Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಗದಲ್ಲಿ ಆಚಾರ

ಅಂಗದಲ್ಲಿ ಆಚಾರ

ವಾರ್ತಾಭಾರತಿವಾರ್ತಾಭಾರತಿ6 March 2018 12:03 AM IST
share
ಅಂಗದಲ್ಲಿ ಆಚಾರ

ಅಂಗದಲ್ಲಿ ಆಚಾರವ ತೋರಿದ;
ಆ ಆಚಾರವೇ ಲಿಂಗವೆಂದರುಹಿದ.
ಪ್ರಾಣದಲ್ಲಿ ಅರಿವ ನೆಲೆಗೊಳಿಸಿದ;
ಆ ಅರಿವೆ ಜಂಗಮವೆಂದು ತೋರಿದ.
ಚೆನ್ನಮಲ್ಲಿಕಾರ್ಜುನನ ಹೆತ್ತ ತಂದೆ ಸಂಗನಬಸವಣ್ಣನು
ಎನಗೀ ಕ್ರಮವನರುಹಿದನಯ್ಯ ಪ್ರಭುವೆ.
                                       -ಅಕ್ಕ ಮಹಾದೇವಿ

ಇಷ್ಟಲಿಂಗ ಸಂಬಂಧವಾದ ಆಚಾರಗಳಿಂದ ಕಾಯವನ್ನೇ ಕೈಲಾಸ ಮಾಡಿಕೊಳ್ಳಬಹುದು. ಚೆನ್ನಬಸವಣ್ಣನವರು ಇಷ್ಟಲಿಂಗದೀಕ್ಷೆಗಾಗಿ ಸಿದ್ದರಾಮರಿಗೆ ಐವತ್ತು ಬಗೆಯ ಆಚಾರಗಳನ್ನು ಬೋಧಿಸಿದ್ದಾರೆ: ಪರಸ್ತ್ರೀಯನ್ನು ಬಯಸದೆ ಇರುವುದು. ಪರಧನವನ್ನು ಅಪಹರಿಸದಿರುವುದು. ಹುಸಿಯ ನುಡಿಯದಿರುವುದು. ವಿಶ್ವಾಸಘಾತ ಮಾಡದಿರುವುದು. ಪ್ರಾಣಿಹಿಂಸೆಯ ಮಾಡದಿರುವುದು. ಶರಣಸಂಕುಲವನ್ನು ಸಂತೋಷದಲ್ಲಿಡುವುದು. ಕೆಟ್ಟವರ ಸಹವಾಸ ಮಾಡದಿರುವುದು. ಸಕಲ ಜೀವಿಗಳ ಹಿತ ಬಯಸುವುದು. ಜಂಗಮದಲ್ಲಿ ಕುಲವನರಿಸದಿರುವುದು ಮುಂತಾದವು.
ಬಾಹ್ಯಕ್ರಿಯೆಗಳನ್ನು ಶುದ್ಧಗೊಳಿಸುವ ಪಂಚಾಚಾರ: ಅನ್ಯದೈವಕ್ಕೆರಗದೆ ಇಷ್ಟಲಿಂಗ ಪೂಜೆ ಮಾಡುವುದು ಲಿಂಗಾಚಾರ, ಸತ್ಯಶುದ್ಧ ಕಾಯಕವನ್ನು ಮಾಡುತ್ತ ದಯಾಭಾವದೊಂದಿಗೆ ಬದುಕುವುದು ಸದಾಚಾರ, ಜಾತಿಭೇದ ಮಾಡದೆ ಶಿವಲಾಂಛನಧಾರಿಗಳನ್ನು ಪರಶಿವನೆಂದು ಭಾವಿಸುವುದು ಶಿವಾಚಾರ, ಶಿವನಿಂದೆಯನ್ನು ಕೇಳದಿರುವುದು ಗಣಾಚಾರ ಹಾಗೂ ‘ಶರಣರೆಲ್ಲ ಹಿರಿಯರು ತಾನು ಕಿರಿಯ’ ಎಂಬ ಭಾವ ತಾಳಿ ಸೇವೆ ಮಾಡುವುದು ಭೃತ್ಯಾಚಾರ.
