Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ: ರಾಷ್ಟ್ರೀಯ ವಿಚಾರ ಸಂಕಿರಣ ಪೂರ್ವ...

ಸೊರಬ: ರಾಷ್ಟ್ರೀಯ ವಿಚಾರ ಸಂಕಿರಣ ಪೂರ್ವ ಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ6 March 2018 10:35 PM IST
share
ಸೊರಬ: ರಾಷ್ಟ್ರೀಯ ವಿಚಾರ ಸಂಕಿರಣ ಪೂರ್ವ ಭಾವಿ ಸಭೆ

ಸೊರಬ,ಮಾ.6: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಚಿಂತಕರ, ಪ್ರಗತಿಪರರ ಹತ್ಯೆಗಳು ನಿರಂತರವಾಗಿ ನಡೆಯುತ್ತಿದ್ದು, ನಾಡಿನ ವೈಚಾರಿಕತೆಯ ಕಗ್ಗೊಲೆಯಾಗುತ್ತಿದೆ ಎಂದು ಸಮಾಜ ಚಿಂತಕ ಹಾಗೂ ಡಿಎಸ್‍ಎಸ್ ತಾಲೂಕು ಸಲಹಾ ಸಮಿತಿ ಸದಸ್ಯ ರಾಜಪ್ಪ ಮಾಸ್ತರ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ ಬೆಂಗಳೂರಿನಲ್ಲಿ ನಡೆಯಲಿರುವ ಎತ್ತ ಸಾಗುತ್ತಿದೆ ಭಾರತ ಎಂಬ ಶೀರ್ಷಿಕೆಯಡಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಪೂರ್ವ ಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯಾ ನಂತರ ಮನು ಧರ್ಮವು ಸಂಘ ಪರಿವಾರ ಮತ್ತು ಬಿಜೆಪಿಯ ರೂಪ ಧರಿಸಿ ದೇಶದ ಸಾಮಾಜಿಕ ಸಾಮರಸ್ಯ ಕದಡುತ್ತಾ, ಸಾಮಾಜಿಕ ನ್ಯಾಯದಂತಹ ಅತ್ಯುನ್ನತ ಪ್ರಗತಿಪರ ಆದರ್ಶಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ. ಕೆಲ ದಿನಗಳ ಹಿಂದೆ  ಆರೆಸ್ಸೆಸ್ ಮೋಹನ್ ಭಾಗವತ್ ಭಾರತದ ಸೈನಿಕರಿಗಿಂತ ಆರೆಸ್ಸೆಸ್ ಪಡೆ ಶ್ರೇಷ್ಠವೆಂದಿರುವುದು ಈ ದೇಶದ ಸಂವಿದಾನ, ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಗಳನ್ನು ಅಣಕಿಸಿ ಅವಮಾನಿಸಿದಂತಾಗಿದೆ. ಮನುಷ್ಯತ್ವ ಮರೆತ ಕಿಡಿಗೇಡಿಗಳು ತಲೆ ಕಡಿಯುವ, ನಾಲಿಗೆ ಕತ್ತರಿಸುವ, ಪಾಕಿಸ್ತಾನಕ್ಕೆ ಓಡಿಸುವ, ಜಾತ್ಯಾತೀತ ವ್ಯಕ್ತಿ ಮತ್ತು ಸಂಘಟನೆಗಳನ್ನು ತುಚ್ಚವಾಗಿ ನಿಂದಿಸುವ ಹೀನ ಕೃತ್ಯಗಳಲ್ಲಿ ತೊಡಗಿದ್ದಾರೆ.

ಇಂತಹ ಸಂದಿಗ್ದ ಸ್ಥಿತಿಯಲ್ಲಿ ಜನಸಾಮಾನ್ಯರು, ಹೋರಾಟಗಾರರು, ಸಾಮಾಜಿಕ ಕಾಳಜಿಯುಳ್ಳವರು, ಸಂವಿದಾನದ ಬಗ್ಗೆ ನಿಷ್ಠೆಯುಳ್ಳವರು, ಅಂಬೇಡ್ಕರ್ ವಾದಿಗಳು, ಭವಿಷ್ಯದ ಬಗ್ಗೆ ಜವಾಬ್ದಾರಿ ಇರುವವರು ಒಗ್ಗೂಡಲೇ ಬೇಕಾದ ಸಂದರ್ಭ ಕೂಡಿ ಬಂದಿದ್ದು. ಇದೇ ಮಾ.10 ಮತ್ತು 11 ರಂದು ಬೆಂಗಳೂರಿನ ಪುರಭವನ(ಟೌನ್‍ಹಾಲ್)ದ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ವೇದಿಕೆಯಲ್ಲಿ ಡಿಎಸ್‍ಎಸ್‍ನ 4 ಪ್ರಮುಖ ಸಂಘಟನೆಗಳ ನೇತೃತ್ವದಲ್ಲಿ ಎತ್ತ ಸಾಗುತ್ತಿದೆ ಭಾರತ ಎಂಬ ಶೀರ್ಷಿಕೆಯಡಿಯಲ್ಲಿ ಬೃಹತ್ ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು ಸಾಹಿತಿ ದೇವನೂರು ಮಹಾದೇವ, ಡಾ.ಸಿದ್ಧಲಿಂಗಯ್ಯ, ಎಲ್.ಹನುಮಂತಯ್ಯ, ಬಹುಭಾಷಾ ಚಿತ್ರನಟ ಪ್ರಕಾಶ್‍ರೈ, ತಮಿಳುನಾಡಿನ ವೀರಮಣಿ, ಪ್ರೊ.ಕಾಂಚಾಐಲಯ್ಯ, ಪ್ರೊ.ರವಿವರ್ಮಕುಮಾರ್, ಅಬ್ದುಲ್ ಸಲಾಂ ಪುತ್ತಿಗೆ, ದಿನೇಶ್ ಅಮಿನ್ ಮಟ್ಟು, ಡಾ. ಮಲ್ಲಿಕಾಘಂಟಿ, ಡಾ.ಬಂಜಗೆರೆ ಜಯಪ್ರಕಾಶ್ ಸೇರಿದಂತೆ ಸಾಹಿತಿಗಳು, ಪ್ರಗತಿಪರ ಚಿಂತರು ಪಾಲ್ಗೊಳ್ಳಲಿದ್ದು, ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಮನವಿ ಮಾಡಿದರು.

ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿ, ತಾಲೂಕು ಸಂಚಾಲಕ ಮಂಜಪ್ಪ ಹಸವಿ, ಸಂಘಟನಾ ಸಂಚಾಲಕ ಸಾಮಣ್ಣ ತುಡಿನೀರು, ರಾಜಪ್ಪ, ಅಬ್ದುಲ್ ರಶೀದ್, ಎ.ಬಿ.ಬಸಪ್ಪ, ಸುನಿಲ್ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X