Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಸಮವಸ್ತ್ರದಲ್ಲಿ ಮಾಜಿ ಸೇನಾ...

ಆರೆಸ್ಸೆಸ್ ಸಮವಸ್ತ್ರದಲ್ಲಿ ಮಾಜಿ ಸೇನಾ ಮುಖ್ಯಸ್ಥ, ಹಾಲಿ ಕೇಂದ್ರ ಸಚಿವ ಜ.ವಿಕೆ ಸಿಂಗ್

ಇನ್ನೂ ತಣ್ಣಗಾಗಿಲ್ಲ ಸೇನೆಯನ್ನು ಭಾಗವತ್ ಅವಮಾನಿಸಿದ ಆರೋಪ

ವಾರ್ತಾಭಾರತಿವಾರ್ತಾಭಾರತಿ2 March 2018 5:03 PM IST
share
ಆರೆಸ್ಸೆಸ್ ಸಮವಸ್ತ್ರದಲ್ಲಿ ಮಾಜಿ ಸೇನಾ ಮುಖ್ಯಸ್ಥ, ಹಾಲಿ ಕೇಂದ್ರ ಸಚಿವ ಜ.ವಿಕೆ ಸಿಂಗ್

ಹೊಸದಿಲ್ಲಿ,ಮಾ.2: ತನ್ನ ಜನ್ಮದಿನಾಂಕ ಕುರಿತು ಸುದೀರ್ಘ ಕಾನೂನು ಹೋರಾಟದಲ್ಲಿ ಸೋಲನ್ನಪ್ಪಿದ ಬಳಿಕ 2014ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಬಳಿಕ ಕೇಂದ್ರದಲ್ಲಿ ಸಹಾಯಕ ಸಚಿವರಾಗಿರುವ ಭೂಸೇನೆಯ ಮಾಜಿ ಮುಖ್ಯಸ್ಥ ಜ.ವಿ.ಕೆ.ಸಿಂಗ್ ಅವರು ಇದೀಗ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಭಾರತೀಯ ಸೇನೆಯಲ್ಲಿ ತನ್ನ 42 ವರ್ಷಗಳ ವೃತ್ತಿಜೀವನದುದ್ದಕ್ಕೂ ಆಲಿವ್ ಗ್ರೀನ್ ಸಮವಸ್ತ್ರ ಧರಿಸಿದ್ದ ಸಿಂಗ್ ಅವರು ಆರೆಸ್ಸೆಸ್ ಸಮವಸ್ತ್ರವನ್ನು ಧರಿಸಿರುವ ಚಿತ್ರಗಳಿಗೆ ಭಾರೀ ಟೀಕೆಗಳು ವ್ಯಕ್ತವಾಗಿವೆ.

ಆರೆಸ್ಸೆಸ್ ನಿಷೇಧಿತ ಸಂಘಟನೆಯಲ್ಲ, ಹೀಗಾಗಿ ಆರೆಸ್ಸೆಸ್ ಸಮವಸ್ತ್ರವನ್ನು ಧರಿಸುವುದು ಮಾಜಿ ಸೇನಾನಿ ಸಿಂಗ್ ಅವರ ವೈಯಕ್ತಿಕ ಆಯ್ಕೆಯಾಗಿದೆ ಎಂದು ಕೆಲವರು ವಾದಿಸುತ್ತಿದ್ದರೆ, ಇದು ಆರೆಸ್ಸೆಸ್‌ನ ಸಿದ್ಧಾಂತಗಳಿಗೆ ವಿರುದ್ಧವಾಗಿರುವ ಸೇನೆಯ ಮೌಲ್ಯಗಳು ಮತ್ತು ಸಂಪ್ರದಾಯಗಳ ರಾಜಾರೋಷ ಉಲ್ಲಂಘನೆಯಾಗಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂತಹ ಪೂರ್ವ ನಿದರ್ಶನವು ಸಶಸ್ತ್ರ ಪಡೆಗಳಲ್ಲಿ ಬಹುಸಂಖ್ಯಾತ ರಾಷ್ಟ್ರೀಯವಾದಕ್ಕೆ ಉತ್ತೇಜನ ನೀಡಬಹುದು ಎಂಬ ಭೀತಿಯೂ ವ್ಯಕ್ತವಾಗಿದೆ.