ಅಂತರಂಗದ ಕ್ರಿಯೆಗಳನ್ನು ಶುದ್ಧಗೊಳಿಸುವ ಸಪ್ತಾಚಾರ: ಗುರು ಲಿಂಗ ಜಂಗಮಾರಾಧನೆ ಮಾಡುವುದು ಕ್ರಿಯಾಚಾರ. ಶರಣರ ವಚನಾನುಭವ ಅರಿತು ಆಚರಿಸುವುದು ಜ್ಞಾನಾಚಾರ. ಅರಿಷಡ್ವರ್ಗಗಳಿಂದ ದೂರಾಗಿ ಬದುಕುವುದು ಭಾವಾಚಾರ. ಕೊಟ್ಟ ಭಾಷೆಯನ್ನು ನಡೆಸಿಕೊಡುವುದು ಸತ್ಯಾಚಾರ. ಪಾಲಿಗೆ ಬಂದ ಪ್ರಸಾದದಲ್ಲಿ ಸುಖಿಸುವುದು ನಿತ್ಯಾಚಾರ. ಭಕ್ತಿಯಿಂದ ಕೂಡಿರುವುದು ಧರ್ಮಾಚಾರ. ಷಟ್‌ಸ್ಥಲ ಮಾರ್ಗದಲ್ಲಿ ನಡೆದು ನಿರವಯವನ್ನು ಸಾಧಿಸುವುದು ಸರ್ವಾಚಾರ.
ತ್ರಿವಿಧ ಆಚಾರ: ಎಲ್ಲ ಜನ ಅಹುದೆಂಬುದೇ ಸದಾಚಾರ, ಹಿಡಿದ ವ್ರತ ನಿಯಮವ ಬಿಡದಿಹುದೆ ನಿಯತಾಚಾರ, ಶಿವನಿಂದೆಯ ಕೇಳದಿಹುದೇ ಗಣಾಚಾರ. ಹೀಗೆ 50 ಆಚಾರ, ಪಂಚಾಚಾರ, ಸಪ್ತಾಚಾರ ಮತ್ತು ತ್ರಿವಿಧ ಆಚಾರಗಳನ್ನು ತನ್ನಂಗದಲ್ಲಿ ಅಳವಡಿಸಿಕೊಂಡವರು ಲಿಂಗದೇಹಿಗಳು ಆಗುತ್ತಾರೆ.
‘ಅರಿವು ಹಿಡಿಯಂದಡೆ ಕುರುಹು ಹಿಡಿದರು ನೋಡಾ’ ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ. ಇಷ್ಟಲಿಂಗವು ಅರಿವಿನ ಸಂಕೇತವೇ ಆಗಿದೆ. ಈ ಅರಿವು ಜಂಗಮಲಿಂಗದ ದರ್ಶನ ಮಾಡಿಸುತ್ತದೆ. ಒಬ್ಬನೇ ದೇವರು, ಒಂದೇ ಭೂಮಿ ಮತ್ತು ಒಂದೇ ಮಾನವಜನಾಂಗ ಎಂಬ ಅರಿವೇ ಜಂಗಮದ ಅರಿವು. ಸಕಲಜೀವಾತ್ಮರನ್ನು ಒಳಗೊಂಡಿರುವಂಥದ್ದೇ ಜಂಗಮ. ಹೀಗೆ ಇಷ್ಟಲಿಂಗ ಮತ್ತು ಜಂಗಮಲಿಂಗವೆಂಬ ಉಭಯಕುಳದ ಅರಿವನ್ನು ಬಸವಣ್ಣನವರಿಂದ ಪಡೆದು ಪ್ರಾಣದಲ್ಲಿ ನೆಲೆಗೊಳಿಸಿದೆ ಎಂದು ಅಕ್ಕ ಹೇಳಿದ್ದಾಳೆ. ಇಂಥ ಜಂಗಮಜಗತ್ತನ್ನು ಒಳಗೊಂಡ ಇಷ್ಟಲಿಂಗ ಜನಕ ಬಸವಣ್ಣ ಎಂದು ಸಾರಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X