Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಸಿಎಂಆರ್‌ನಿಂದ ಶಿಶು ಮರಣ, ತಾಯಿ ಮರಣ...

ಐಸಿಎಂಆರ್‌ನಿಂದ ಶಿಶು ಮರಣ, ತಾಯಿ ಮರಣ ತಡೆಗೆ ಕ್ರಮ: ಡಾ.ಅಂಜು ಸಿನ್ಹಾ

ವಿಶ್ವ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 March 2018 10:11 PM IST
share
ಐಸಿಎಂಆರ್‌ನಿಂದ ಶಿಶು ಮರಣ, ತಾಯಿ ಮರಣ ತಡೆಗೆ ಕ್ರಮ: ಡಾ.ಅಂಜು ಸಿನ್ಹಾ

ಮಣಿಪಾಲ, ಮಾ.8: ಹೊಸದಿಲ್ಲಿಯ ಭಾರತೀಯ ವೈದ್ಯಕೀಯ ಸಂಶೋಧನಾ ಕೇಂದ್ರ (ಐಸಿಎಂಆರ್) ಭಾರತೀಯ ಮಹಿಳೆಯರ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಮಹಿಳೆಯರ ಆರೋಗ್ಯ ಸುಧಾರಣೆಯ ಕುರಿತಂತೆ ಹಲವು ಕ್ರಮಗಳನ್ನು ಕೈಗೊಳ್ಳುತಿದ್ದು, ಈಗ ಆತಂಕಕಾರಿ ಮಟ್ಟದಲ್ಲಿರುವ ತಾಯಿ ಮರಣ ಹಾಗೂ ಶಿಶು ಮರಣದ ತಡೆಗೂ ವಿಶೇಷ ಕ್ರಮಗಳನ್ನು ಅನುಷ್ಠಾನ ಗೊಳಿಸುತಿದೆ ಎಂದು ಐಸಿಎಂಆರ್‌ನ ಉಪ ಮಹಾ ನಿರ್ದೇಶಕಿ ಡಾ.ಅಂಜು ಸಿನ್ಹಾ ಹೇಳಿದ್ದಾರೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ದಿನವಿಡೀ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಡಾ.ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಈ ನಿಟ್ಟಿನಲ್ಲಿ ಮಹಿಳೆಯರಿಗೆ ಅರಿವು ಮೂಡಿಸಲು ಹಾಗೂ ತರಬೇತಿ ನೀಡಲು ಐಸಿಎಂಆರ್ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರಾಜಸ್ತಾನ, ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿ ಯಶಸ್ಸು ಕಾಣಲಾಗಿದೆ ಎಂದು ಡಾ.ಸಿನ್ಹಾ ನುಡಿದರು.

ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಕಾರ್ಯಕ್ಕೆ ಆದ್ಯತೆಯನ್ನು ನೀಡಲಾಗುತ್ತಿದೆ. ಮಹಿಳೆಯರಿಗೆ ರಾಜಕೀಯವಾಗಿ ಹಾಗೂ ಆರ್ಥಿಕವಾಗಿಯೂ ಸಮಾನತೆ ದೊರೆಯಬೇಕಾಗಿದೆ. ಆಗ ಮಾತ್ರ ದೇಶದ ಮಹಿಳೆಯರ ಸಬಲೀಕರಣ ಪ್ರಕ್ರಿಯೆ ಒಂದು ಹಂತದ ಯಶಸ್ಸನ್ನು ಕಾಣಲು ಸಾಧ್ಯವಾಗಲಿದೆ. ಈ ದಿಶೆಯಲ್ಲಿ 2030 ಮಿಷನ್ ಗುರಿಯೊಂದಿಗೆ ಕಾರ್ಯಯೋಜನೆಯನ್ನು ರೂಪಿಸಲಾಗಿದೆ ಎಂದರು.

ಆದರೆ ಭಾರತದಂಥ ವೈವಿಧ್ಯಮಯ, ವಿಶಾಲ ದೇಶದಲ್ಲಿ ಇದು ಸುಲಭ ಸಾಧ್ಯವಿಲ್ಲ. ಈಗಲೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ.55 ಆಗಿದೆ. ಈಗಲೂ ಇಲ್ಲಿ 18 ವರ್ಷದೊಳಗಿನ ಹೆಣ್ಣು ಮಕ್ಕಳ ವಿವಾಹ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಶೇ.47.4ರಷ್ಟು ಬಾಲ್ಯವಿವಾಹ ನಡೆಯುತ್ತಿದೆ. ಕಚೇರಿಗಳಲ್ಲಿ ಈಗಲೂ ದೊಡ್ಡ ಮಟ್ಟದಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಕಾನೂನು ಈಗಲೂ ಮಹಿಳೆಯರ ಕುರಿತಂತೆ ತಾರತಮ್ಯ ಧೋರಣೆಯನ್ನು ಹೊಂದಿದೆ ಎಂದರು.

