Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್ ಮಾರುಕಟ್ಟೆಯ ಹೆಸರಲ್ಲಿ ಜನತೆಯ...

ಸುರತ್ಕಲ್ ಮಾರುಕಟ್ಟೆಯ ಹೆಸರಲ್ಲಿ ಜನತೆಯ ಹಣ ಲೂಟಿ: ಮುನೀರ್ ಕಾಟಿಪಳ್ಳ

ಡಿವೈಎಫ್ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 March 2018 4:46 PM IST
share
ಸುರತ್ಕಲ್ ಮಾರುಕಟ್ಟೆಯ ಹೆಸರಲ್ಲಿ ಜನತೆಯ ಹಣ ಲೂಟಿ: ಮುನೀರ್ ಕಾಟಿಪಳ್ಳ

ಮಂಗಳೂರು, ಮಾ. 2: ಸುರತ್ಕಲ್ ತಾತ್ಕಾಲಿಕ ಮಾರುಕಟ್ಟೆಯ ಅಂಗಡಿ ಹಂಚಿಕೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಮಾರುಕಟ್ಟೆ ಲಾಬಿಗಳು ಹೊಸ ಅಂಗಡಿ ಕಟ್ಟಡಗಳನ್ನು ಒಡೆದು ಹಾಕಿ ಸಾರ್ವಜನಿಕ ಸಂಪತ್ತಿಗೆ ಹಾನಿ ಉಂಟು ಮಾಡುತ್ತಿರುವವರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಸುರತ್ಕಲ್ ಮಾರುಕಟ್ಟೆ ಮುಂಭಾಗ ಡಿವೈಎಫ್ಐ ಸುರತ್ಕಲ್ ಘಟಕ ಶುಕ್ರವಾರ ಪ್ರತಿಭಟನೆ ಹಮ್ಮಿಕೊಂಡಿತ್ತು.  

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸುರತ್ಕಲ್ ನಂತಹ ಉಪನಗರಕ್ಕೆ ನೂರು ಕೋಟಿ ಮೌಲ್ಯದ ಮಾರುಕಟ್ಟೆ ತರುವ ಲಾಬಿಯ ಹಿಂದೆ ಜನತೆಯ ಹಣ ಲೂಟಿ ಹೊಡೆಯುವ ಹುನ್ನಾರ ಅಡಗಿದೆ. ಎಡಿಬಿ ಸಾಲದ ಕುಡ್ಸೆಂಪ್ ಒಳಚರಂಡಿ ಯೋಜನೆಯಲ್ಲಿ 360 ಕೋಟಿ ರೂ. ಕಂಡವರ ಪಾಲಾಗಿತ್ತು. ಈಗ ಮಾರುಕಟ್ಟೆ ಹೆಸರಿನಲ್ಲಿ ಭ್ರಷ್ಟಾಚಾರಕ್ಕೆ ವೇದಿಕೆ ಸಿದ್ಧಗೊಂಡಿದೆ. ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣಕ್ಕೆ ನಿಯಮಗಳನ್ನು ಉಲ್ಲಂಘಿಸಿ 5 ಕೋಟಿ ರೂ. ಖರ್ಚು ಮಾಡಿರುವುದು, ತಾತ್ಕಾಲಿಕ ಮಾರುಕಟ್ಟೆ ವಿತರಣೆಯಲ್ಲಿ ಶಾಸಕರ ಆಪ್ತರು ತಮಗೆ ಬೇಕಾದಂತೆ ಅಂಗಡಿ ಕೋಣೆ ಹಂಚಿಕೊಂಡು, ಕಟ್ಟಡಗಳನ್ನು ಬೇಕಾಬಿಟ್ಟಿ ನಿರ್ಮಿಸುತ್ತಿರುವುದು ಭ್ರಷ್ಟಾಚಾರದ ಅನುಮಾನಗಳಿಗೆ ಸ್ಪಷ್ಟ ನಿದರ್ಶನವಾಗಿದೆ. ಈ ಎಲ್ಲಾ ಅಂದಾದುಂದಿ, ಗೋಲ್ ಮಾಲ್ ಗಳ ಹಿಂದೆ ಶಾಸಕ ಮೊಯ್ದಿನ್ ಬಾವ ಅವರ ನೇರ ಕೈವಾಡ ಇದೆ ಎಂದು ಹೇಳಿದರು.

