಈ ಸೇವೆ ಒದಗಿಸಲು ಮುಂದಾಗಿದೆ. ತುಮಕೂರಿನ ಈ ಕೇಂದ್ರ ತೆರೆಯಲು ಜಾಗದ ಕೊರತೆ ಎದುರಾದಾಗ ಸಂಸದರು, ಶಾಸಕರು ಹಾಗೂ ಅಂಚೆ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಕೇಂದ್ರ ಆರಂಭಗೊಂಡಿದೆ. ಇದರ ಲಾಭವನ್ನು ಎಲ್ಲರೂ ಪಡೆಯುವಂತಾಗಲಿದೆ ಎಂದರು.

ವೇದಿಕೆಯಲ್ಲಿ ಶಾಸಕ ಡಾ.ರಫೀಕ್ ಅಹಮದ್,ಉಪಮೇಯರ್ ಫರ್ಜಾನಾಖಾನಂ,ಅಂಚೆ ಇಲಾಖೆಯ ಅಧೀಕ್ಷಕ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X