Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತುಂಬಾ ತಡವಾಗುವ ಮುನ್ನ ನಮ್ಮನ್ನು...

ತುಂಬಾ ತಡವಾಗುವ ಮುನ್ನ ನಮ್ಮನ್ನು ರಕ್ಷಿಸಿ: ಜಗತ್ತಿಗೆ ಸಿರಿಯಾ ಬಾಲಕನ ಮನವಿ

ವಾರ್ತಾಭಾರತಿವಾರ್ತಾಭಾರತಿ2 March 2018 5:22 PM IST
share
ತುಂಬಾ ತಡವಾಗುವ ಮುನ್ನ ನಮ್ಮನ್ನು ರಕ್ಷಿಸಿ: ಜಗತ್ತಿಗೆ ಸಿರಿಯಾ ಬಾಲಕನ ಮನವಿ

ಡಮಾಸ್ಕಸ್, ಮಾ.2: ಸಿರಿಯಾ ದೇಶದ ನಿವಾಸಿಯಾಗಿರುವ 15 ವರ್ಷದ ಮುಹಮ್ಮದ್ ನಜೆಮ್ ತನ್ನ ವಯಸ್ಸಿನ ಇತರ ಬಾಲಕರಂತೆಯೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗಿದ್ದಾನೆ. ಆದರೆ ಇತರರಂತೆ ಸೆಲ್ಫಿಗಳನ್ನು ಪೋಸ್ಟ್ ಮಾಡದೆ ಆತ ಡಿಸೆಂಬರ್ 7ರಿಂದ ಟ್ವಿಟ್ಟರ್ ಖಾತೆಯ ಮೂಲಕ ತನ್ನ ದೇಶದ ಪೂರ್ವ ಘೌಟಾ ಪ್ರದೇಶದ ಮೇಲೆ ಅಧ್ಯಕ್ಷ ಬಶರ್ ಅಲ್-ಅಸ್ಸದ್ ಪಡೆಗಳು ನಡೆಸುತ್ತಿರುವ ದಾಳಿಯ ಭೀಕರತೆಯನ್ನು ಜಗತ್ತಿಗೆ ತೋರಿಸುತ್ತಿದ್ದಾನೆ.

2011ರಿಂದ  ನಾಗರಿಕ ಯುದ್ಧದಲ್ಲಿ ಕಂಗಾಲಾಗಿ ಹೋಗಿರುವ ದೇಶದಲ್ಲಿ ಬಂಡುಕೋರರ ಹಿಡಿತದಲ್ಲಿರುವ ಕೆಲವೇ ಕೆಲವು ಪ್ರದೇಶಗಳಲ್ಲೊಂದಾದ ಪೂರ್ವ ಘೌಟಾದಲ್ಲಿನ ಪರಿಸ್ಥಿತಿಯನ್ನು ಮುಹಮ್ಮದ್ ನಜೆಮ್ ತನ್ನ ಟ್ವಿಟ್ಟರ್ ಖಾತೆಯ ಮೂಲಕ ವಿವರಿಸುತ್ತಿದ್ದಾನೆ. ಅಲ್ಲಿನ ಸಂಕಷ್ಟಗಳನ್ನು ವಿವರಿಸುವ ಫೋಟೋಗಳಲ್ಲದೆ ವೀಡಿಯೋಗಳನ್ನೂ ಆತ ಪೋಸ್ಟ್ ಮಾಡಿದ್ದಾನೆ.

ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸದ್ ಹಾಗೂ ವಿವಿಧ ಬಂಡುಕೋರ ಗುಂಪುಗಳ ನಡುವಿನ ಸಂಘರ್ಷ ಈಗಾಗಲೇ ದೇಶದ 4.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆಯಲ್ಲದೆ ಲಕ್ಷಾಂತರ ಜನರನ್ನು ಬೀದಿಗೆ ತಳ್ಳಿದೆ. ಕಳೆದ ಹಲವಾರು ವರ್ಷಗಳಲ್ಲಿ ಅಧ್ಯಕ್ಷರ ನೇತೃತ್ವದ ಪಡೆ ಹಲವಾರು ಪ್ರದೇಶಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದರೂ ಪೂರ್ವ ಘೌಟಾದಲ್ಲಿ ಇನ್ನೂ ಯುದ್ಧ ಪರಿಸ್ಥಿತಿ ಮುಂದುವರಿದಿದೆ. ಫೆಬ್ರವರಿಯಲ್ಲಿ ಇಲ್ಲಿನ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ಅಧ್ಯಕ್ಷರ ಪಡೆ, ರಷ್ಯಾ ಸಹಾಯದೊಂದಿಗೆ ಇಲ್ಲಿ ನಡೆಸಿದ ವಾಯುದಾಳಿಯಲ್ಲಿ ಈಗಾಗಲೇ  500 ಮಂದಿ ಬಲಿಯಾಗಿದ್ದು ಜನರು ಭೂಗತ  ಆಶ್ರಯತಾಣಗಳಲ್ಲಿ ತಂಗುವಂತೆ  ಮಾಡಿ ಅವರೆಲ್ಲರೂ  ಆಹಾರ ಮತ್ತು ನೀರಿಗಾಗಿ ಹಪಹಪಿಸುವಂತೆ ಮಾಡಿದೆ.

ಅಂತಾರಾಷ್ಟ್ರೀಯ ಸಮುದಾಯ ಇಲ್ಲಿನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ನಜೆಮ್ ಆಶಯ. ತಾನು ಮತ್ತು ತನ್ನ ಕುಟುಂಬ ಭೂಗತ ಆಶ್ರಯತಾಣದಲ್ಲಿರುವುದಾಗಿಯೂ ಅಲ್ಲಿ ತಮಗೆ ಸಾಕಷ್ಟು ಆಹಾರ, ನೀರು ಯಾ ವಿದ್ಯುತ್ ಇಲ್ಲವೆಂದೂ ಆತ ತಿಳಿಸಿದ್ದಾನೆ.

ಪೂರ್ವ ಘೌಟಾದಲ್ಲಿನ ನಾಶಗೀಡಾದ ಶಾಲಾ ಕಟ್ಟಡಗಳು, ಮಕ್ಕಳ ದಯನೀಯ ಪರಿಸ್ಥಿತಿಯನ್ನು ವಿವರಿಸಿ ಯುದ್ಧ ಬೇಗನೇ ನಿಂತು ತಾನು ಮತ್ತೆ ಶಾಲೆಗೆ ಹೋಗುವಂತಾಗಬೇಕೆಂದು ಆತ ಆಶಿಸುತ್ತಾನೆ.

ಸಿರಿಯಾದ ದೈನಂದಿನ ಪರಿಸ್ಥಿತಿಯ ಬಗ್ಗೆ ಹಲವು ಟ್ವೀಟ್ ಗಳನ್ನು ಮಾಡಿರುವ ಮುಹಮ್ಮದ್ ನಜೆಮ್ ಒಂದು ಟ್ವೀಟ್ ನಲ್ಲಿ "ನಮ್ಮ ರಕ್ತಸಿಕ್ತ ಚಿತ್ರಗಳಿಂದ ನೀವು ಬೇಸರಗೊಂಡಿದ್ದೀರಿ ಎನ್ನುವುದು ನಮಗೆ ತಿಳಿದಿದೆ. ತುಂಬಾ ತಡವಾಗುವ ಮುನ್ನ ನಮ್ಮನ್ನು ರಕ್ಷಿಸಿ" ಎಂದು ಹೇಳಿದ್ದಾನೆ.

السلام عليكم ورحمة الله وبركاته
I am Muhammed Najem
I am fifteen years old
I live in the eastern Gouta
I will convey to you all the events which is being commited by the assad rigime in the Eastern Gouta through my own social media Facebook and Twitter. pic.twitter.com/BaVopMLJvV

— muhammad najem (@muhammadnajem20) December 7, 2017

We know that you got bored from our blood pictures
But We will continue appealing to you
Bashar Al-assad, potin and khaminei killed our childhood
Save us before it is too late
What is the world, which can send machines to the martian and can't do anything to stop killing people pic.twitter.com/QtVVWidkzx

— muhammad najem (@muhammadnajem20) January 15, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X