ಅತ್ಯಂತ ಹೆಚ್ಚು ಪದಕಗಳನ್ನು ಗಳಿಸಿರುವ ಹಾಲಿ ಸೇನಾಧಿಕಾರಿಗಳ ಪೈಕಿ ಓರ್ವರಾಗಿರುವ ಕರ್ನಲ್ ಸೌರಭ್ ಸಿಂಗ್ ಶೇಖಾವತ್ ಅವರು ವೀಡಿಯೊವೊಂದ ರಲ್ಲಿ ಸೇನೆಯಲ್ಲಿನ ಜಾತ್ಯತೀತ ಸಂಸ್ಕೃತಿಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದರು. ಈ ಮಾದರಿಯನ್ನು ದೇಶದಲ್ಲಿ ಅನ್ವಯಿಸಿದರೆ ಹೆಚ್ಚಿನೆಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಶೇಖಾವತ್ ತನ್ನ ಮಾತಿನ ಕೊನೆಯಲ್ಲಿ ಹೇಳಿದ್ದರು. ವಿಪರ್ಯಾಸವೆಂದರೆ ನಿವೃತ್ತ ಯೋಧ ರಘುರಾಮನ್ ಅವರು ಈ ವೀಡಿಯೊವನ್ನು ಶೇರ್ ಮಾಡಿಕೊಂಡಿರುವ ಸಂದರ್ಭದಲ್ಲಿಯೇ ಸಿಂಗ್ ಅವರು ಆರೆಸ್ಸೆಸ್ ಸಮವಸ್ತ್ರ ಧರಿಸಿರುವ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಫೆ.26ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದ ಆರೆಸ್ಸೆಸ್‌ನ ‘ರಾಷ್ಟ್ರೋದಯ ಸಮ್ಮೇಳನ’ದಲ್ಲಿ ಸಿಂಗ್ ಅವರು ಸಂಘದ ಸಮವಸ್ತ್ರವನ್ನು ಧರಿಸಿರುವ ಚಿತ್ರಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಸಿಂಗ್ ಸೇರಿದಂತೆ ಪೂರ್ವ ಉತ್ತರ ಪ್ರದೇಶದ ಹಲವಾರು ಕೇಂದ್ರ ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ಸಿಂಗ್ ಅವರು ನಿವೃತ್ತಿಯ ಬಳಿಕ ಭಾರತೀಯ ಸೇನೆಯ ಅತ್ಯುಚ್ಚ ಹುದ್ದೆಯ ಘನತೆಯನ್ನು ತಗ್ಗಿಸಿದ್ದಾರೆ ಎಂದು ವಾಯುಪಡೆಯ ನಿವೃತ್ತ ಅಧಿಕಾರಿ ಹಾಗು ಸಬ್ಕಾ ಸೈನಿಕ್ ಸಂಘರ್ಷ ಸಮಿತಿಯ ಕಾರ್ಯಕಾರಿ ಸದಸ್ಯ ನಳಿನ್ ತಲ್ವಾರ್ ಕಟುವಾಗಿ ಟೀಕಿಸಿದ್ದಾರೆ. ಸೇನೆಯ ನಿವೃತ್ತ ಮುಖ್ಯಸ್ಥರು ಆರೆಸ್ಸೆಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡಿರುವದು ಹತಾಶೆಯನ್ನುಂಟು ಮಾಡುವ ಮತ್ತು ನಾಚಿಕೆಗೇಡಿನ ವಿಷಯವಾಗಿದೆ. ಅವರು ತನ್ನ ಹೆಸರಿನಲ್ಲಿ ‘ಜನರಲ್’ಪದವನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಕಿಡಿಕಾರಿದ್ದಾರೆ. ಅವರು ತನ್ನ ಸಾರ್ವಜನಿಕ ಜೀವನದಲ್ಲಿ ತಟಸ್ಥತೆಯನ್ನು ಕಾಯ್ದುಕೊಳ್ಳದಿದ್ದರೆ ನಿವೃತ್ತ ಮತ್ತು ಹಾಲಿ ಸೇನಾಧಿಕಾರಿಗಳು ಮತ್ತು ಯೋಧರು ಅವರಿಗೆ ಸಾಲ್ಯೂಟ್ ಮಾಡಬಾರದು ಎಂದಿದ್ದಾರೆ.

ಆರೆಸ್ಸೆಸ್ ಸಮವಸ್ತ್ರವನ್ನು ಧರಿಸುವ ಮೂಲಕ ಸಿಂಗ್ ಅವರು ತನ್ನ ಸೇನಾ ಸಮವಸ್ತ್ರಕ್ಕೆ ಅವಮಾನವನ್ನುಂಟು ಮಾಡಿದ್ದಾರೆ ಎಂದು ಹಿರಿಯ ನ್ಯಾಯವಾದಿ ಪ್ರಶಾಂತ ಭೂಷಣ ಟ್ವೀಟಿಸಿದ್ದಾರೆ. ಟ್ವಿಟರ್‌ನಲ್ಲಿ ಇತರ ಹಲವು ಅಭಿಪ್ರಾಯಗಳೂ ಇದನ್ನೇ ಧ್ವನಿಸಿವೆ.


 

If you had to listen to one man today. #OneTalkToday
Who - Col SS Shekhawat, CO 21 Special Forces, the most decorated serving officer.

Why - In one minute he gives a lesson more powerful than all politicians put together @atahasnain53 @rwac48 @rajeev_mp @ragarwal @priyaramani pic.twitter.com/J08KCE0KGA

— Raghu Raman (@captraman) February 7, 2018

Former Chief of Army Staff and union minister General VK Singh participates in #Rashtroday event of RSS at Meerut in RSS uniform pic.twitter.com/6Wknqob7Yo

— DeshGujarat (@DeshGujarat) February 25, 2018

By donning the uniform of the RSS, which is opposed to a secular State, Gen VK Singh (who tried to manipulate his age, to extend his date of retirement) has disgraced his army uniform pic.twitter.com/3PwCUouT2L

— Prashant Bhushan (@pbhushan1) February 27, 2018

Gen VK Singh donning the RSS costume is worrysome. A man who has served the army should never lift spirits of self-proclaimed protectors of the saffron flag instead of the tri+color.#shameful #Rashtroday2018 https://t.co/50o9WpQriP

— Raman Singh (@Lawyer_RAMAN) February 27, 2018

Mohan Bhagwat was right about RSS doing things quickly for which the Army takes so long. For 42 years, Army tried to make VK Singh a secular, multicultural person but RSS took only 4 years to make him a Hindu Rashtra Crusader Sanghi @sanjayuvacha pic.twitter.com/AYAvMFG73p

— Paresh (@hi_paresh) February 28, 2018

So, was VK Singh always part of the RSS. Or did he join after developing political ambitions, post-retirement? https://t.co/1RTD7JAljB

— IndiaExplained (@IndiaExplained) February 28, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X