ರಾಜ್ಯಸ್ಥಾನದಲ್ಲಿ ಈಗಲೂ ದೊಡ್ಡ ಮಟ್ಟದಲ್ಲಿ ಬಾಲ್ಯವಿವಾಹಗಳು ನಡೆಯುತ್ತಿವೆ. ಇವುಗಳನ್ನೆಲ್ಲವನ್ನೂ ಮೀರಿ ಕೇಂದ್ರ ಸರಕಾರ ಹೆಣ್ಣು ಮಕ್ಕಳ ಕುರಿತಂತೆ ಹಲವು ಕಾರ್ಯಕ್ರಮ, ಯೋಜನೆಗಳನ್ನು ರೂಪಿಸುತ್ತಿದೆ. ಭೇಟಿ ಬಚಾವೊ- ಭೇಟಿ ಪಡಾವೊ, ಸುಕನ್ಯಾ ಸಮೃದ್ಧ ಯೋಜನಾ, ಉಜ್ವಲ, ಮುದ್ರಾ ಮುಂತಾದ ಯೋಜನೆಗಳು ಹೆಣ್ಣು ಮಕ್ಕಳನ್ನೇ ದೃಷ್ಟಿಯಲ್ಲಿಟ್ಟು ಜಾರಿ ಗೊಳಿಸಲಾಗಿದೆ ಎಂದು ಡಾ.ಅಂಜು ಸಿನ್ಹಾ ನುಡಿದರು.

ಶಿಶು ಮರಣ ಹಾಗೂ ತಾಯಿ ಮರಣದಲ್ಲಿ ಭಾರತ ಈಗಲೂ ವಿಶ್ವದಲ್ಲಿ ಮೊದಲೆರಡು ಸ್ಥಾನದಲ್ಲಿದೆ. ಪ್ರತಿ ಗಂಟೆಗೆ ಐದು ತಾಯಿ ಮರಣ ಇಲ್ಲಿ ಸಂಭವಿಸುತ್ತಿದೆ.ಇದಕ್ಕೆ ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಸರಿಯಾದ ತಿಳುವಳಿಕೆ, ಮಾಹಿತಿ ಇಲ್ಲದಿರುವುದೇ ಕಾರಣವಾಗಿದೆ. ಹಳ್ಳಿಗಳಲ್ಲಿ ಸುರಕ್ಷಿತ ತಾಯ್ತನವನ್ನು ಈಗಲೂ ಪಾಲಿಸಲಾಗುತ್ತಿಲ್ಲ.ಆರೋಗ್ಯ ಹಾಗೂ ವೈದ್ಯಕೀಯ ಸೌಲಭ್ಯ ಈಗಲೂ ತೀರಾ ಹಿಂದಿದೆ. ಕಳಪೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಕೌಶಲ್ಯ ರಹಿತ ಹೆರಿಗೆ ವಿಧಾನ ತಾಯಿ-ಮಗುವಿನ ಸಾವಿಗೆ ಪ್ರಧಾನ ಕಾರಣಗಳಾಗಿರುತ್ತವೆ ಎಂದರು.

ಇದಕ್ಕಾಗಿ ಉತ್ತರ ಭಾರತದ ಆಯ್ದ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರ ರೀತಿಯಲ್ಲಿ ಆರೋಗ್ಯ ಕಾರ್ಯಕರ್ತೆಯರನ್ನು ತರಬೇತಿ ನೀಡಿ ನೇಮಿಸಲಾಗುತ್ತಿದೆ. ಇದರಿಂದ ಪರಿಸ್ಥಿತಿಯಲ್ಲಿ ದೊಡ್ಡಮಟ್ಟದ ಬದಲಾವಣೆ ಕಾಣಿಸಿಕೊಂಡಿದೆ ಎಂದು ಡಾ.ಸಿನ್ಹಾ ಹೇಳಿದರು.

ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಮಹಿಳೆಯರಿಗಾಗಿ ಮಾಹೆಯ ಪ್ರತ್ಯೇಕ ವೆಬ್‌ಸೈಟ್‌ನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಹೆ ಪ್ರೊ ವೈಸ್‌ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯ ನಿರ್ದೇಶಕಿ ಡಾ.ಪಾರ್ವತಿ ಭಟ್, ಇಂದಿರಾ ಬಲ್ಲಾಳ್, ಡಾ.ಸಂಧ್ಯಾ ನಂಬಿಯಾರ್, ಡಾ.ರೇವತಿ ಕಸ್ತೂರಿ, ಡಾ.ಗಾಯತ್ರಿ ಪ್ರಭು ಮುಂತಾದವರು ಉಪಸ್ಥಿತರಿದ್ದರು.ಡಾ.ಅನಿತಾ ಎಸ್.ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X