ಕುಂದಾಪುರ: ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶಕ್ಕೆ
ಕುಂದಾಪುರ, ಮಾ.4: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಇಂದು ಬೆಳಗ್ಗೆ 6.45ರ ಸುಮಾರಿಗೆ ಅಧಿಕಾರಿಗಳ ತಂಡ ಹೆಮ್ಮಾಡಿ ಜಂಕ್ಷನ್ ಸಮೀಪ ವಶಕ್ಕೆ ತೆಗೆದುಕೊಂಡಿದೆ.
ಕಂದಾಯ ನಿರೀಕ್ಷಕ ವಸಂತ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ಪಡುಕೋಣೆಯಿಂದ ಅಕ್ರಮವಾಗಿ ಮರಳು ಸಾಗಿ ಸುತ್ತಿದ್ದ ಟಿಪ್ಪರ್ ಹಾಗೂ ಹಾಗೂ ಅದರಲ್ಲಿದ್ದ 3000ರೂ. ಮೌಲ್ಯದ ಮರಳನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





