Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಗರಹೊಳೆ: ಆನೆ ದಾಳಿಗೆ ಹುಲಿ ಯೋಜನೆ...

ನಾಗರಹೊಳೆ: ಆನೆ ದಾಳಿಗೆ ಹುಲಿ ಯೋಜನೆ ನಿರ್ದೇಶಕ ಬಲಿ

ವಾರ್ತಾಭಾರತಿವಾರ್ತಾಭಾರತಿ3 March 2018 4:38 PM IST
share
ನಾಗರಹೊಳೆ: ಆನೆ ದಾಳಿಗೆ ಹುಲಿ ಯೋಜನೆ ನಿರ್ದೇಶಕ  ಬಲಿ

ಮೈಸೂರು,ಮಾ.3: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳ್ಳೆ ಅರಣ್ಯ ಪ್ರದೇಶದ ಬಳಿಯ ಡಿ.ಬಿ.ಕುಪ್ಪೆ ಬಳಿ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಮಣಿಕಂಠನ್ (45) ಅವರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ನಾಗರಹೊಳೆ ಅರಣ್ಯದ ಡಿ.ಬಿ.ಕೊಪ್ಪ ವಲಯ ವ್ಯಾಪ್ತಿಯಲ್ಲಿ ಮೊನ್ನೆಯಷ್ಟೇ 150 ಎಕರೆ ಪ್ರದೇಶದಲ್ಲಿದ್ದ ಗಿಡ-ಮರ ಪ್ರಾಣಿ-ಪಕ್ಷಿಗಳನ್ನು ಆಹುತಿ ತೆಗೆದುಕೊಂಡ ಕಾಡ್ಗಿಚ್ಚು ಮತ್ತು ಇದರಿಂದ ಸಂಭವಿಸಿದ್ದ ಹಾನಿಯನ್ನು ಪರಿಶೀಲಿಸಲು ಶನಿವಾರ ಬೆಳಿಗ್ಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.

ಮಣಿಕಂಠನ್ ಅವರು ದಕ್ಷ ಅರಣ್ಯಾಧಿಕಾರಿ ಎಂದು ಗುರುತಿಸಿಕೊಂಡಿದ್ದು, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಅರಣ್ಯದಲ್ಲಿ ಬೆಂಕಿ ಅವಘಡಗಳು ಸಂಭವಿಸದಂತೆ ಬೆಂಕಿ ತಡೆಗೋಡೆ ನಿರ್ಮಿಸುವ ಸಂಬಂಧ ತಮ್ಮ ಸಹ ಸಿಬ್ಬಂದಿಗಳೊಂದಿಗೆ ಚರ್ಚಿಸುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದ ಒಂಟಿ ಸಲಗ ಮಣಿಕಂಠನ್ ಅವರನ್ನು ಮಾರಣಾಂತಿಕವಾಗಿ ಗಾಯಗೊಳಿಸಿತು. ಬಿಳಿ ಅಂಗಿ ಧರಿಸಿದ್ದ ಮಣಿಕಂಠನ್ ಅವರ ಮೇಲೆ ಪೊದೆಯಿಂದ ಏಕಾಏಕಿ ಬಂದ ಆನೆ ಎರಗಿದೆ. ಇವರ ಜೊತೆಗಿದ್ದ ಆರ್.ಎಫ್.ಒ ಸುಬ್ರಮಣ್ಯ ಅವರು ಓಡಿ ತಪ್ಪಿಸಿಕೊಂಡಿದ್ದಾರೆ.

ಆನೆ ದಾಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡ ಮಣಿಕಂಠನ್ ಅವರನ್ನು ಎಚ್ ಡಿ ಕೋಟೆಯ ಸರಕಾರಿ ಆಸ್ಪತ್ರೆಗೆ ಅವರನ್ನು ಕರೆತರುವಷ್ಟರಲ್ಲಿ ಅವರ ಪ್ರಾಣ ಹೋಗಿತ್ತು ಎನ್ನಲಾಗಿದೆ.

ತಾಲೂಕು ಆಸ್ಪತ್ರೆಯಲ್ಲಿ ಶೀಥಲೀಕರಣ ಘಟಕವಿಲ್ಲ. ಇದರ ಜೊತೆಗೆ ಮಣಿಕಂಠನ್ ಅವರು ಮೂಲತಃ ತಮಿಳುನಾಡಿನ ಮಧುರೈ ಜಿಲ್ಲೆಯವರಾಗಿದ್ದು, ಅವರ ದೇಹವನ್ನು ದೂರದೂರಿಗೆ ಸಾಗಿಸಬೇಕಿರುವ ಕಾರಣ ಮಣಿಕಂಠನ್ ಅವರ ದೇಹವನ್ನು ಮೈಸೂರಿಗೆ ತರಲಾಯಿತು.

ಇಲ್ಲಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತ ಮಣಿಕಂಠನ್ ಅವರ ಮರೋಣೋತ್ತರ ಪರೀಕ್ಷೆ ನಡೆಸಲಾಯಿತು. 

ಎರಡು ವರ್ಷಗಳ ಹಿಂದೆ ನಾಗರಹೊಳೆ ವಲಯದ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದ ಮಣಿಕಂಠನ್ ಅವರು, ತಮ್ಮ ಕ್ರಿಯಾಶೀಲ ವ್ಯಕ್ತಿತ್ವದಿಂದ ಗಮನಸೆಳೆದಿದ್ದರು. ಅರಣ್ಯದಲ್ಲಿ ಸೌರಶಕ್ತಿ ಚಾಲಿತ ಬೋರ್ ವೆಲ್ ಕೊರೆದು ವನ್ಯ ಜೀವಿಗಳ ಕುಡಿಯುವ ನೀರಿನ ಕೊರತೆ ನೀಗಿಸುವ ಉಪಾಯ ಮಾಡಿದ್ದರು. 

ಸಕಲ ಸರಕಾರಿ ಗೌರವ ವಂದನೆ: ಅಶೋಕಪುರಂ ನಲ್ಲಿರುವ ಅರಣ್ಯ ಭವನಕ್ಕೆ ಪಾರ್ಥೀವ ಶರೀರವನ್ನು ತಂದು, ನಂತರ ಅರಣ್ಯ ಇಲಾಖೆಯ ನಿಯಮದಂತೆ ಮೃತ ಅಧಿಕಾರಿಗೆ ಇಲಾಖೆಯ ಗೌರವ ಸಲ್ಲಿಸಲಾಯಿತು. ಜೊತೆಗೆ ಸರಕಾರದ ವತಿಯಿಂದ ಸಕಲ ಸರಕಾರಿ ಗೌರವವನ್ನು ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಡಿ.ರಂದೀಪ್ ಸರಕಾರದ ಪರವಾಗಿ ಗೌರವ ವಂದನೆ ಸಲ್ಲಿಸಿದರು. ಸಂಸದ ಧ್ರುವನಾರಾಯಣ ಅವರು ಎಚ್.ಡಿ.ಕೋಟೆ ಆಸ್ಪತ್ರೆಗೆ ತೆರಳಿ ಅಂತಿನ ನಮನ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X