Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ...

ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್: ಮಧುಸೂದನ್ ಮಿಸ್ತ್ರಿ

ವಾರ್ತಾಭಾರತಿವಾರ್ತಾಭಾರತಿ8 March 2018 8:25 PM IST
share
ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್: ಮಧುಸೂದನ್ ಮಿಸ್ತ್ರಿ

ಬೆಂಗಳೂರು, ಮಾ.8: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಕಾಂಗ್ರೆಸ್ ಚುನಾವಣಾ ಪರಿಶೀಲನಾ ಸಮಿತಿ(ಸ್ಕ್ರೀನಿಂಗ್ ಕಮಿಟಿ) ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ತಿಳಿಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಿರುವ ಆಕಾಂಕ್ಷಿಗಳ ಸಭೆಯನ್ನು ಕರೆದು, ಎಲ್ಲರಿಂದಲೂ ಮಾಹಿತಿಗಳನ್ನು ಪಡೆದಿದ್ದೇವೆ ಎಂದರು.

ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುವುದು. ಒಂದಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಒಬ್ಬರೆ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ. ಗೆಲ್ಲುವ ಸಾಮರ್ಥ್ಯವಿದ್ದರೆ ಒಂದು ಕುಟುಂಬದಿಂದ ಎರಡು ಟಿಕೆಟ್‌ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಆಸಕ್ತರಿಂದ ಅರ್ಜಿಗಳನ್ನು ಪಡೆದುಕೊಳ್ಳುತ್ತೇವೆ. ಅವುಗಳನ್ನು ಪರಿಶೀಲನೆ ಮಾಡಿ, ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಹೈಕಮಾಂಡ್ ಮಟ್ಟದಲ್ಲೆ ತೀರ್ಮಾನವಾಗಲಿದೆ ಎಂದು ಮಧುಸೂದನ್ ಮಿಸ್ತ್ರಿ ಹೇಳಿದರು.

ಆಕಾಂಕ್ಷಿಗಳ ಬೆವರಿಳಿಸಿದ ಮಿಸ್ತ್ರಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ತಮ್ಮ ಸರಣಿ ಸವಾಲುಗಳ ಮೂಲಕ ಮಧುಸೂದನ್ ಮಿಸ್ತ್ರಿ ಬೆವರಿಳಿಸಿದ್ದಾರೆ. ಪ್ರಮುಖವಾಗಿ ಆಕಾಂಕ್ಷಿಗಳಿಗೆ ನೀವು ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ? ನಿಮ್ಮ ಕ್ಷೇತ್ರದ ಮತದಾರರ ಸಂಖ್ಯೆ ಎಷ್ಟು? ನಿಮ್ಮ ಕ್ಷೇತ್ರದ ವ್ಯಾಪ್ತಿಗೆ ಎಷ್ಟು ವಾರ್ಡುಗಳು ಬರುತ್ತವೆ? ಅವುಗಳ ಪೈಕಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರ ಸಂಖ್ಯೆ ಎಷ್ಟು? ನೀವು ಆಕಾಂಕ್ಷಿಯಾಗಿರುವ ಕ್ಷೇತ್ರದಲ್ಲಿ ಹಾಲಿ ಇರುವ ಶಾಸಕರ ಬಗ್ಗೆ ಜನರ ಅಭಿಪ್ರಾಯವೇನು? ಹಾಲಿ ಶಾಸಕನ ಬಗ್ಗೆ ನಿಮ್ಮ ಅಭಿಪ್ರಾಯವೇನು? ಪ್ರತಿಪಕ್ಷದ ಶಾಸಕರಿರುವ ಕ್ಷೇತ್ರದಲ್ಲಿ ಅವರನ್ನು ಸೋಲಿಸಲು ನಿಮ್ಮ ಬಳಿ ಇರುವ ಅಸ್ತ್ರಗಳೇನು? ಕ್ಷೇತ್ರದಲ್ಲಿನ ಜಾತಿವಾರು ಸಮೀಕರಣ ಹೇಗಿದೆ? ಯಾವ ಜಾತಿಯ ಎಷ್ಟು ಮತದಾರರಿದ್ದಾರೆ? ಕ್ಷೇತ್ರದಲ್ಲಿ ನಿರ್ಣಾಯಕವಾಗಿರುವ ಜಾತಿ ಯಾವುದು?

ಪ್ರತಿಪಕ್ಷಗಳ ಶಾಸಕರು ಪ್ರತಿನಿಧಿಸುತ್ತಿರುವ ಕ್ಷೇತ್ರದ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಪಕ್ಷದಿಂದ ನೀವೇ ಉತ್ತಮ ಅಭ್ಯರ್ಥಿ ಹೇಗೇ? ಈ ಹಿಂದೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸೋಲಲು ಕಾರಣವೇನು? ಎಷ್ಟು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ? ಸೇರಿದಂತೆ ಸಾಲು ಸಾಲು ಪ್ರಶ್ನೆಗಳನ್ನು ತನಿಖಾ ಸಂಸ್ಥೆಗಳು ನಡೆಸುವ ವಿಚಾರಣೆ ಮಾದರಿಯಲ್ಲಿ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಸ್ಕ್ರೀನಿಂಗ್ ಕಮಿಟಿ ಸದಸ್ಯರಾದ ಸಾಹು, ಗೌರವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X