Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‌ನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ...

ಆಳ್ವಾಸ್‌ನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ2 March 2018 5:48 PM IST
share
ಆಳ್ವಾಸ್‌ನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಸಮ್ಮೇಳನ

ಮೂಡುಬಿದಿರೆ, ಮಾ. 2: ಆಳ್ವಾಸ್ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗ ಮಂಗಳೂರಿನ ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿತ್ತು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಪ್ರಾಯೋಜಕತ್ವದಲ್ಲಿ "ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಇತ್ತೀಚಿನ ಬೆಳವಣಿಗೆ ಹಾಗೂ ಜೈವಿಕ ವಿಜ್ಞಾನದಲ್ಲಿ ಅದರ ಪ್ರಸ್ತುತತೆ" ಎಂಬ ಪರಿಕಲ್ಪನೆಯಡಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಹಳೇ ವಿದ್ಯಾರ್ಥಿ, ಸದ್ಯ ಬೆಂಗಳೂರಿನ ಇಸ್ರೋದಲ್ಲಿ ವಿಜ್ಞಾನಿಯಾಗಿರುವ ಡಾ. ನಂದಿನಿ ಮಾತನಾಡಿ "ನನ್ನ ಎಲ್ಲಾ ಕನಸುಗಳಿಗೆ ಮೂರ್ತರೂಪ ನೀಡುವಲ್ಲಿ ಆಳ್ವಾಸ್ ಕಾಲೇಜಿನ ಪಾತ್ರ ಅಧಿಕವಾಗಿದೆ. ಕಾಲೇಜಿನಿಂದ ನಾನು ಸಾಕಷ್ಟು ಪಡೆದಿದ್ದೇನೆ" ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ "ಯಾವುದೇ ಒಂದು ಕಾರ್ಯವನ್ನು ಆರಂಬಿಸುವುದು ಸುಲಭ ಆದರೆ ಅದನ್ನು ದೀರ್ಘಕಾಲದವರೆಗೆ ಸರಿದೂಗಿಸಿಕೊಂಡು ಹೋಗುವುದು ಕಷ್ಟ. ಅದೇ ರೀತಿ ಹಲವರ ಬೇಡಿಕೆಯಿಂದ ಪದವಿಯಲ್ಲಿ ಆರಂಭವಾದ ಈ ವಿಭಾಗ ಇಂದು ಸ್ನಾತಕೋತ್ತರ ಹಾಗೂ ಪಿ.ಎಚ್‌ಡಿ ಕೋರ್ಸ್‌ಗಳನ್ನು ನೀಡುತ್ತಿದೆ. ಈ ಮೂಲಕ ವಿಭಾಗ ಸಮರ್ಥವಾಗಿ ಮುನ್ನಡೆ ಯುತ್ತಿದೆ" ಎಂದು ಸಂತಸ ವ್ಯಕ್ತಪಡಿಸಿದರು.

"ವಿಜ್ಞಾನ ಮತ್ತು ತಂತ್ರಜ್ಞಾನದ ಇಂದಿನ ಬೆಳವಣಿಗೆಗಳಲ್ಲಿ ಪರಿಣಾಮಕಾರಿ ಸಂಶೋಧನೆಗಳು ನಡೆಯಬೇಕಾಗಿದೆ. ಇಂದು ವಿಜ್ಞಾನಕ್ಷೇತ್ರದಲ್ಲಿ ಭಾರತ ಮೈಲಿಗಲ್ಲುಗಳನ್ನು ಸಾಧಿಸಿದ್ದರೂ, ಕೆಲವು ಮೂಲಭೂತ ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಶುದ್ಧ ನೀರಿನ ಲಭ್ಯತೆ, ಮಾಲಿನ್ಯರಹಿತ ಶುದ್ಧ ಗಾಳಿ, ವಿಷರಹಿತ ಆಹಾರ, ಪರಿಣಾಮಕಾರಿ ಔಷಧಿ, ಪ್ಲಾಸ್ಟಿಕ್ ರಹಿತ ಸ್ವಚ್ಛ ಪರಿಸರ ಎಲ್ಲರಿಗೂ ದೊರಕುವಂತಾಗಬೇಕು. ಈ ಅವಶ್ಯಕ ವಿಚಾರಗಳ ಬಗೆಗೆ ವಿಜ್ಞಾನಿಗಳು ಹೆಚ್ಚೆಚ್ಚು ಸಂಶೋಧನೆ ನಡೆಸಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಆಯೋಜನೆಯಲ್ಲಿ ಸಮಭಾಗಿಗಳಾದ ಹಳೇ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು "ಎಲ್ಲಾ ಹಳೇ ವಿದ್ಯಾರ್ಥಿಗಳನ್ನು ಒಂದೆಡೆ ನೋಡಿ ಸಂತೋಷವಾಗುತ್ತಿದೆ. ಅವರೆಲ್ಲಾ ಸೇರಿ ತಾವು ಓದಿದ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮ ಇಂದಿನ ಮಕ್ಕಳಿಗೆ ಪ್ರೇರಣೆಯಾಗಬೇಕು. ವಿದ್ಯಾರ್ಥಿಗಳು ವೈಯಕ್ತಿಕವಾಗಿ ಆಸಕ್ತಿ ವಹಿಸಿ ಮುಂದೆ ಬರಬೇಕು" ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿಗಳು ನಡೆಸಿದ ಸಂಶೋಧನೆಯ ಅಮೂರ್ತ ವರದಿಯನ್ನು ಬಿಡುಗಡೆಗೊಳಿಸಲಾಯಿತು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿ "ಆಪ್ಲಿಕೇಶನ್ ಆಫ್ ಸ್ಪೇಸ್ ಟೆಕ್ನಾಲಜಿ ಟೂಲ್ಸ್ ಇನ್ ಬಯೋಲಾಜಿಕಲ್ ರೀಸರ್ಚ್: ಫ್ರಮ್ ಸ್ಪೇಸ್‌ಟು ಸ್ಪೀಸೀಸ್" ಎಂಬ ವಿಷಯವನ್ನು ಪ್ರಸ್ತುತಪಡಿಸಿ ಉಪಗ್ರಹಗಳ ಬಳಕೆ, ವಿನ್ಯಾಸ, ಅವಶ್ಯಕತೆ, ಜೈವಿಕ ಜಗತ್ತಿನಲ್ಲಿ ರಿಮೋಟ್ ಸೆನ್ಸಿಂಗ್‌ನ ಉಪಯೋಗಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್, ಪ್ರಾಧ್ಯಾಪಕ ಡಾ. ರಾಘವೇಂದ್ರರಾವ್ ಮತ್ತಿತ್ತರ ಗಣ್ಯರು ಉಪಸ್ಥಿತರಿ ದ್ದರು. ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಬಿಂದುಪ್ರಿಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X