Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎನ್‌ಬಿ ವಂಚನೆ ಪ್ರಕರಣ: ರಾಜ್ಯಸಭೆ...

ಪಿಎನ್‌ಬಿ ವಂಚನೆ ಪ್ರಕರಣ: ರಾಜ್ಯಸಭೆ ಕಲಾಪಕ್ಕೆ ದ್ವಿತೀಯ ದಿನವೂ ಅಡ್ಡಿ, ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ6 March 2018 9:51 PM IST
share
ಪಿಎನ್‌ಬಿ ವಂಚನೆ ಪ್ರಕರಣ: ರಾಜ್ಯಸಭೆ ಕಲಾಪಕ್ಕೆ ದ್ವಿತೀಯ ದಿನವೂ ಅಡ್ಡಿ, ಮುಂದೂಡಿಕೆ

ಹೊಸದಿಲ್ಲಿ, ಮಾ.6: ಪಿಎನ್‌ಬಿ ವಂಚನೆ ಪ್ರಕರಣ ಖಂಡಿಸಿ ಗದ್ದಲ, ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಸ್ಥಾಪನೆಗೆ ಆಗ್ರಹದಿಂದ ರಾಜ್ಯಸಭೆಯ ಕಲಾಪಗಳಿಗೆ ದ್ವಿತೀಯ ದಿನವೂ ಭಂಗ ಉಂಟಾಯಿತು ಹಾಗೂ ಹಲವು ಬಾರಿ ಕಲಾಪವನ್ನು ಮುಂದೂಡಲಾಯಿತು.

ಬೆಳಗ್ಗಿನ ಅವಧಿಯಲ್ಲಿ ಎರಡು ಬಾರಿ ಕಲಾಪ ಮುಂದೂಡಲ್ಪಟ್ಟ ಬಳಿಕ ಅಪರಾಹ್ನ 2:00 ಗಂಟೆಗೆ ಸದನ ಮರು ಸಮಾವೇಶಗೊಂಡಾಗ ಟಿಎಂಸಿ ಸದಸ್ಯರು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಸಂಸದರು ಸದನದ ಬಾವಿಗೆ ನುಗ್ಗಿ ಘೋಷಣೆ ಕೂಗಲು ಆರಂಭಿಸಿದರು. ಸದಸ್ಯರನ್ನು ಸ್ವಸ್ಥಾನಕ್ಕೆ ಮರಳುವಂತೆ ರಾಜ್ಯ ಸಭೆಯ ಉಪಸಭಾಧ್ಯಕ್ಷ ಪಿ.ಜೆ.ಕುರಿಯನ್ ಮಾಡಿದ ಪ್ರಯತ್ನ ವಿಫಲವಾದಾಗ ಕಲಾಪವನ್ನು 3:30ರವರೆಗೆ ಮುಂದೂಡಲಾಯಿತು. ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಟಿಡಿಪಿ, ಎಐಎಡಿಎಂಕೆ ಹಾಗೂ ಟಿಎಂಸಿ ಸದಸ್ಯರು ಸದನದ ಬಾವಿಗೆ ನುಗ್ಗಿ ಘೋಷಣೆ ಆರಂಭಿಸಿದರು. ಕೆಲವರು ಕೈಯಲ್ಲಿ ಭಿತ್ತಿಫಲಕ ಹಿಡಿದಿದ್ದರು. ಪ್ರತಿಯೊಬ್ಬ ಸದಸ್ಯನ ಅಹವಾಲನ್ನೂ ಪ್ರತ್ಯೇಕವಾಗಿ ಆಲಿಸುವುದಾಗಿ ಉಪಸಭಾಧ್ಯಕ್ಷ ಪಿ.ಜೆ.ಕುರಿಯನ್ ಹೇಳಿದರೂ ಸದಸ್ಯರು ತಮ್ಮ ಪ್ರತಿಭಟನೆ ಮುಂದುವರಿಸಿದರು. ಸದನವು ಯಾವುದೇ ಚರ್ಚೆಗೆ ಸಿದ್ಧವಿದೆ. ಆದರೂ ಈ ರೀತಿ ವರ್ತಿಸುವ ಮೂಲಕ ನೀವು ಗೂಂಡಾಗಳ ಮಟ್ಟಕ್ಕೆ ಇಳಿದಿದ್ದೀರಿ ಎಂದು ಉಪಸಭಾಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಭಿತ್ತಿಫಲಕ ಪ್ರದರ್ಶಿಸುವುದು ನಿಯಮಬಾಹಿರವಾಗಿದೆ. ಹೀಗೆ ಮಾಡಬೇಡಿ. ರಾಜ್ಯಸಭೆಯ ಸದಸ್ಯರಿಗೆ ಘನತೆಯಿದೆ. ಈ ರೀತಿಯ ವರ್ತನೆ ಸದಸ್ಯರಿಂದ ನಿರೀಕ್ಷಿಸಿರಲಿಲ್ಲ ಎಂದ ಕುರಿಯನ್, ಚರ್ಚೆ ಹಾಗೂ ಮಾತುಕತೆ ಸಂಸದೀಯ ಪ್ರಜಾಪ್ರಭುತ್ವದ ಲಕ್ಷಣವಾಗಿದೆ. ನಿಮ್ಮ ಅಹವಾಲುಗಳಿಗೆ ಪ್ರತಿಕ್ರಿಯೆ ನೀಡುವಂತೆ ಸರಕಾರಕ್ಕೆ ಸೂಚಿಸುತ್ತೇನೆ ಎಂದು ಕುರಿಯನ್ ತಿಳಿಸಿದರು. ಆದರೆ ಸದಸ್ಯರು ಪ್ರತಿಭಟನೆ ಮುಂದುವರಿಸಿದಾಗ ಕಲಾಪವನ್ನು 3:30ರವರೆಗೆ ಮುಂದೂಡಲಾಯಿತು. ನಾವು ಓಡಿಹೋಗುತ್ತಿಲ್ಲ. ಸರಕಾರ ಚರ್ಚೆಗೆ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರ ಖಾತೆಯ ಉಪಸಚಿವ ವಿಜಯ್ ಗೋಯೆಲ್ ಸದಸ್ಯರಿಗೆ ನೀಡಿದ ಭರವಸೆಯೂ ಫಲ ನೀಡಲಿಲ್ಲ. ಬೆಳಗ್ಗಿನ ಅವಧಿಯಲ್ಲಿ ಶೂನ್ಯಅವಧಿಯಲ್ಲಿ ಸದಸ್ಯರ ಗದ್ದಲದ ಕಾರಣ ರಾಜ್ಯ ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು 11:30ರವರೆಗೆ ಕಲಾಪ ಮುಂದೂಡಿದರು. ಸಂಸತ್ ಕಲಾಪ ಗೌರವಯುತವಾಗಿ ಸಾಗುತ್ತಿಲ್ಲ. ಇದು ಜನರ ಮೇಲೆ ಪರಿಣಾಮ ಬೀರುತ್ತದೆ. ಸದಸ್ಯರ ವರ್ತನೆಯಿಂದ ತೀವ್ರ ಅಸಮಾಧಾನವಾಗಿದೆ ಎಂದು ನಾಯ್ಡು ಹೇಳಿದರು.

