Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: ‘ಜನಾಂಗೀಯ ನಿರ್ಮೂಲನೆ’...

ಮ್ಯಾನ್ಮಾರ್: ‘ಜನಾಂಗೀಯ ನಿರ್ಮೂಲನೆ’ ಮುಂದುವರಿಕೆ

ರೊಹಿಂಗ್ಯಾ ಶಿಬಿರಗಳಿಗೆ ಭೇಟಿ ನೀಡಿದ ಬಳಿಕ ವಿಶ್ವಸಂಸ್ಥೆ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ6 March 2018 10:08 PM IST
share
ಮ್ಯಾನ್ಮಾರ್: ‘ಜನಾಂಗೀಯ ನಿರ್ಮೂಲನೆ’ ಮುಂದುವರಿಕೆ

ಯಾಂಗನ್ (ಮ್ಯಾನ್ಮಾರ್), ಮಾ. 6: ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ‘ಜನಾಂಗೀಯ ನಿರ್ಮೂಲನೆ’ ಮುಂದುವರಿಯುತ್ತಿದೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಸಹಾಯಕ ಮಹಾಕಾರ್ಯದರ್ಶಿ ಆ್ಯಂಡ್ರೂ ಗಿಲ್ಮರ್ ಮಂಗಳವಾರ ಹೇಳಿದ್ದಾರೆ.

ಕಳೆದ ವರ್ಷದ ಆಗಸ್ಟ್ 25ರಂದು ರೊಹಿಂಗ್ಯಾ ಬಂಡುಕೋರರು ಸೇನಾ ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಬಳಿಕ ನಡೆದ ಸೇನಾ ದಮನ ಕಾರ್ಯಾಚರಣೆಯಲ್ಲಿ ನೂರಾರು ರೊಹಿಂಗ್ಯಾ ಅಲ್ಪಸಂಖ್ಯಾತರು ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಸುಮಾರು 7 ಲಕ್ಷ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಬಾಂಗ್ಲಾದೇಶದ ಕಾಕ್ಸ್‌ಬಝಾರ್ ಜಿಲ್ಲೆಯಲ್ಲಿರುವ ರೊಹಿಂಗ್ಯಾ ನಿರಾಶ್ರಿತ ಶಿಬಿರಗಳಿಗೆ ನಾಲ್ಕು ದಿನಗಳ ಭೇಟಿ ನೀಡಿದ ಬಳಿಕ ಗಿಲ್ಮರ್ ಈ ಹೇಳಿಕೆ ನೀಡಿದ್ದಾರೆ. ತನ್ನ ಪ್ರವಾಸದ ವೇಳೆ ಅವರು ಇತ್ತೀಚೆಗೆ ಮ್ಯಾನ್ಮಾರ್‌ನಿಂದ ಪರಾರಿಯಾಗಿರುವ ನಿರಾಶ್ರಿತರನ್ನು ಭೇಟಿಯಾಗಿದ್ದಾರೆ.

‘‘ಕಾಕ್ಸ್‌ಬಝಾರ್‌ನಲ್ಲಿ ನಾನು ಏನು ನೋಡಿದ್ದೇನೆಯೋ ಮತ್ತು ಕೇಳಿದ್ದೇನೆಯೋ, ಅದರಿಂದ ಇದಕ್ಕಿಂತ ಬೇರೆ ನಿರ್ಧಾರವೊಂದಕ್ಕೆ ಬರಬಹುದು ಎಂದು ನನಗನಿಸುವುದಿಲ್ಲ’’ ಎಂದು ಗಿಲ್ಮರ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಮ್ಯಾನ್ಮಾರ್ ಸೈನಿಕರು ರೊಹಿಂಗ್ಯಾ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ, ಅವರ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ ಮತ್ತು ಮನೆಗಳನ್ನು ಸುಡುತ್ತಿದ್ದಾರೆ ಎಂಬುದಾಗಿ ಬಾಂಗ್ಲಾದೇಶದಲ್ಲಿ ಆಶ್ರಯ ಪಡೆದಿರುವ ರೊಹಿಂಗ್ಯಾ ನಿರಾಶ್ರಿತರು ಆರೋಪಿಸಿದ್ದಾರೆ.

ಬ್ರಿಟನ್ ಸಂಸದರಿಗೆ ಭೇಟಿ ನಿರಾಕರಿಸಿದ ಮ್ಯಾನ್ಮಾರ್

ರೊಹಿಂಗ್ಯಾ ಸ್ಥಿತಿಗತಿ ಅಧ್ಯಯನದ ಉದ್ದೇಶಕ್ಕಾಗಿ ಮ್ಯಾನ್ಮಾರ್‌ಗೆ ಭೇಟಿ ನೀಡಬಯಸಿದ ಸಂಸದೀಯ ಸಮಿತಿಯೊಂದರ ಸದಸ್ಯರಿಗೆ ಮ್ಯಾನ್ಮಾರ್ ವೀಸಾ ನಿರಾಕರಿಸಿದೆ ಎಂದು ಬ್ರಿಟನ್ ಹೇಳಿದೆ.

ಬ್ರಿಟನ್ ಸಂಸತ್ತಿನ ಅಂತಾರಾಷ್ಟ್ರೀಯ ಅಭಿವೃದ್ಧಿ ಸಮಿತಿ (ಐಡಿಸಿ)ಯು ಮ್ಯಾನ್ಮಾರ್ ಮತ್ತು ಲಕ್ಷಾಂತರ ರೊಹಿಂಗ್ಯಾ ನಿರಾಶ್ರಿತರು ಆಶ್ರಯ ಪಡೆದಿರುವ ಬಾಂಗ್ಲಾದೇಶಕ್ಕೆ ಭೇಟಿ ನೀಡಬೇಕಾಗಿತ್ತು.

ನಿರಾಶ್ರಿತರಿಗೆ ಅತಿ ಹೆಚ್ಚು ನೆರವು ನೀಡುವರ ಪೈಕಿ ಬ್ರಿಟನ್ ಒಂದಾಗಿದೆ.

ಮ್ಯಾನ್ಮಾರ್ ರೊಹಿಂಗ್ಯಾರನ್ನು ನಡೆಸಿಕೊಳ್ಳುತ್ತಿರುವ ರೀತಿ, ಅವರ ಸಾಮೂಹಿಕ ವಲಸೆ ಹಾಗೂ ಸುರಕ್ಷಾ ಕ್ರಮವಿಲ್ಲದೆ ಸಾವಿರಾರು ನಿರಾಶ್ರಿತರನ್ನು ವಾಪಸ್ ಮ್ಯಾನ್ಮಾರ್‌ಗೆ ಕಳುಹಿಸಲು ನಡೆಯುತ್ತಿರುವ ಹುನ್ನಾರದ ಬಗ್ಗೆ ಜನವರಿಯಲ್ಲಿ ಪ್ರಕಟಗೊಂಡ ವರದಿಯಲ್ಲಿ ಸಮಿತಿ ತೀವ್ರ ಕಳವಳ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X