ಸೇತುವೆಯಿಂದ ಕೆಳಗುರುಳಿದ ಬಸ್: ಕನಿಷ್ಠ 26 ಮಂದಿ ಸಾವು
ರಾಜ್ಕೋಟ್, ಮಾ.6: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ವೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳವಾರ ಬೆಳಗ್ಗೆ 7:30ರ ಸುಮಾರಿಗೆ ಭಾವ್ನಗರ್ ಜಿಲ್ಲೆಯ ರಂಘೋಲಾ ಹಳ್ಳಿಯಲ್ಲಿ ರಾಜ್ಕೋಟ್-ಭಾವ್ನಗರ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
50ಕ್ಕೂ ಅಧಿಕ ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾವ್ನಗರದ ಪಲಿಟಾನಾ ತಾಲೂಕಿನ ಅನಿಡಾ ಹಳ್ಳಿಯಿಂದ ಬೊಟಾಡ್ ಜಿಲ್ಲೆಯ ಗಧಡ ತಾಲೂಕಿನ ಟಟಾಮ್ ಹಳ್ಳಿಯತ್ತ ತೆರಳುತ್ತಿತ್ತು. ಬೆಳಗ್ಗೆ 7:30ರ ಸುಮಾರಿಗೆ ಬಸ್ ರಂಘೋಲಾ ಬಳಿ ಸೇತುವೆಯಿಂದ ಕೆಳಗೆ ಉರುಳಿ ಬಿದ್ದಿದೆ’’ ಎಂದು ಪೊಲೀಸರು ತಿಳಿಸಿದ್ದಾರೆ.
‘‘ಘಟನೆಯಲ್ಲಿ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ. 25 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಎಷ್ಟು ಜನರು ಗಾಯಗೊಂಡಿದ್ದಾರೆಂದು ನಿಖರವಾಗಿ ಗೊತ್ತಿಲ್ಲ. ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ 50ಕ್ಕೂ ಅಧಿಕ ಜನರು ಮದುವೆ ಪಾರ್ಟಿಗೆ ಬಸ್ನಲ್ಲಿ ತೆರಳುತ್ತಿದ್ದರು’’ ಎಂದು ಭಾವ್ನಗರ ಜಿಲ್ಲಾ ಎಸ್ಪಿ ಪಿ.ಎಲ್. ಮಾಲ್ ಆಂಗ್ಲ ಪತ್ರಿಕೆಗೆ ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಯ ಪ್ರಕಾರ,ನಿದ್ದೆಯ ಮಂಪರಿನಲ್ಲಿದ್ದ ಚಾಲಕ ಬಸ್ನ ಮೇಲೆ ನಿಯಂತ್ರಣ ಕಳೆದುಕೊಂಡ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