Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ‘ಪರಿಸರ ಮಿತ್ರ’ ಶಾಲಾ...

ಮಡಿಕೇರಿ: ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ6 March 2018 11:28 PM IST
share
ಮಡಿಕೇರಿ: ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ, ಮಾ.6 : ಪ್ರತಿಯೊಬ್ಬ ಮಾನವ ಜೀವಿಗೆ ಗಾಳಿ, ಬೆಳಕು ಮತ್ತು ನೀರು ಅತಿ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ನೈಸರ್ಗಿಕವಾಗಿ ದೊರೆಯುವ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವತ್ತ ಗಮನಹರಿಸಬೇಕಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿಯಾದ ಸಿದ್ದಲಿಂಗ ಮೂರ್ತಿ ಅವರು ತಿಳಿಸಿದ್ದಾರೆ.  

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಗರದ ಅರಸು ಭವನದಲ್ಲಿ ನಡೆದ 2017-18ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   

ನೀರಿನ ಕೊರತೆ ಮುಂದಿನ ದಿನಗಳಲ್ಲಿ ಬರಬಹುದು. ನೀರಿಲ್ಲ ಅಂದ್ರೆ ಜೀವಿಗಳು ಭೂಮಿ ಮೇಲೆ ಬದುಕಲು ಸಾದ್ಯವಿಲ್ಲ. ಹಿಂದೆ ಕೆರೆ ಕಟ್ಟೆ ನೀರು ಶುದ್ಧವಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆರೆ-ಕಟ್ಟೆ ನೀರು ಕಶ್ಮಲಗೊಂಡಿದೆ. ಭೂಮಿ ಮೇಲೆ ಶೇ 75 ಭಾಗ ನೀರಿದೆ. ಕುಡಿಯಲು ಯೋಗ್ಯವಾದ ನೀರು ಶೇ 20ರಷ್ಟು ಮಾತ್ರ. ಅದನ್ನು ಸರಿಯಾಗಿ ಬಳಕೆ ಮಾಡಿ ಎಂದು ಜಿ.ಪಂ ಉಪ ಕಾರ್ಯದರ್ಶಿಯಾದ ಸಿದ್ದಲಿಂಗಸ್ವಾಮಿ ಅವರು ತಿಳಿಸಿದರು.

ಶಾಲಾ ಮಕ್ಕಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪರಿಸರ ಕಾಳಜಿ ಬೆಳೆಸಲು ಸಹಕಾರಿಯಾಗಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರ ಕಲ್ಪನೆಯೊಂದಿಗೆ ಜೀವಜಲ ಹಾಗೂ ಜೀವ ವೈವಿಧ್ಯತೆ ಬಗ್ಗೆ ಹೆಚ್ಚಿನ ಜ್ಞಾನ ತಿಳಿದುಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಭೂಮಿಯ ತಾಪಮಾನದ ಹೆಚ್ಚಳದಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜಾಗೃತರಾಗಬೇಕಿದೆ. ಈ ದಿಸೆಯಲ್ಲಿ ಮಕ್ಕಳು ನೀರಿನ ಸಂರಕ್ಷಣೆ, ಮಳೆನೀರಿನ ಸಂರಕ್ಷಣೆ, ಅಂತರ್ಜಲ ಸಂರಕ್ಷಣೆ, ತ್ಯಾಜ್ಯ ವಿಲೇವಾರಿ, ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಅರಣ್ಯ ರಕ್ಷಣೆ ಮಾಡುವುದನ್ನು ಶಿಕ್ಷಕರು ವಿದ್ಯಾರ್ಥಿಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಬೇಕು. ಮರ ಗಿಡಗಳನ್ನು ಹೆಚ್ಚಾಗಿ ಬೆಳಸಿಬೇಕು ಮತ್ತು ಕಾಡನ್ನು ಬೆಳಸಿ ನಾಡನ್ನು ಉಳಿಸಬೇಕು ಕಾರ್ಖಾನೆಗಳಿಂದ ನೀರು ಮಲಿನಗೊಂಡಿದೆ ಹಾಗೆಯೇ ಮಾನವ ಇಂದು ರಸಾಯನಿಕ ಗೊಬ್ಬರ ಬಳಕೆ ಮಾಡುತ್ತಿದ್ದು, ಭೂಮಿಯು ತನ್ನ ಫಲವತ್ತತೆಯನ್ನು ಕಳೆದು ಕೊಂಡಿದೆ. ಜಾನುವಾರು ಗೊಬ್ಬರ ಬಳಸುವಂತಾಗಬೇಕು ಎಂದರು. ವಾಯುಮಾಲಿನ್ಯದಿಂದ ಓಝೋನ್ ಪದರ ನಾಶವಾಗುತ್ತಿದೆ ಅದಕ್ಕೆ ಕಾರಣ ಮಾನವ. ಓಝೋನ್ ಪದರ ರಂದ್ರದ ಮೂಲಕ ಸೂರ್ಯನ ಕಿರಣಗಳು ಭೂಮಿಗೆ ನೆರವಾಗಿ ಬರುವುದರಿಂದ ಈಡಿ ಮನು ಕೂಲವೇ ನಾಶವಾಗುತ್ತೆ ಎಂದು ಜಿ.ಪಂ ಉಪ ಕಾರ್ಯದರ್ಶಿಯಾದ ಸಿದ್ದಲಿಂಗಸ್ವಾಮಿ ಅವರು ತಿಳಿಸಿದರು. 

ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿಯಾದ ಎ.ಉದಯಕುಮಾರ್‘ ಅವರು ಪರಿಸರ ಮಿತ್ರ’ ಶಾಲೆಗಳ ಪರಿಸರ ಚಟುವಟಿಕೆಗಳ ಕುರಿತಂತೆ ಹೊರತಂದಿರುವ ‘ಹಸಿರು-ನನಸಾದ ಕನಸು’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.   

ಹಿಂದೆ ನಾವು ಸಾಕಷ್ಟು ನೀರನ್ನು ವ್ಯರ್ಥ ಮಾಡಿದ್ದೇವು. ಅದರ ಮೌಲ್ಯ ಗೊತ್ತಾಗೋದು ಹಣ ಕೊಟ್ಟು ನೀರು ಕುಡಿಯುವಾಗ. ಬಣ್ಣ ರಹಿತ ಗಣೇಶನನ್ನು ಬಳಸಿ ಪರಿಸರವನ್ನು ಉಳಿಸುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಹಾಗೆಯೇ ಪರಿಸರ ರಕ್ಷಣೆ ಕುರಿತಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಮನದಟ್ಟುಮಾಡಬೇಕು ಹಾಗೆಯೇ ಶಾಲಾ ಪರಿಸರ, ನೀರು, ತ್ಯಾಜ್ಯ ನಿರ್ವಹಣೆ, ಆರೋಗ್ಯ ಮತ್ತು ನೈರ್ಮಲ್ಯ ಮುಂತಾದ ವಿಷಯಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ಮಕ್ಕಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.     

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಯೋಜಕರು ಮತ್ತು ಕಾರ್ಯದರ್ಶಿಯಾದ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪಶ್ಚಿಮ ಘಟ್ಟ ಅವನತಿಯಾಗುತ್ತಿದೆ. ಕೊಡಗಿನ ಜೀವ ನದಿಯು ಸಹ ಕಲುಸಿತಗೊಂಡು ಅಂತರ್ಜಲ ಬರಿದಾಗುತ್ತಿದೆ ಶಾಲೆಯಲ್ಲಿ ಶಿಕ್ಷಕರು  ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಗಿಡಮರ ಬೆಳಸುವುದರ ಬಗ್ಗೆ ತಿಳಿಸಬೇಕು ಎಂದು ಅವರು ತಿಳಿಸಿದರು. 

