Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹರಿಹರ: ಹುತಾತ್ಮ ಯೋಧ ಜಾವೀದ್ ಮನೆಗೆ...

ಹರಿಹರ: ಹುತಾತ್ಮ ಯೋಧ ಜಾವೀದ್ ಮನೆಗೆ ಯಡಿಯೂರಪ್ಪ ಭೇಟಿ

ವಾರ್ತಾಭಾರತಿವಾರ್ತಾಭಾರತಿ28 Feb 2018 11:33 PM IST
share
ಹರಿಹರ: ಹುತಾತ್ಮ ಯೋಧ ಜಾವೀದ್ ಮನೆಗೆ ಯಡಿಯೂರಪ್ಪ ಭೇಟಿ

ಹರಿಹರ,ಫೆ.28: ಭಾರತ ಸೈನಿಕರು ರಾಜಸ್ಥಾನದ ಜೋದ್‍ಪುರ ಜಿಲ್ಲೆಯ ಪೋಕ್ರಾನ್ ಅಣುಬಾಂಬ್ ತರಬೇತಿ ಕೇಂದ್ರದಲ್ಲಿ ನಡೆಸಿದ್ದ ಬಾಂಬ್ ಹಾರಿಸುವ ತರಬೇತಿಯಲ್ಲಿ ಭಾಗವಹಿಸಿ ವೀರಮರಣವನ್ನಪ್ಪಿರುವ ಹರಿಹರ ನಗರದ ಸೈನಿಕ ಜಾವೀದ್ ಮನೆಗೆ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರಾಜ್ಯ ಬಿಜೆಪಿ ಯಿಂದ ಜಾವೀದ್ ಕುಟುಂಬಕ್ಕೆ ಒಂದು ಲಕ್ಷ ರು. ನಗದು ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೌಜನ್ಯಕ್ಕಾದರೂ ವೀರಮರಣವನ್ನಪ್ಪಿರುವ ಯೋಧನ ಮನೆಗೆ ಭೇಟಿ ನೀಡದಿರುವುದು, ನಿಜಕ್ಕೂ ವೀರ ಸೈನಿಕನಿಗೆ ತೋರುವ ಅಗೌರವಕ್ಕೆ ಹಿಡಿದ ಕನ್ನಡಿಯಂತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರದಲ್ಲಿರುವವರು ಎಲ್ಲರನ್ನು ಸಮಾನದೃಷ್ಠಿಯಿಂದ ನೋಡಬೇಕು. ದೇಶ ಕಾಯುವ ಯೋಧ, ಅನ್ನದಾತ, ಕಾರ್ಮಿಕ ಇವರು ದೇಶದ ಬೆನ್ನೆಲುಬು. ಇವರ ಬಗ್ಗೆ ಅಗೌರವ ತೋರುತ್ತಿರುವುದು ಕಾಂಗ್ರೆಸ್ ಮೂರ್ಖತನದ ಪರಮಾವಧಿ. ತಕ್ಷಣವೇ ರಾಜ್ಯ ಸರ್ಕಾರ ವೀರಮರಣವನ್ನಪ್ಪಿರುವ ಸೈನಿಕನ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಬಿ.ಎಸ್ ವೈ ಆಗ್ರಹಿಸಿದರು.

ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯದಲ್ಲಿ ರೈತರ, ದೇಶಕಾಯುವ ಸೈನಿಕರ, ಪೊಲೀಸ್ ಅಧಿಕಾರಿಗಳ, ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಮರಣವನ್ನಪ್ಪಿದರೂ ಅವರ ಸಾವಿನ ಕುರಿತು ಕಂಬನಿ ಮಿಡಿಯುವುದಾಗಲಿ, ಸಾಂತ್ವನ ಹೇಳುವುದಕ್ಕಾಗಲಿ ಸರ್ಕಾರ ಮುಂದಾಗಿಲ್ಲ. ವೀರಮರಣವನ್ನಪ್ಪಿರುವ ಹರಿಹರದ ಯೋಧನ ಪತ್ನಿ ಸರತಾಜ್‍ಭಾನು ಬಿ.ಎ. ಪದವೀಧರಳಾಗಿದ್ದು, ಅವಳಿಗೆ ರಾಜ್ಯ ಸರ್ಕಾರ ನೌಕರಿ ನೀಡಬೇಕು. ತಂದೆ ಅಬ್ದುಲ್‍ಖಾದರ್, ತಾಯಿ ಫಾತಿಮಾಭಿ ಸೇರಿದಂತೆ ಸಹೋದರರು ಕಂಗಾಲಾಗಿದ್ದು, ಜೀವನ ನಿರ್ವಹಣೆಗೆ ಕುಟುಂಬಕ್ಕೆ ಕಂದಾಯ ಇಲಾಖೆಯಿಂದ ಜಮೀನನ್ನು ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಬಿ.ಪಿ ಹರೀಶ, ಜಿಪಂ ಮಾಜಿ ಅಧ್ಯಕ್ಷ ಹನಗವಾಡಿ ವಿರೇಶ, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಎಂ.ಶಿವಾನಂದಪ್ಪ, ನಗರಾಧ್ಯಕ್ಷ ರಾಜು ರೋಖಡೆ, ಮಹಿಳಾ ಅಧ್ಯಕ್ಷೆ ರೂಪಾ ಕಾಟವೆ, ನಗರಸಭಾ ಸದಸ್ಯೆ ಅಂಬುಜಾಬಾಯಿ, ಮಂಜುಳಾ ಅಜ್ಜಯ್ಯ, ಮಾಲತೇಶ ಭಂಡಾರಿ, ನಗರ ಬಿಜೆಪಿ ಕಾರ್ಯದರ್ಶಿ ತುಳಜಪ್ಪ, ಹೆಚ್.ಸಿ.ಕಿರ್ತಿಕುಮಾರ, ಮಂಜಾ ನಾಯ್ಕ, ಜಿಗಳಿ ಮಂಜುನಾಥ, ರಾಘವೇಂದ್ರ, ಎಪಿ ಆನಂದ, ಮಾಲತೇಶ, ಎಂ ಪ್ರಶಾಂತ, ಅಂಜುಮನ್ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ಕೆ. ಸೈಯದ ರೆಹೆಮಾನ್, ಶಮಿಉಲ್ಲಾ ಇತರರು ಹಾಜರಿದ್ದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X