  ಪ್ರತ್ಯೇಕ ತೆಲಂಗಾಣ ರಾಜ್ಯವನ್ನು ರೂಪಿಸಿದ ಬಳಿಕ ಉಂಟಾಗಿರುವ ನಷ್ಟವನ್ನು ಸರಿಪಡಿಸಲು ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಜಾರಿಗೊಳಿಸಬೇಕೆಂದು ಟಿಡಿಪಿ ಮತ್ತು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು. ಈ ವೇಳೆ ಬ್ಯಾನರ್ ಹಿಡಿದುಕೊಂಡು ಸದಸ್ಯರು ಘೋಷಣೆ ಕೂಗತೊಡಗಿದಾಗ ಅವರಿಗೆ ಎಚ್ಚರಿಕೆ ನೀಡಿದ ನಾಯ್ಡು, ಇದು ಮಾರುಕಟ್ಟೆಯಲ್ಲ. ಸಂಸತ್ತು. ನಿಮ್ಮನ್ನು ನೀವೇ ಅಪಮಾನಗೊಳಿಸುತ್ತಿದ್ದೀರಿ. ಸ್ವಲ್ಪ ಗೌರವದಿಂದ ವರ್ತಿಸಿ. ದೇಶದ ಜನತೆ ಗಮನಿಸುತ್ತಿದ್ದಾರೆ. ಸಂಸದ್ ಸದಸ್ಯರಿಗಿರುವ ಘನತೆಯನ್ನು ಮರೆಯದಿರಿ ಎಂದರು. ಆದರೂ ಗದ್ದಲ ಮುಂದುವರಿದಾಗ ಕಲಾಪವನ್ನು ಮುಂದೂಡಿದ ನಾಯ್ಡು, ಸಮಸ್ಯೆ ಪರಿಹರಿಸುವ ಮಾರ್ಗೋಪಾಯದ ಬಗ್ಗೆ ಚರ್ಚಿಸಲು ತಮ್ಮನ್ನು ಚೇಂಬರ್‌ನಲ್ಲಿ ಭೇಟಿ ಮಾಡುವಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X