ಮಕ್ಕಳಿಗೆ ಪರಿಸರ ಅಧ್ಯಯನ ಮುಖ್ಯ ಹಸಿರು ಪರಿಸರಕ್ಕೆ ಸ್ಫೂರ್ತಿಯಾದ ಸಾಲುಮರದ ತಿಮ್ಮಕ್ಕ ಮತ್ತು ಸುಂದರ್‍ಲಾಲ್ ಬಹುಗುಣ ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಮಕ್ಕಳು ಭವಿಷ್ಯದ ವಿಜ್ಞಾನಿಗಳು ಅರಣ್ಯ ನಾಶದಿಂದ ಭೂಮಿ ತಾಪಮಾನ ಹೆಚ್ಚುತ್ತಿದ್ದು, ಅದನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಟಿ.ಜಿ.ಪ್ರೇಮಕುಮಾರ್ ಅವರು ಹೇಳಿದರು. 

ಪರಿಸರ ಅಧಿಕಾರಿಗಳಾದ ಜಿ.ಆರ್.ಗಣೇಶ್ ಪ್ರಾಸ್ತವಿಕವಾಗಿ ಮಾತನಾಡಿ, ಹವಾಮಾನ ವೈಪರಿತ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹಾಗೆಯೇ ಅತಿಯಾದ ಉಷ್ಣಾಂಶ ಪರಿಸರದಲ್ಲಿ ಏರುಪೇರಾಗುತ್ತಿದೆ. ಮಕ್ಕಳ ಮೂಲಕ ಪರಿಸರ ಚಟುವಟಿಕೆ ಪರಿಸರ ಸಂರಕ್ಷಣೆಯ ಕಲ್ಪನೆ ಮೂಡಿಸಬೇಕು. ಎಂದು ತಿಳಿಸಿದರು.

ಮಳೆ ನೀರನ್ನು ಕೊಯ್ಲು ಮೂಲಕ ಇಂಗು ಗುಂಡಿಗೆ ಸೇರಬೇಕು. ಇದರಿಂದ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ. ಜನರಲ್ಲಿ ಮಣ್ಣಿನ ಫಲವತತ್ತೆ ಬಗ್ಗೆ ವಿಚಾರ ವಿನಿಮಿಯವಾಗಬೇಕು. ಪರಿಸರ ಮಿತ್ರ ಪ್ರಶಸ್ತಿಗೆ 172 ಶಾಲೆಗಳು ಭಾಗವಹಿಸಿದ್ದವು ಅದರಲ್ಲಿ 21 ಶಾಲೆಗಳನ್ನು ಗುರುತಿಸಲಾಗಿದೆ ಪ್ರಥಮ ಸ್ಥಾನ ಪಾರಾಣೆ ಪ್ರೌಢಶಾಲೆಗೆ ಪರಿಸರ ಮಿತ್ರ ಪ್ರಶಸ್ತಿ, ಹಸಿರು ಶಾಲಾ ಪ್ರಶಸ್ತಿ 10 ಶಾಲೆಗೆ , ಹಳದಿ ಶಾಲಾ ಪ್ರಶಸ್ತಿ 10 ಶಾಲೆಗೆ ನೀಡಲಾಗಿದೆ ಎಂದು ಪರಿಸರ ಅಧಿಕಾರಿಗಳಾದ ಜಿ.ಆರ್.ಗಣೇಶನ್ ತಿಳಿಸಿದರು.

