Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹುಬ್ಬಳ್ಳಿ- ಬೆಳಗಾವಿಯಲ್ಲೂ 3 ಡಿ...

ಹುಬ್ಬಳ್ಳಿ- ಬೆಳಗಾವಿಯಲ್ಲೂ 3 ಡಿ ತಾರಾಲಯ: ಸಚಿವ ಎಂ.ಆರ್. ಸೀತಾರಾಂ

ವಾರ್ತಾಭಾರತಿವಾರ್ತಾಭಾರತಿ1 March 2018 8:54 PM IST
share
ಹುಬ್ಬಳ್ಳಿ- ಬೆಳಗಾವಿಯಲ್ಲೂ 3 ಡಿ ತಾರಾಲಯ: ಸಚಿವ ಎಂ.ಆರ್. ಸೀತಾರಾಂ

ಮಂಗಳೂರು, ಮಾ.1: ಭಾರತದ ಪ್ರಥಮ ತ್ರಿಡಿ 8 ಕೆ ತಾರಾಲಯ ಮಂಗಳೂರಿನಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲೂ 3ತ್ರಿಡಿ ತಾರಾಲಯ ನಿರ್ಮಾಣವಾಗಲಿದೆ ಎಂದು ರಾಜ್ಯದ ಯೋಜನೆ, ಸಾಂಖ್ಯಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್. ಸೀತಾರಾಂ ತಿಳಿಸಿದರು.

ಭಾರತದ ಪ್ರಥಮ ತ್ರಿಡಿ ತಾರಾಲಯದ ಉದ್ಘಾಟನೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ತ್ರಿಡಿ ತಾರಾಲಯದ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, 22 ಕೋಟಿ ರೂ. ಬಿಡುಗಡೆ ಆಗಿದೆ. ಬೆಳಗಾವಿಯಲ್ಲಿ ಕಟ್ಟಡ ನಿರ್ಮಾಣ ಪ್ರಾರಂಭಿಕ ಹಂತದಲ್ಲಿದ್ದು, 3 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ವಿಜ್ಞಾನದ ಮಹತ್ವವನ್ನು ಮಕ್ಕಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಹೈದರಾಬಾದ್ ಕರ್ನಾಟಕ ಸೇರಿದಂತೆ ಐದು ಕಡೆ ಮೊಬೈಲ್ ತಾರಾಲಯಗಳ ಮೂಲಕ ಶಾಲಾ ಮಕ್ಕಳಿಗೆ ವಿಜ್ಞಾನದ ಮಾಹಿತಿಯನ್ನು ಒದಗಿಸುತ್ತಿದೆ. ಇನ್ನೂ 7 ಮೊಬೈಲ್ ತಾರಾಲಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ. ಪ್ರಸ್ತುತ ಧಾರವಾಡ, ಮಂಗಳೂರು ಹಾಗೂ ಮೈಸೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿವೆ. ಬೀದರ್, ಬಳ್ಳಾರಿ, ಆಯಚೂರು, ಕಾರವಾರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೊಪ್ಪಳ, ಹಾವೇರಿ, ಬಾಗಲಕೋಟೆ, ದಾವಣಗೆರೆ ಹಾಗೂ ಗದಗ ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ಕೇಂದ್ರಗಳು ನಿರ್ಮಾಣ ಹಂತದಲ್ಲಿವೆ. ಮಂಡ್ಯ, ಕೋಲಾರ, ಚಿತ್ರದುರ್ಗ, ರಾಮನಗರ, ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಮಂಜೂರಾಗಿವೆ ಎಂದು ಅವರು ಹೇಳಿದರು.

ಮಾಜಿ ಶಾಸಕ ಯೋಗೀಶ್ ಭಟ್‌ರವರು ತಾರಾಲಯಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಹೇಳಿಕೆ ಅಚ್ಚರಿ ತಂದಿದೆ. 2013ರವರೆಗೆ 8 ಕೋಟಿ ರೂ.ಗಳ ಬಿಡುಗಡೆಯೊಂದಿಗೆ 3ಡಿ ತಾರಾಲಯದ ಮಂಜೂರಾತಿ ಪ್ರಕ್ರಿಯೆ ಕಾಗದಪತ್ರಕ್ಕೆ ಮಾತ್ರವೇ ಸೀಮಿತವಾಗಿತ್ತು. ಅವರು ಶಾಸಕರಾಗಿದ್ದಾಗ ಯೋಜನೆ ಮಂಜೂರು ಆಗಿರಬಹುದು.

ಶಾಸಕ ಜೆ.ಆರ್. ಲೋಬೋ ಅವರು ಅಧಿಕಾರಿಯಾಗಿದ್ದ ಸಮಯದಲ್ಲಿ ತಾರಾಲಯ ನಿರ್ಮಾಣದ ಮುತುವರ್ಜಿ ವಹಿಸಿದ್ದರು. ಇದಾಗಿ 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಟೆಂಡರ್ ಆಗಿ 2014ರಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಆವಾಗಲೇ 24 ಕೋಟಿ ರೂ.ಗೆ ಅಂದಾಜಿಸಲಾಗಿದ್ದು, ನಾನು ಸಚಿವನಾದ ಬಳಿಕ ಅದು 36 ಕೋಟಿ ರೂ.ಗಳಿಗೆ ಏರಿಕೆಯಾಯಿತು. ಕಾಮಗಾರಿ ಆರಂಭವಾಗಿದ್ದೇ 2013ರಿಂದ. ಅಂದಾಜು ವೆಚ್ಚದ ಏರಿಕೆಯಿಂದಾಗಿ ನಾಲ್ಕೈದು ತಿಂಗಳು ಕಾಮಗಾರಿ ವಿಳಂಬವಾಯಿತು ಎಂದು ಸಚಿವ ಎಂ.ಆರ್. ಸೀತಾರಾಂ ಹೇಳಿದರು.

ಕೊಡಗುವಿನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಇತ್ತೀಚೆಗೆ ಆರಂಭಿಸಲಾಯಿತು. ರಾಮಚಂದ್ರ ಗೌಡ ಸಚಿವರಾಗಿದ್ದ ವೇಳೆ ಬಜೆಟ್ ಘೋಷಣೆಯಾಗಿ 1 ಕೋಟಿ ರೂ. ಬಿಡುಗಡೆಯಾಗಿತ್ತು. ಆದರೆ ಒಂದು ರೂಪಾಯಿ ಬಳಕೆ ಮಾಡಿರಲಿಲ್ಲ. ಜಾಗವನ್ನೂ ಗುರುತಿಸಲಾಗಿರಲಿಲ್ಲ. ಹಾಗಾಗಿ ಘೋಷಣೆ ಮತ್ತು ಮಂಜೂರು ನೀಡುವುದರಿಂದ ಏನೂ ಆಗುವುದಿಲ್ಲ ಎಂದು ಅವರು ಹೇಳಿದರು.

ಅಂದು ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಅವರು ಶಂಕುಸ್ಥಾಪನೆಯನ್ನು ಪಿಲಿಕುಳದಲ್ಲಿ ಮಾಡಿಲ್ಲ. ಅವರು ಬೇರೆ ಕಾರ್ಯಕ್ರಮಕ್ಕೆ ಮಂಗಳೂರಿಗೆ ಬಂದಿದ್ದ ವೇಳೆ ಒಟ್ಟಿಗೆ ಇದರ ಶಂಕುಸ್ಥಾಪನೆ ನೆರವೇರಿಸಿದ್ದರು. ಇಲ್ಲಿ ಯಾವುದೇ ನಾಮಫಲಕ ಹಾಕಿಲ್ಲ. ಅವರು ಯೋಜನೆಗೆ ಮಂಜೂರಾತಿ ನೀಡಿರುವುದರ ಬಗ್ಗೆ ನಮಗೆ ಅರಿವಿದೆ. ಅದರ ಬಳಿಕ ಏನು? ಇಲ್ಲಿ 10 ವರ್ಷಗಳಿಂದ ಸ್ಥಳೀಯ ಶಾಸಕರಾಗಿದ್ದವರು ಅಭಯಚಂದ್ರ ಜೈನ್ ಅವರು. ಅವರಿಗೂ ತಿಳಿದಿಲ್ಲ. 2004ರಿಂದ ಅಧಿಕಾರಿಯಾಗಿ ಈ ಯೋಜನೆಯ ಬೆನ್ನು ಬಿದ್ದವರೇ ಪ್ರಸಕ್ತ ಶಾಸಕರಾಗಿರುವ ಜೆ.ಆರ್. ಲೋಬೊ ಅವರು ಎಂದವರು ಹೇಳಿದರು.

ಈ ಸಂದರ್ಭ ಉಪಸ್ಥಿತರಿದ್ದ ಶಾಸಕ ಜೆ.ಆರ್. ಲೋಬೊ ಮಾತನಾಡಿ, 2008ರಲ್ಲಿ ಈ ಯೋಜನೆಯ ರೂಪು ರೇಷೆ ತಯಾರಿಸಿ ಮಂಜೂರಾತಿಗೆ ಅಂದಿನ ಸರಕಾರಕ್ಕೆ ಶಾಸಕ ಯೋಗೀಶ್ ಭಟ್ ಮೂಲಕ ಆಗ್ರಹಿಸಲಾಯಿತು. ಅವರು ಮುಖ್ಯಮಂತ್ರಿ ಜತೆ ಮಾತನಾಡಿ ಯೋಜನೆಗೆ 8 ಕೋಟಿ ರೂ. ಮಂಜೂರು ಮಾಡಿಸಿದ್ದರು. ಆ ಬಳಿಕ ಯೋಜನಾ ವೆಚ್ಚ 15 ಕೋಟಿ ರೂ.ಗಳಾದಾಗ ಅದನ್ನು ಇಲಾಖೆಯ ಮೂಲಕ ಮಂಜೂರು ಮಾಡಿಸಲಾಗಿತ್ತು. ಇದೀಗ ಮಾಜಿ ಶಾಸಕರು ಹೇಳಿರುವಂತೆ ನಾವು ಯಾವುದೇ ನಾಮಫಲಕವನ್ನು ನೋಡಿಲ್ಲ. ತೆಗೆದೂ ಇಲ್ಲ. 2014ರಲ್ಲಿ ಗುದ್ದಲಿ ಪೂಜೆ ಮಾಡಿ ಕಾಮಗಾರಿ ಆರಂಭಿಸಲಾಯಿತು ಎಂದು ಹೇಳಿದರು.

ಶಾಸಕ ಅಭಯ ಚಂದ್ರ ಜೈನ್, ಮೇಯರ್ ಕವಿತಾ ಸನಿಲ್, ಪ್ರಾದೇಶಿಕ ವಿಜ್ಞಾನ ಕೇಂದ್ರದ ಡಾ. ಹೊನ್ನೇಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X