Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 12,000 ಕೋಟಿ ರೂ. ವಂಚಕ ನೀರವ್...

12,000 ಕೋಟಿ ರೂ. ವಂಚಕ ನೀರವ್ ಅಮೆರಿಕದಲ್ಲಿದ್ದಾನೆಯೇ ಎಂಬ ಪ್ರಶ್ನೆಗೆ ಅಮೆರಿಕ ಉತ್ತರಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ2 March 2018 10:41 PM IST
share
12,000 ಕೋಟಿ ರೂ. ವಂಚಕ ನೀರವ್ ಅಮೆರಿಕದಲ್ಲಿದ್ದಾನೆಯೇ ಎಂಬ ಪ್ರಶ್ನೆಗೆ ಅಮೆರಿಕ ಉತ್ತರಿಸಿದ್ದು ಹೀಗೆ…

ವಾಶಿಂಗ್ಟನ್, ಮಾ. 2: ಭಾರತದಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್ (ಪಿಎನ್‌ಬಿ)ಗೆ 12,000 ಕೋಟಿ ರೂ. ಗೂ ಅಧಿಕ ಮೊತ್ತ ವಂಚಿಸಿ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿ ಅಮೆರಿಕದಲ್ಲಿದ್ದಾನೆ ಎಂಬ ಮಾಧ್ಯಮ ವರದಿಗಳನ್ನು ಅಮೆರಿಕ ಸರಕಾರ ಗಮನಿಸಿದೆ, ಆದರೆ ಆ ವರದಿಗಳನ್ನು ದೃಢಪಡಿಸಲು ಅಸಾಧ್ಯವಾಗಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರೊಬ್ಬರು ಶುಕ್ರವಾರ ಹೇಳಿದ್ದಾರೆ.

ಮೋದಿಯನ್ನು ಹುಡುಕುವಲ್ಲಿ ಭಾರತ ಸರಕಾರಕ್ಕೆ ನಿಮ್ಮ ಇಲಾಖೆಯು ನೆರವು ನೀಡುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ವಕ್ತಾರರು, ‘‘ಮೋದಿ ಕುರಿತ ತನಿಖೆಯಲ್ಲಿ ಭಾರತೀಯ ಅಧಿಕಾರಿಗಳಿಗೆ ಕಾನೂನು ನೆರವು ನೀಡುವ ಸಂಬಂಧದ ಪ್ರಶ್ನೆಗಳನ್ನು ನೀವು ಕಾನೂನು ಇಲಾಖೆಗೆ ಕೇಳಬಹುದಾಗಿದೆ’’ ಎಂದು ಪಿಟಿಐಗೆ ತಿಳಿಸಿದರು.

ಆದರೆ, ಮೋದಿ ಬಗ್ಗೆ ಹೇಳಿಕೆ ನೀಡಲು ಕಾನೂನು ಇಲಾಖೆ ನಿರಾಕರಿಸಿತು.

ಮೋದಿ ಮತ್ತು ಅವನ ಚಿಕ್ಕಪ್ಪ ಮೆಹುಲ್ ಚೋಕ್ಸಿ ಹಾಗೂ ಇತರರು ಪಂಜಾಬ್ ನ್ಯಾಶನಲ್ ಬ್ಯಾಂಕ್‌ನ ಮುಂಬೈಯ ಬ್ರಾಡಿ ಹೌಸ್ ಶಾಖೆಯಿಂದ ಮೋಸದಿಂದ ‘ಲೆಟರ್ಸ್ ಆಫ್ ಅಂಡರ್‌ಟೇಕಿಂಗ್’ ಪಡೆದು ಇತರ ಬ್ಯಾಂಕ್‌ಗಳಿಂದ ವಿದೇಶಿ ಸಾಲಗಳನ್ನು ಪಡೆದುಕೊಂಡಿದ್ದರು. ಈ ಕೃತ್ಯದಲ್ಲಿ ಹಲವು ಬ್ಯಾಂಕ್ ಅಧಿಕಾರಿಗಳು ಶಾಕೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮೋದಿ ಮತ್ತು ಚೋಕ್ಸಿ ತಮ್ಮ ಕುಟುಂಬದೊಂದಿಗೆ ಜನವರಿಯಲ್ಲಿ ದೇಶ ಬಿಟ್ಟು ಪಲಾಯನಗೈದ ಹಲವು ದಿನಗಳ ಬಳಿಕ ಈ ಬಗ್ಗೆ ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

ಅಮೆರಿಕದ ಬ್ಯಾಂಕ್‌ಗಳಿಗೂ ಪಂಗನಾಮ

ಈ ನಡುವೆ, ಮೋದಿ ಒಡೆತನದ ‘ಫಯರ್‌ಸ್ಟಾರ್ ಡೈಮಂಡ್ ಇಂಕ್’ಗೆ ನೀಡಲಾಗಿರುವ ಸಾಲವನ್ನು ವಾಪಸ್ ಪಡೆಯದಂತೆ ಲೇವಾದೇವಿಗಾರರನ್ನು ನಿರ್ಬಂಧಿಸುವ ಮಧ್ಯಾಂತರ ತೀರ್ಪೊಂದನ್ನು ಅಮೆರಿಕದ ನ್ಯಾಯಾಲಯವೊಂದು ನೀಡಿದೆ.

ತಾನು ದಿವಾಳಿಯಾಗಿದ್ದೇನೆ ಎಂಬುದಾಗಿ ಘೋಷಿಸಬೇಕೆಂದು ಕೋರಿ ‘ಫಯರ್‌ಸ್ಟಾರ್ ಡೈಮಂಡ್ ಇಂಕ್’ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಈ ತೀರ್ಪು ಬಂದಿದೆ.

‘‘ಈ ತೀರ್ಪಿನ ಪ್ರಕಾರ, ಸಾಲ ನೀಡಿರುವ ಸಂಸ್ಥೆಗಳು ಸಾಲ ಪಡೆದಾತನಿಂದ ಸಾಲ ವಸೂಲು ಮಾಡಲು ಅಥವಾ ಸಾಲ ಪಡೆದಾತನ ಆಸ್ತಿಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ’’ ಎಂದು ದಿವಾಳಿ ನ್ಯಾಯಾಲಯ ತನ್ನ ಎರಡು ಪುಟಗಳ ಆದೇಶದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X