ಡಿಡಿಪಿಐ ಮಂಜುಳಾ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಪ್ರತಿಯೊಬ್ಬರೂ ಪರಿಸರ ಕಾಳಜಿಯನ್ನು ಕಾಯ್ದುಕೊಂಡು ಪರಿಸರ ಸಮತೋಲನ ಕಾಪಾಡಬೇಕಾದ ಹೊಣಗಾರಿಕೆ ಎಲ್ಲರ ಮೇಲಿದೆ. ಶಾಲಾ ಮಕ್ಕಳಲ್ಲಿ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿರುವ ಈ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಈ ಬಾರಿ ಜಿಲ್ಲೆಯ 172 ಶಾಲೆಗಳು ಪರಿಸರ ಮಿತ್ರ ಶಾಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿರುವುದು ಹೆಮ್ಮೆಯ ಸಂಗತಿ. ಮಾನವ ಸಂಕುಲದ ಜತೆಗೆ ಇಡೀ ಜೀವಿ ಸಂಕುಲದ ಉಳಿವಿಗೆ ನಾವು ಪ್ರಯತ್ನಿಸಬೇಕು. ಈ ದಿಸೆಯಲ್ಲಿ ಕಾಡಿನ ರಕ್ಷಣೆ ಮೂಲಕ ಪರಿಸರ ರಕ್ಷಿಸಬೇಕಿದೆ ಎಂದು ಅವರು ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಪ್ರಾಂಶುಪಾಲ ವಾಲ್ಟರ್ ಎಚ್.ಡಿ’ಮೆಲ್ಲೊ ಮಾತನಾಡಿ, ಪರಿಸರ ಮಿತ್ರ ಶಾಲಾ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿ ಪರಿಸರ ಉಳಿಸಿ ಬೆಳೆಸುವ ವೈವಿಧ್ಯಮಯ ಕಾರ್ಯಕ್ರಮವಾಗಿದೆ. ಇಂದು ಪರಿಸರದ ವಿಷಯಗಳು ಅತ್ಯಂತ ಮಹತ್ವ ಪಡೆಯುತ್ತಿವೆ. ನಾವು ಮಕ್ಕಳಲ್ಲಿ ಗಿಡ ನೆಟ್ಟು, ಅವುಗಳನ್ನು ಪೋಷಿಸಿ ಮರಗಳಾಗುವಂತೆ ಪರಿಸರದ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.     

ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ, ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ.ಸುರೇಶ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಎನ್.ವೆಂಕಟನಾಯಕ್, ಉಪ ಪರಿಸರ ಅಧಿಕಾರಿ ಡಾ.ಎಂ.ಕೆ.ಸುಧಾ, ಸಹಾಯಕ ಪರಿಸರ ಅಧಿಕಾರಿ ಉಮ್ಮೇ ಹಮೀದ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಪಾರಾಣೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಶಿಕ್ಷಕರಾದ ಸಿ.ಎಸ್.ಸುರೇಶ್ ನಿರೂಪಣೆ ಮಾಡಿದರು, ಪಿ.ಎಸ್.ರವಿಕೃಷ್ಣ ಸ್ವಾಗತಿಸಿದರು. ಜಿ.ಶ್ರೀಹರ್ಷ ವಂದಿಸಿದರು. ಶಿಕ್ಷಕಿ ವೈ.ಪ್ರಮೀಳಾಕುಮಾರಿ ಪ್ರಾರ್ಥಿಸಿದರು. ವಿವಿಧ ಶಾಲಾ ಮಕ್ಕಳು ಪರಿಸರ ಗೀತೆ ಹಾಡಿದರು. ಮತ್ತು ಇತರರು ಹಾಜರಿದ್ದರು. 

ಉತ್ತಮ ಶಾಲಾ ಪರಿಸರ ಚಟುವಟಿಕೆಗಳನ್ನು ಹೊಂದಿರುವ ಮಡಿಕೇರಿ ತಾಲ್ಲೂಕಿನ ಪಾರಾಣೆ ಪ್ರೌಢಶಾಲೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನೀಡಲ್ಪಡುವ ಈ ಸಾಲಿನ ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಯನ್ನು  ಪಡೆದು ಕೊಂಡಿದೆ, ಈ ಶಾಲೆಗೆ ಪ್ರಶಸ್ತಿಯೊಂದಿಗೆ  ರೂ. 30 ಸಾವಿರ ನಗದು ಬಹುಮಾನ ಹಾಗೂ ಪಾರಿತೋಷಕ ವಿತರಿಸಲಾಯಿತು.

ಈ ಸಂದರ್ಭ ಶಾಲೆಯಲ್ಲಿ ಉತ್ತಮ ಪರಿಸರ ಚಟುವಟಿಕೆ ಕೈಗೊಂಡ 10 ಶಾಲೆಗಳಿಗೆ ಹಸಿರು ಶಾಲಾ ಪ್ರಶಸ್ತಿಯೊಂದಿಗೆ ತಲಾ ರೂ. 5 ಸಾವಿರ ನಗದು ಬಹುಮಾನ ಹಾಗೂ 10 ಶಾಲೆಗಳಿಗೆ ಹಳದಿ ಶಾಲಾ ಪ್ರಶಸ್ತಿಯೊಂದಿಗೆ ರೂ. 4 ಸಾವಿರ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X