Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಸಣ್ಣಪುಟ್ಟ ಮಾರ್ಪಾಡುಗಳೊಂದಿಗೆ...

ಮಡಿಕೇರಿ: ಸಣ್ಣಪುಟ್ಟ ಮಾರ್ಪಾಡುಗಳೊಂದಿಗೆ ನಗರಸಭೆಯ ಆಯ-ವ್ಯಯಕ್ಕೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ5 March 2018 11:20 PM IST
share
ಮಡಿಕೇರಿ: ಸಣ್ಣಪುಟ್ಟ ಮಾರ್ಪಾಡುಗಳೊಂದಿಗೆ ನಗರಸಭೆಯ ಆಯ-ವ್ಯಯಕ್ಕೆ ಅನುಮೋದನೆ

ಮಡಿಕೇರಿ, ಮಾ.5: ಮಡಿಕೇರಿ ನಗರಸಭೆಯ 2018-19ನೇ ಸಾಲಿನ ಆಯ-ವ್ಯಯಕ್ಕೆ ಕೆಲವು ಸಣ್ಣಪುಟ್ಟ ಮಾರ್ಪಾಡುಗಳೊಂದಿಗೆ ಸೋಮವಾರ ಅನುಮೋದನೆ ನೀಡಲಾಯಿತು.

ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಅಪರಾಹ್ನ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಫೆ.26ರಂದು ಮಂಡಿಸಿದ್ದ ಆಯ-ವ್ಯಯವನ್ನು ಕೆಲವು ಮಾರ್ಪಾಡುಗಳೊಂದಿಗೆ ಅಂಗೀಕರಿಸಲಾಯಿತು.

ಮಡಿಕೇರಿ ನಗರಸಭೆಗೆ 2018-19ನೇ ಸಾಲಿಗೆ 65.87 ಕೋಟಿ ನಿರೀಕ್ಷಿತ ಆದಾಯ ಹಾಗೂ 62.37 ಕೋಟಿ ನಿರೀಕ್ಷಿತ ವೆಚ್ಚ ಸೇರಿದಂತೆ 3.50 ಕೋಟಿ ಮಿಗತೆ ಬಜೆಟ್‍ನ್ನು ಮಂಡಿಸಲಾಗಿತ್ತು. ಬಜೆಟ್ ಸಭೆಗೆ ಅಲ್ಪಾವಧಿಯ ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ನಿಯಮಾನುಸಾರ ಸಾರ್ವಜನಿಕರ ಸಭೆ ಕರೆದು ಸಲಹೆ ಪಡೆಯದೆ ಆಯ-ವ್ಯಯ ಸಿದ್ಧಪಡಿಸಿರುವುದನ್ನು ವಿರೋಧಿಸಿ ಅಂದಿನ ಸಭೆಯನ್ನು ವಿಪಕ್ಷ ಬಿಜೆಪಿಯ ಸರ್ವಸದಸ್ಯರು ಹಾಗೂ ಆಡಳಿತಾರೂಢ ಕಾಂಗ್ರೆಸ್‍ನ ಇಬ್ಬರು ಸದಸ್ಯರು ಬಹಿಷ್ಕರಿಸಿದ್ದರು.

ಆದರೆ ಸರಕಾರದ ಆದೇಶದಂತೆ ಫೆ.28ರೊಳಗಾಗಿ ಆಯ-ವ್ಯಯ ಮಂಡಿಸಬೇಕೆಂಬ ಹಿನ್ನೆಲೆಯಲ್ಲಿ ಅಧ್ಯಕ್ಷರು ಅಂದು ಆಯ-ವ್ಯಯ ಮಂಡಿಸಿದ್ದರಲ್ಲದೆ, ಮಾರ್ಪಾಡುಗಳಿದ್ದಲ್ಲಿ ಮುಂದಿನ ಸಭೆಯಲ್ಲಿ ಚರ್ಚಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು.

ಅದರಂತೆ ಮೂರು ದಿನಗಳ ಅವಧಿಯಲ್ಲಿ ಸಾರ್ವಜನಿಕರ ಸಲಹೆ ಪಡೆಯಲು ಸಭೆ ಕರೆಯಲಾಗಿತ್ತಾದರೂ, ಸಭೆಗೆ ಇಬ್ಬರು ಮಹಿಳೆಯರನ್ನು ಹೊರತುಪಡಿಸಿದರೆ ನಾಗರಿಕರಾರೂ ಭಾಗವಹಿಸದ ಹಿನ್ನೆಲೆಯಲ್ಲಿ ನಗರಸಭೆಯ ಆಡಳಿತ ಮುಜುಗರಕ್ಕೊಳಗಾಗಿತ್ತು. ಸೋಮವಾರ ಕರೆದಿದ್ದ ಆಯ-ವ್ಯಯ ಅನುಮೋದನಾ ಸಭೆಗೂ ವಿಪಕ್ಷ ಸದಸ್ಯರು ಭಾಗವಹಿಸುವ ಬಗ್ಗೆ ನಗರಸಭೆಯ ಆಡಳಿತ ಮಂಡಳಿ ಅನುಮಾನ ವ್ಯಕ್ತಪಡಿಸಿತ್ತಾದರೂ, ಸಭೆಗೆ ಎಲ್ಲಾ ಸದಸ್ಯರು ಹಾಜರಾಗುವ ಮೂಲಕ ಆರೋಗ್ಯಪೂರ್ಣ ಚರ್ಚೆ ನಡೆಯಿತು.

ನಗರಸಭೆಯ ಅಧೀನದಲ್ಲಿರುವ ಶಾಲಾ ಶಿಕ್ಷಕರಿಗೆ ಗೌರವಧನ ನೀಡಲು ಆಯ-ವ್ಯಯದಲ್ಲಿ ಅನುದಾನ ಮೀಸಲಿಡಬೇಕು. ರಾಜಾಸೀಟ್ ಬಳಿ ವಾಹನ ನಿಲುಗಡೆ ಶುಲ್ಕ ವಸೂಲು ಮಾಡುವುದನ್ನು ಹರಾಜು ಮಾಡುವ ಬದಲು ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮವಹಿಸುವಂತೆ ಸೂಚಿಸಬೇಕು. ಅಕ್ರಮವಾಗಿ ನಿರ್ಮಾಣವಾಗುವ ಕಟ್ಟಡಗಳಿಗೆ ವಿಧಿಸುವ ದಂಡ ಶುಲ್ಕವನ್ನು ಪ್ರತ್ಯೇಕ ಖಾತೆ ತೆರೆದು ಜಮಾ ಮಾಡಬೇಕು ಎಂಬಿತ್ಯಾದಿ ಸಲಹೆಗಳು ಸದಸ್ಯರಿಂದ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್ ಹಾಗೂ ಪೌರಾಯುಕ್ತೆ ಬಿ.ಶುಭಾ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X