Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ: ಕೆ.ಎಸ್.ಪುಟ್ಟಣಯ್ಯರವರ ಪುಣ್ಯ...

ಕೋಲಾರ: ಕೆ.ಎಸ್.ಪುಟ್ಟಣಯ್ಯರವರ ಪುಣ್ಯ ತಿಥಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ28 Feb 2018 10:45 PM IST
share
ಕೋಲಾರ: ಕೆ.ಎಸ್.ಪುಟ್ಟಣಯ್ಯರವರ ಪುಣ್ಯ ತಿಥಿ ಆಚರಣೆ

ಕೋಲಾರ,ಫೆ.28: ಕೃಷಿ ಕಾರ್ಮಿಕರ ಹಾಗೂ ಮಹಿಳೆಯರ, ರೈತರ ಕಷ್ಟಗಳಿಗೆ ಸದನದ ಒಳಗೂ ಮತ್ತು ಹೊರಗೂ ಸದಾ ದ್ವನಿಯಾಗಿದ್ದ ಧೀಮಂತ ಹೋರಾಟಗಾರ ಶಾಸಕ ಕೆ.ಎಸ್.ಪುಟ್ಟಣಯ್ಯರವರ ಪುಣ್ಯ ತಿಥಿಯನ್ನು ತಿಥಿ ಬಿಡಿ ಸಸಿ ನೆಡಿ ಎಂಬ ಘೋಷಣೆಯೊಂದಿಗೆ ರೈತ ಸಂಘದಿಂದ ತಾಲೂಕು ಕಚೇರಿಯ(ಮಿನಿ ವಿಧಾನಸೌದ)ಮುಂದೆ ಸಸಿ ನೆಡುವ ಮೂಲಕ ಆಚರಿಸಲಾಯಿತು.

ದಲಿತ ಹಿರಿಯ ಮಹಿಳೆ ಮುನಿಯಮ್ಮನ ಕೈಯಿಂದ ಸಸಿ ನೆಡೆಸಿ ಮುನಿಯಮ್ಮನವರನ್ನು ಸನ್ಮಾನಿಸುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

37 ವರ್ಷಗಳ ನಿರಂತರವಾಗಿ ಚಳವಳಿಯಲ್ಲಿ ಸಕ್ರಿಯವಾಗಿ ಕುವೆಂಪುರವರ ವಿಚಾರಗಳಲ್ಲಿ ಅಪಾರ ನಂಬಿಕೆಯಿಟ್ಟು ಮೂಡನಂಬಿಕೆಗಳ ವಿರೋಧಿಯಾಗಿದ್ದರು. ನಂಜುಂಡಸ್ವಾಮಿ ಮತ್ತು ಎಸ್.ಡಿ.ಜಯರಾಮ್‍ರವರ ಮಾರ್ಗದರ್ಶನದಲ್ಲಿ ಚಳವಳಿಗೆ ಬಂದ ಪಟ್ಟಣಯ್ಯ ನಿರಂತರವಾಗಿ ಶೋಷಿತರ ಧ್ವನಿಯಾಗಿದ್ದರು. ಕಂದಾಯ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿ ರೈತನ ಪ್ರತಿ ಸಮಸ್ಯೆಯನ್ನು ಹೋರಾಟದ ಮೂಲಕ ಸರ್ಕಾರಗಳಿಗೆ ತಿಳಿಸಿ, ಹಾಸ್ಯಮಿಶ್ರಿತ ವ್ಯಂಗ್ಯರೂಪದಲ್ಲಿ ಸರ್ಕಾರಗಳನ್ನು ಬೆತ್ತಲೆಗೊಳಿಸುತ್ತಿದ್ದರೆಂದು ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ನುಡಿದರು.  

1994 ಮತ್ತು 2014ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ ಇವರು ವಿಧಾನಸಭೆಯ ಕಲಾಪಗಳಲ್ಲಿ ನೊಂದವರಿಗೆ ದ್ವನಿಯಾಗುತ್ತಿದ್ದರು. ಸದನದಲ್ಲಿ ನಾಡಿನ ಸಂಕಷ್ಟದ, ಶೋಷಿತ ಜನಾಂಗದ ವ್ಯವಸ್ಥೆಯ ಬಗ್ಗೆ ಚರ್ಚಿಸಿ ಸದನದ 224 ಶಾಸಕರ ಮನಕಲಕುತ್ತಿದ್ದರು. ಇಂತಹ ದೈತ್ಯ ಶಕ್ತಿ ರೈತ ಕುಲವನ್ನು ಹಗಲಿರುವುದು ನಾಡಿನ ಶ್ರಮಿಕರ ಆಶಾಕಿರಣ ಇಲ್ಲದಂತಾಗಿದ್ದು, ಇಂದಿನ ಭ್ರಷ್ಟ ವ್ಯವಸ್ಥೆಯಲ್ಲಿ ಪುಟ್ಟಣಯ್ಯನರವರು ಇಹಲೋಕ ತ್ಯಜಿಸಿರುವುದು ದೊಡ್ಡ ದುರಂತವಾಗಿದೆ. ಇಂತಹ ದೀಮಂತ ಹೋರಾಟಗಾರನ ಆಶಯಗಳನ್ನು ನೆರವೇರಿಸುವುದು ನಮ್ಮ ಯುವ ಸಮಾಜದ ಆದ್ಯ ಕರ್ತವ್ಯವಾಗಬೇಕಾಗಿದೆ. ಪುಟ್ಟಣ್ಣಯನವರ ಕನಸಿನಂತೆ ಸಮಸಮಾಜ ಕಟ್ಟಲು ಪ್ರತಿಯೊಬ್ಬರು ಮುಂದಾದಾಗ ಇವರ ಆದರ್ಶ ಮತ್ತು ನೆನಪುಗಳ ಚಿರಸ್ತಾಯುವಾಗಿ ಉಳಿಯುತ್ತವೆಂದು ಹೇಳಿ ನಮನ ಸಲ್ಲಿಸಲಾಯಿತು.  

ಈ ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ ಅಬ್ದುಲ್ ಸತ್ತಾರ್, ಎ.ನಳಿನಿ, ಮುನಿಯಮ್ಮ, ಮರಗಲ್ ಶ್ರೀನಿವಾಸ್, ಆನಂದಸಾಗರ್, ನುಕ್ಕನಹಳ್ಳಿ ಶ್ರೀರಾಮ್, ನಗರಸಭೆ ರಾಜೇಶ್, ಕನ್ನಡಮಿತ್ರ ವೆಂಕಟಪ್ಪ, ಚೇತನ್‍ಬಾಬು, ಚಂಬೆ ರಾಜೇಶ್, ಅಹಿಂದ ಮಂಜುನಾಥ್, ಶಿವು, ಸುಪ್ರಿಂಚಲ, ನಾರಾಯಣ್, ಕೇಶವಾ, ಕೆಂಬೋಡಿ ಕೃಷ್ಣೇಗೌಡ, ಈಕಂಬಳ್ಳಿ ಮಂಜುನಾಥ್, ಪುರುಶೋತ್ತಮ್, ಪುತ್ತೇರಿ ರಾಜು ಹಾಗೂ ವಿವಿದ ಸಂಘಟನೆಗಳ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X