Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಸತತ...

ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಸತತ ಜಯ

ಮಹಿಳಾ ಹಾಕಿ

ವಾರ್ತಾಭಾರತಿವಾರ್ತಾಭಾರತಿ6 March 2018 11:39 PM IST
share
ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಸತತ ಜಯ

ಇಂಚೋನ್(ದ.ಕೊರಿಯಾ), ಮಾ.6: ಭಾರತದ ಮಹಿಳಾ ಹಾಕಿ ತಂಡ ದಕ್ಷಿಣ ಕೊರಿಯಾ ಪ್ರವಾಸದಲ್ಲಿ ಸತತ ಎರಡನೇ ಜಯ ದಾಖಲಿಸಿದೆ.

 ಭಾರತ ಮಂಗಳವಾರ ಜಿನ್‌ಚುನ್ ನ್ಯಾಶನಲ್ ಅಥ್ಲೆಟಿಕ್ ಸೆಂಟರ್‌ನಲ್ಲಿ ನಡೆದ ದಕ್ಷಿಣ ಕೊರಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ 3-2 ಗೋಲುಗಳ ಅಂತರದಿಂದ ರೋಚಕ ಜಯ ದಾಖಲಿಸಿದೆ.

ಭಾರತದ ಪರ ಪೂನಂ ರಾಣಿ(6ನೇ ನಿಮಿಷ), ನಾಯಕಿ ರಾಣಿ(27ನೇ ನಿಮಿಷ)ಹಾಗೂ ಗುರ್ಜಿತ್ ಕೌರ್(32ನೇ ನಿಮಿಷ) ತಲಾ ಒಂದು ಗೋಲು ಬಾರಿಸಿದರು. ದ.ಕೊರಿಯಾದ ಪರ ಯುರಿಮ್ ಲೀ(10ನೇ ನಿಮಿಷ) ಹಾಗೂ ಜುಂಗ್‌ಯೆಯುನ್ ಸಿಯೊ(31ನೇ ನಿಮಿಷ)ತಲಾ ಒಂದು ಗೋಲು ಬಾರಿಸಿದ್ದಾರೆ.

 ಸೋಮವಾರ ನಡೆದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದ ಭಾರತದ ಮಹಿಳಾ ತಂಡ ಮೊದಲ ಕ್ವಾರ್ಟರ್‌ನಲ್ಲಿ ಆಕ್ರಮಣಕಾರಿ ಆರಂಭ ಪಡೆದಿತ್ತು. ಪೂನಂ ರಾಣಿ ಆರನೇ ನಿಮಿಷದಲ್ಲಿ ಗೋಲು ಬಾರಿಸಿ ತಂಡಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು.

ದಕ್ಷಿಣ ಕೊರಿಯಾ ಮೊದಲ ಕ್ವಾರ್ಟರ್‌ನಲ್ಲಿ ಎರಡು ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿದ್ದರೂ ಗೋಲಾಗಿ ಪರಿವರ್ತಿಸುವಲ್ಲಿ ವಿಫಲವಾಯಿತು. 10ನೇ ನಿಮಿಷದಲ್ಲಿ ಲೀ ಪೆನಾಲ್ಟಿ ಕಾರ್ನರ್‌ನ್ನು ಗೋಲಾಗಿ ಪರಿವರ್ತಿಸಿ ಸ್ಕೋರನ್ನು 1-1ರಿಂದ ಸಮಬಲಗೊಳಿಸಿದರು.

2ನೇ ಕ್ವಾರ್ಟರ್‌ನಲ್ಲಿ ಸತತ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದ ದಕ್ಷಿಣ ಕೊರಿಯಾ ತಂಡ ಭಾರತಕ್ಕೆ ಒತ್ತಡ ಹೇರಿತು. ಆದರೆ ಪ್ರವಾಸಿ ತಂಡ ಒತ್ತಡವನ್ನು ಚೆನ್ನಾಗಿ ನಿಭಾಯಿಸಿತು. ಯುವ ಗೋಲ್‌ಕೀಪರ್ ಸ್ವಾತಿ ಆತಿಥೇಯರಿಗೆ ಗೋಲು ಬಾರಿಸದಂತೆ ತಡೆಯಾದರು.

27ನೇ ನಿಮಿಷದಲ್ಲಿ ಗೋಲು ಬಾರಿಸಿದ ನಾಯಕಿ ರಾಣಿ ಭಾರತಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟರು. ಮೊದಲಾರ್ಧದ ಅಂತ್ಯಕ್ಕೆ ಭಾರತ ಒಂದು ಗೋಲಿನ ಮುನ್ನಡೆಯಲ್ಲಿತ್ತು.

 ಮೂರನೇ ಕ್ವಾರ್ಟರ್‌ನ ಆರಂಭದಲ್ಲಿ ಭಾರತ ಗೋಲು ಬಿಟ್ಟುಕೊಟ್ಟಿತು. 31ನೇ ನಿಮಿಷದಲ್ಲಿ ದಕ್ಷಿಣ ಕೊರಿಯಾದ ಸಿಯೋ ಅವರು ಫೀಲ್ಡ್ ಗೋಲು ದಾಖಲಿಸಿ ಸ್ಕೋರನ್ನು 2-2 ರಿಂದ ಸಮಬಲಗೊಳಿಸಿದರು.

ಭಾರತದ ಫಾರ್ವರ್ಡ್‌ಗಳು ಉತ್ತಮವಾದ ಪಾಸ್ ನೆರವಿನಿಂದ 32ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದರು. ಗುರ್ಜಿತ್ ಕೌರ್ ಇದನ್ನು ಗೋಲಾಗಿ ಪರಿವರ್ತಿಸಿ ಭಾರತಕ್ಕೆ 3-2 ಮುನ್ನಡೆ ಒದಗಿಸಿಕೊಟ್ಟರು. ಆತಿಥೇಯ ತಂಡ 34ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಗೋಲ್‌ಕೀಪರ್ ಸ್ವಾತಿ ಎದುರಾಳಿ ತಂಡಕ್ಕೆ ಗೋಲು ನಿರಾಕರಿಸಿದರು.

ಕೊನೆಯ ಅವಧಿಯ ಪಂದ್ಯದಲ್ಲಿ ದಕ್ಷಿಣ ಕೊರಿಯ ಸಮಬಲದ ಗೋಲು ದಾಖಲಿಸಿ ತೀವ್ರ ಪ್ರಯತ್ನ ನಡೆಸಿತು. ಪ್ರವಾಸಿ ಭಾರತ ಕೊನೆಯ ತನಕ ಮುನ್ನಡೆ ಕಾಯ್ದುಕೊಳ್ಳಲು ಯಶಸ್ವಿಯಾಯಿತು. ಅಂತಿಮ ಕೆಲವು ನಿಮಿಷ ಆತಿಥೇಯರು 11 ಔಟ್ ಫೀಲ್ಡ್ ಆಟಗಾರ್ತಿಯರೊಂದಿಗೆ ಆಡಿದರು. ಆದರೆ, ಭಾರತ ಸತತ ಎರಡನೇ ಜಯ ಸಾಧಿಸಲು ಯಶಸ್ವಿಯಾಯಿತು. ಈ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X