ಸುರತ್ಕಲ್ ಮಾರುಕಟ್ಟೆ ನಿರ್ಮಾಣದ ವಿಚಾರದಲ್ಲಿ‌ ಶಾಸಕರು ನಿಯಮಗಳಿಗೆ ಬೆಲೆ ನೀಡುತ್ತಿಲ್ಲ. ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣಕ್ಕೆ ಐದು ಕೋಟಿಯಷ್ಟು ದೊಡ್ಡ ಮೊತ್ತ ವ್ಯಯಿಸಿದ್ದು, ಶಾಶ್ವತ ಸ್ವರೂಪದ  ಕಟ್ಟಡ ಕಟ್ಟಿರುವುದರಲ್ಲಿ ಅವ್ಯವಹಾರ ನಡೆಸಲಾಗಿದೆ. ಶಾಸಕರ ದಬ್ಬಾಳಿಕೆಗೆ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ತೆರಿಗೆಯ ದುಡ್ಡು  ಭ್ರಷ್ಟರ ಪಾಲಾಗುವಂತಾಗಿದೆ. ಅಂಗಡಿ ಕಟ್ಟಡ ವಿತರಣೆಯಲ್ಲಿ ಯಾವುದೇ ನಿಯಮ ಪಾಲಿಸದೆ, ಶಾಸಕರ ಸ್ವಂತ ಆಸ್ತಿಯಂತೆ ಹಂಚಲಾಗಿದೆ. ಈ ಕುರಿತು ಪಾಲಿಕೆ ಕಮೀಷನರ್ ಗಮನಕ್ಕೆ ಹಲವು ಬಾರಿ ತಂದರೂ ಪ್ರಯೋಜನವಾಗಿಲ್ಲ, ಡಿವೈಎಫ್ಐ ಈ ಅನ್ಯಾಯವನ್ನು ಸಹಿಸುವುದಿಲ್ಲ. ನ್ಯಾಯಪಾಲನೆ ಆಗುವವರೆಗೂ ಹೋರಾಟ ನಡೆಸಲಿದೆ ಎಂದರು.

ಆರಂಭದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ  ಬಿ ಕೆ ಇಮ್ತಿಯಾಝ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪ್ರತಿಭಟನೆಯ ನೇತೃತ್ವವನ್ನು ಡಿವೈಎಫ್ಐ ಮುಖಂಡರಾದ ಅಜ್ಮಲ್ ಅಹ್ಮದ್, ಬಿ ಕೆ ಮಕ್ಸೂದ್, ಐ ಮುಹಮ್ಮದ್, ಶ್ರೀನಿವಾಸ ಹೊಸಬೆಟ್ಟು, ಅಬುಸಾಲಿ ಕೃಷ್ಣಾಪುರ, ಮಾರುಕಟ್ಟೆ ವ್ಯಾಪರಸ್ಥರಾದ ಯಾದವ ಶೆಟ್ಟಿಗಾರ್, ಅಶ್ರಫ್ ಜನತಾ ಕಾಲನಿ, ಚೆರಿಯೋನು ಸುರತ್ಕಲ್, ಅಬೂಬಕರ್ ಬಾವ, ಮುಹಿಯದ್ದಿ, ಮೀನು ವ್ಯಾಪಾರಸ್ಥರ ಸಮಿತಿಯ ಯಶೋಧಕ್ಕ ಮತ್ತಿತರರು ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X